ಮೈಸೂರು

ಪರಮೋತ್ಸವ | ಹೈಕಮಾಂಡ್‌ಗೆ ಎಚ್ಚರಿಕೆ ಸಂದೇಶ ರವಾನಿಸಿದ ಗೃಹ ಸಚಿವ

ಮೈಸೂರು : ಸಿಎಂ ಸಿದ್ದರಾಮಯ್ಯ ಅವರ ಹುಟ್ಟುಹಬ್ಬ ಹಿನ್ನಲೆ 2022ರಲ್ಲಿ ದಾವಣಗೆರೆಯಲ್ಲಿ ಸಿದ್ದರಾಮೋತ್ಸವ ಕಾರ್ಯಕ್ರಮ ನಡೆದಿತ್ತು. ಇದೀಗ ಅದೇ ರೀತಿ ಸಿದ್ದರಾಮಯ್ಯ ತವರೂರಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಅವರ ಹುಟ್ಟುಹಬ್ಬ ಹಿನ್ನಲೆ ಅವರ ಅಭಿಮಾನಿಗಳಯ ಪರಮೋತ್ಸವ ಸಮಾವೇಶ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಗೃಹ ಸಚಿವ ಪರಮೇಶ್ವರ್‌ ಅವರು ದಲಿತರಿಗೆ ಹೆಜ್ಜೆ ಹೆಜ್ಜೆಗೂ ಅವಮಾನವಾಗುತ್ತಿದೆ. ಹೀಗಾಗಿ ನಮ್ಮ ಜನಗಳು ದೊಡ್ಡ ಮಟ್ಟದ ಹೋರಾಟಕ್ಕೆ ಸಜ್ಜಾಗಬೇಕು ಎಂದು ಕರೆ ನೀಡಿದ್ದಾರೆ. ಈ ಮೂಲಕ ದಲಿತ ಮುಖ್ಯಮಂತ್ರಿ ವಿಚಾರವಾಗಿ ಹೈಕಮಾಂಡ್‌ಗೆ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.

ನಗರದ ಕಲಾಮಂದಿರದಲ್ಲಿ ಡಾ.ಜಿ.ಪರಮೇಶ್ವರ್ ಅವರ 74ನೇ ಹುಟ್ಟುಹಬ್ಬದ ಅಂಗವಾಗಿ ರಾಜು ಬಿಳಿಕೆರೆ ಅವರ ನೇತೃತ್ವದಲ್ಲಿ ಅಭಿಮಾನಿ ಬಳಗದ ವತಿಯಿಂದ ಏರ್ಪಡಿಸಲಾಗಿದ್ದ ‘ಪರಮೋತ್ಸವ’ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಹೆಜ್ಜೆ ಹೆಜ್ಜೆಗೂ ದಲಿತರಿಗೆ ಅನ್ಯಾಯವಾಗುತ್ತಿದೆ. ಸಮಾನತೆ, ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲಿಕ್ಕೆ ಇನ್ನೆಷ್ಟು ವರ್ಷ ಕಾಯಬೇಕು. ಹೀಗಾಗಿ ನೀವುಗಳು ಹೋರಾಟಕ್ಕೆ ಸಜ್ಜಾಗಬೇಕು. ನಮಗೆ ನ್ಯಾಯ ದೊರೆಯಬೇಕಾದಲ್ಲಿ ಹೋರಾಟದ ಮೂಲಕವೇ ಆಗಬೇಕು. ನೀವುಗಳು ಹೋರಾಟಕ್ಕೆ ಮುಂದಾಗದಿದ್ದಲ್ಲಿ ಅದು ಅಂಬೇಡ್ಕರ್ ಅವರಿಗೆ ಮಾಡುವ ಅವಮಾನ ಎಂದು ಹೇಳಿದ್ದಾರೆ.

ಮೈಸೂರಿನಲ್ಲಿ ನನ್ನ ಹುಟ್ಟುಹಬ್ಬವನ್ನು ಆಚರಿಸುವ ಸಂಬಂಧ ರಾಜು ಬಿಳಿಕೆರೆ ಅವರಿಗೆ ಸಾಕಷ್ಟು ತೊಂದರೆಗಳು ಎದುರಾಗಿತ್ತು. ಇಲ್ಲಿ ಹುಟ್ಟುಹಬ್ಬ ಆಚರಿಸಿದಲ್ಲಿ ಬೇರೆ ಸಂದೇಶ ಹೋಗಬಹುದು ಎಂಬುದು ಕೆಲವರ ಭಾವನೆಯಾಗಿತ್ತು. ಅದೆಲ್ಲವನ್ನೂ ಮೀರಿ ರಾಜು ಅವರು ಉತ್ತಮವಾಗಿ ಸಮಾರಂಭ ಆಯೋಜಿಸಿದ್ದಾರೆ. ಅವರಿಗೆ ಮತ್ತು ಅವರ ಸ್ನೇಹಿತರಿಗೆ ಅಭಿನಂದನೆಗಳು ಎಂದರು.

ನಾನು ರಾಜಕೀಯಕ್ಕೆ ಬಂದದ್ದು ದಿ.ರಾಜೀವ್‌ಗಾಂಧಿ ಅವರಿಂದ. ಸಮಾನತೆಯ ಬಗ್ಗೆ ಅವರು ಸಾಕಷ್ಟು ಕನಸು ಕಂಡಿದ್ದರು. ಭಾರತ ಬದಲಾದ ಭಾರತವಾಗಬೇಕು ಎಂಬುದು ಅವರ ಆಸೆಯಾಗಿತ್ತು. ಆದರೆ, ಅವರ ಆಸೆ ಇಂದಿಗೂ ಈಡೇರಿಲ್ಲ ಎಂದು ಹೇಳಿದರು.

ಸಮಾಜ ನಮ್ಮನ್ನು ಎಲ್ಲರಂತೆ ನೋಡುವವರೆಗೂ ಮೀಸಲಾತಿ ಇರಬೇಕು ಎಂದು ಡಾ.ಬಿ.ಆರ್.ಅಂಬೇಡ್ಕರ್ ಹೇಳಿದ್ದರು. ಆದರೆ, ಇಂದಿಗೂ ಮೀಸಲಾತಿಗೆ ಹೊಡೆದಾಡುತ್ತಿದ್ದೇವೆ. ಈಗ ಒಳ ಮೀಸಲಾತಿಗೂ ಹೋರಾಟ ನಡೆಯುತ್ತಿದೆ. ಇದು ಬದಲಾಗುವುದು ಯಾವಾಗ ಎಂದು ಪ್ರಶ್ನಿಸಿದರು.

ನಿನ್ನಲ್ಲಿ ಜಮೀನಿಲ್ಲ, ಆರ್ಥಿಕವಾಗಿ ನೀನು ಸಬಲನಲ್ಲ. ಆದರೂ ನೀನು ಸಮಾಜದಲ್ಲಿ ಗುರುತಿಸಿಕೊಳ್ಳಬೇಕು ಎಂದಾದಲ್ಲಿ ಮೊದಲು ನೀನು ಶಿಕ್ಷಿತನಾಗು. ಶಿಕ್ಷಣ ಮಾತ್ರ ನಿನ್ನ ಜೀವನದಲ್ಲಿ ಬದಲಾವಣೆ ತರಬಹುದು ಎಂದು ಅಂಬೇಡ್ಕರ್ ಅವರು ಹೇಳಿದ್ದರು. ಅದು ಇಂದಿಗೂ ಪ್ರಸ್ತುತ ಎಂದರು.

ಕಾರ್ಯಕ್ರಮದಲ್ಲಿ ಜ್ಞಾನಸ್ವರೂಪಾನಂದ ಸ್ವಾಮೀಜಿ, ನಿವೃತ್ತ ಪ್ರಾಧ್ಯಾಪಕ ಡಾ.ಕೆ.ವಿ.ಅಯ್ಯಣ್ಣ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ನಗರ ಅಧ್ಯಕ್ಷ ಆರ್.ಮೂರ್ತಿ, ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್, ತಿವಾರಿ, ಮಾಜಿ ಮಹಾಪೌರ ಪುರುಷೋತ್ತಮ್ ಮುಂತಾದವರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

8 hours ago

ಮಡಿಕೇರಿ | ನೀರಿನಲ್ಲಿ ಮುಳುಗಿ ಯುವಕ ಸಾವು

ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…

8 hours ago

ಗಡಿ ಜಿಲ್ಲೆಯಲ್ಲೂ ತಮಿಳು ಸಿಎಂ ವಿಜಯ್‌ ಹವಾ!

ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…

8 hours ago

ಪ್ರಧಾನಿ ಸಂಚಾರ ಮಾರ್ಗದಲ್ಲಿ ಜಿಲಿಟೆನ್ ಕಡ್ಡಿ ಪತ್ತೆ ; ಕೆಲಕಾಲ ಆತಂಕ ; ಓರ್ವ ವಶಕ್ಕೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…

9 hours ago

ತಮಿಳುನಾಡು | ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…

9 hours ago

ಹುಣಸೂರು | ಭಾರೀ ಗಾಳಿ-ಮಳೆಗೆ ಹಾರಿಹೋದ ಚಾವಣಿ

ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…

10 hours ago