ಮೈಸೂರು

ಸಂಸತ್‌ ಭದ್ರತಾ ಲೋಪ: ಮನೋರಂಜನ್ ನಿವಾಸದಲ್ಲಿ ದೆಹಲಿ ಪೊಲೀಸರ ಶೋಧ

ಮೈಸೂರು: ದೆಹಲಿಯ ಸಂಸತ್ ಭವನದ ಕಲಾಪದ ವೇಳೆ ಸ್ಮೋಕ್ ಬಾಂಬ್ ಹಾಕಿದ್ದ ಆರೋಪದಡಿ ಬಂಧಿತನಾಗಿರುವ ಮನೋರಂಜನ್‍ನ ಮೈಸೂರಿನ ನಿವಾಸಕ್ಕೆ ಇಂದು ಓರ್ವ ಮಹಿಳಾ ಪೊಲೀಸ್ ಸೇರಿದಂತೆ ಇಬ್ಬರು ಅಧಿಕಾರಿಗಳ ತಂಡವಾದ ಐಬಿ ಮತ್ತು ದೆಹಲಿಯ ಪೊಲೀಸರು ಇಂದು ಭೇಟಿ ನೀಡಿದ್ದು, ದೀರ್ಘಾವಧಿ ತಪಾಸಣೆ ನಡಸಿದ್ದಾರೆ.

ಮನೆಯಿಂದ ಹೊರಗೆ ಹೋಗಿದ್ದ ಮನೋರಂಜನ್ ತಂದೆ ದೇವರಾಜೇಗೌಡ ಮಧ್ಯಾಹ್ನದ ವೇಳೆಗೆ ಮನೆಗೆ ಬರುವ ಈ ಮೊದಲೇ ಮನೋರಂಜನ್ ರೂಂ ಸೀಜ್ ಮಾಡಿದ್ದ ಪೊಲೀಸರು, ಕೊಠಡಿ ತೆರೆದು ಇಂಚಿಂಚು ಪರಿಶೀಲನೆ ಮಾಡಿದ್ದಾರೆ.

ಮನೋರಂಜನ್ ಪೋಷಕರನ್ನ ತೀವ್ರ ವಿಚಾರಣೆಗೆ ಒಳಪಡಿಸಿದ ಪೊಲೀಸ್ರು, ತಂದೆ ತಾಯಿ ಇಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆಗೆ ಒಳಪಡಿಸಿದ್ದು, ಇಬ್ಬರಿಗು ಮೈಸೂರನ್ನು ತೊರೆಯದಂತೆ ಸೂಚನೆ ನೀಡಿದ್ದಾರೆ.

ಸಾಗರ್ ಶರ್ಮ ನಿಮಗೆ ಪರಿಚಯ ಇದ್ದಾನಾ. ಸಾಗರ್‌ ಮತ್ತು ನಿಮ್ಮ ಮಗನಿಗೆ ಹೇಗೆ ಪರಿಚಯ, ಸಾಗರ್ ಒಬ್ಬನೇ ಬಂದಿದ್ನಾ, ನಿಮ್ಮ ಮಗ ಎಂಜಿನಿಯರಿಂಗ್ ಯಾಕಾಗಿ ಅರ್ಧಕ್ಕೆ ನಿಲ್ಲಿಸಿದ್ದ ಹೀಗೆ ಹತ್ತು ಹಲವು ಪ್ರಶ್ನೆಗಳನ್ನು ಮನೋರಂಜನ್‌ ಪೋಷಕರಿಗೆ ಕೇಳಿದ್ದಾರೆ.

ಒಂದಷ್ಟು ಮಹತ್ವದ ಮಾಹಿತಿಯನ್ನ ಸಂಗ್ರಹಿಸಿದ ಐಬಿ ಮತ್ತು ದೆಹಲಿ ಪೊಲೀಸರು, ಮನೋರಂಜನ್ ರೂಂ ನಲ್ಲಿ ಮಹತ್ವದ ದಾಖಲೆಗಳನ್ನ ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಬೆಳಿಗ್ಗೆಯೇ ಮೈಸೂರಿಗೆ ಬಂದ ಪೊಲೀಸರ ತಂಡ ಸಂಜೆ 6.30 ವರಗೆ ಶೋಧ ಕಾರ್ಯ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago