ಮೈಸೂರು: ದೆಹಲಿಯ ಸಂಸತ್ ಭವನದ ಕಲಾಪದ ವೇಳೆ ಸ್ಮೋಕ್ ಬಾಂಬ್ ಹಾಕಿದ್ದ ಆರೋಪದಡಿ ಬಂಧಿತನಾಗಿರುವ ಮನೋರಂಜನ್ನ ಮೈಸೂರಿನ ನಿವಾಸಕ್ಕೆ ಇಂದು ಓರ್ವ ಮಹಿಳಾ ಪೊಲೀಸ್ ಸೇರಿದಂತೆ ಇಬ್ಬರು ಅಧಿಕಾರಿಗಳ ತಂಡವಾದ ಐಬಿ ಮತ್ತು ದೆಹಲಿಯ ಪೊಲೀಸರು ಇಂದು ಭೇಟಿ ನೀಡಿದ್ದು, ದೀರ್ಘಾವಧಿ ತಪಾಸಣೆ ನಡಸಿದ್ದಾರೆ.
ಮನೆಯಿಂದ ಹೊರಗೆ ಹೋಗಿದ್ದ ಮನೋರಂಜನ್ ತಂದೆ ದೇವರಾಜೇಗೌಡ ಮಧ್ಯಾಹ್ನದ ವೇಳೆಗೆ ಮನೆಗೆ ಬರುವ ಈ ಮೊದಲೇ ಮನೋರಂಜನ್ ರೂಂ ಸೀಜ್ ಮಾಡಿದ್ದ ಪೊಲೀಸರು, ಕೊಠಡಿ ತೆರೆದು ಇಂಚಿಂಚು ಪರಿಶೀಲನೆ ಮಾಡಿದ್ದಾರೆ.
ಮನೋರಂಜನ್ ಪೋಷಕರನ್ನ ತೀವ್ರ ವಿಚಾರಣೆಗೆ ಒಳಪಡಿಸಿದ ಪೊಲೀಸ್ರು, ತಂದೆ ತಾಯಿ ಇಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆಗೆ ಒಳಪಡಿಸಿದ್ದು, ಇಬ್ಬರಿಗು ಮೈಸೂರನ್ನು ತೊರೆಯದಂತೆ ಸೂಚನೆ ನೀಡಿದ್ದಾರೆ.
ಸಾಗರ್ ಶರ್ಮ ನಿಮಗೆ ಪರಿಚಯ ಇದ್ದಾನಾ. ಸಾಗರ್ ಮತ್ತು ನಿಮ್ಮ ಮಗನಿಗೆ ಹೇಗೆ ಪರಿಚಯ, ಸಾಗರ್ ಒಬ್ಬನೇ ಬಂದಿದ್ನಾ, ನಿಮ್ಮ ಮಗ ಎಂಜಿನಿಯರಿಂಗ್ ಯಾಕಾಗಿ ಅರ್ಧಕ್ಕೆ ನಿಲ್ಲಿಸಿದ್ದ ಹೀಗೆ ಹತ್ತು ಹಲವು ಪ್ರಶ್ನೆಗಳನ್ನು ಮನೋರಂಜನ್ ಪೋಷಕರಿಗೆ ಕೇಳಿದ್ದಾರೆ.
ಒಂದಷ್ಟು ಮಹತ್ವದ ಮಾಹಿತಿಯನ್ನ ಸಂಗ್ರಹಿಸಿದ ಐಬಿ ಮತ್ತು ದೆಹಲಿ ಪೊಲೀಸರು, ಮನೋರಂಜನ್ ರೂಂ ನಲ್ಲಿ ಮಹತ್ವದ ದಾಖಲೆಗಳನ್ನ ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಬೆಳಿಗ್ಗೆಯೇ ಮೈಸೂರಿಗೆ ಬಂದ ಪೊಲೀಸರ ತಂಡ ಸಂಜೆ 6.30 ವರಗೆ ಶೋಧ ಕಾರ್ಯ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…
ಮಂಡ್ಯ: ಜಿಲ್ಲೆಯ ನಾಗಮಂಗಲದ ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬಹುಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ…
ಢಾಕಾ: ಭಾರೀ ಬಿರುಗಾಳಿಯಿಂದ ಅಂಡಮಾನ್ ಸಮುದ್ರದಲ್ಲಿ ಜನದಟ್ಟಣೆಯಿಂದ ತುಂಬಿದ್ದ ದೋಣಿ ಮುಳುಗಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಹಲವಾರು ದಿನಗಳಿಂದ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದೆ…
ರಾಯಪುರ: ಛತ್ತೀಸ್ಗಢದ ಶಕ್ತಿ ಜಿಲ್ಲೆಯ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ…