ಮೈಸೂರು: ದೆಹಲಿಯ ಸಂಸತ್ ಭವನದ ಕಲಾಪದ ವೇಳೆ ಸ್ಮೋಕ್ ಬಾಂಬ್ ಹಾಕಿದ್ದ ಆರೋಪದಡಿ ಬಂಧಿತನಾಗಿರುವ ಮನೋರಂಜನ್ನ ಮೈಸೂರಿನ ನಿವಾಸಕ್ಕೆ ಇಂದು ಓರ್ವ ಮಹಿಳಾ ಪೊಲೀಸ್ ಸೇರಿದಂತೆ ಇಬ್ಬರು ಅಧಿಕಾರಿಗಳ ತಂಡವಾದ ಐಬಿ ಮತ್ತು ದೆಹಲಿಯ ಪೊಲೀಸರು ಇಂದು ಭೇಟಿ ನೀಡಿದ್ದು, ದೀರ್ಘಾವಧಿ ತಪಾಸಣೆ ನಡಸಿದ್ದಾರೆ.
ಮನೆಯಿಂದ ಹೊರಗೆ ಹೋಗಿದ್ದ ಮನೋರಂಜನ್ ತಂದೆ ದೇವರಾಜೇಗೌಡ ಮಧ್ಯಾಹ್ನದ ವೇಳೆಗೆ ಮನೆಗೆ ಬರುವ ಈ ಮೊದಲೇ ಮನೋರಂಜನ್ ರೂಂ ಸೀಜ್ ಮಾಡಿದ್ದ ಪೊಲೀಸರು, ಕೊಠಡಿ ತೆರೆದು ಇಂಚಿಂಚು ಪರಿಶೀಲನೆ ಮಾಡಿದ್ದಾರೆ.
ಮನೋರಂಜನ್ ಪೋಷಕರನ್ನ ತೀವ್ರ ವಿಚಾರಣೆಗೆ ಒಳಪಡಿಸಿದ ಪೊಲೀಸ್ರು, ತಂದೆ ತಾಯಿ ಇಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆಗೆ ಒಳಪಡಿಸಿದ್ದು, ಇಬ್ಬರಿಗು ಮೈಸೂರನ್ನು ತೊರೆಯದಂತೆ ಸೂಚನೆ ನೀಡಿದ್ದಾರೆ.
ಸಾಗರ್ ಶರ್ಮ ನಿಮಗೆ ಪರಿಚಯ ಇದ್ದಾನಾ. ಸಾಗರ್ ಮತ್ತು ನಿಮ್ಮ ಮಗನಿಗೆ ಹೇಗೆ ಪರಿಚಯ, ಸಾಗರ್ ಒಬ್ಬನೇ ಬಂದಿದ್ನಾ, ನಿಮ್ಮ ಮಗ ಎಂಜಿನಿಯರಿಂಗ್ ಯಾಕಾಗಿ ಅರ್ಧಕ್ಕೆ ನಿಲ್ಲಿಸಿದ್ದ ಹೀಗೆ ಹತ್ತು ಹಲವು ಪ್ರಶ್ನೆಗಳನ್ನು ಮನೋರಂಜನ್ ಪೋಷಕರಿಗೆ ಕೇಳಿದ್ದಾರೆ.
ಒಂದಷ್ಟು ಮಹತ್ವದ ಮಾಹಿತಿಯನ್ನ ಸಂಗ್ರಹಿಸಿದ ಐಬಿ ಮತ್ತು ದೆಹಲಿ ಪೊಲೀಸರು, ಮನೋರಂಜನ್ ರೂಂ ನಲ್ಲಿ ಮಹತ್ವದ ದಾಖಲೆಗಳನ್ನ ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಬೆಳಿಗ್ಗೆಯೇ ಮೈಸೂರಿಗೆ ಬಂದ ಪೊಲೀಸರ ತಂಡ ಸಂಜೆ 6.30 ವರಗೆ ಶೋಧ ಕಾರ್ಯ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ…
ಹೊಸದಿಲ್ಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಸಾಮೂಹಿಕ ಸುಂಕಗಳನ್ನು ಅಮೆರಿಕ…
ಹನೂರು : ಮುಂದಿನ ದಿನಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು ಯಶಸ್ವಿಯಾಗಿ ನಡೆಸಲು ಕರ್ನಾಟಕ ಪೊಲೀಸರು ಹಾಗೂ ಅಬಕಾರಿ ಇಲಾಖೆ…
ಕೆ.ಆರ್.ಪೇಟೆ : ಪಟ್ಟಣದ ಪಿ.ಎಲ್.ಡಿ ಬ್ಯಾಂಕ್ ಮುಂಭಾಗದಲ್ಲಿ ಶಫಿಉಲ್ಲಾ ಅವರು ನಡೆಸುತ್ತಿದ್ದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್…
ಬೆಂಗಳೂರು : ಬೆಂಗಳೂರು ನಗರ ಮಾತ್ರವಲ್ಲದೆ ಇಡೀ ಕರ್ನಾಟಕ ಎಲೆಕ್ಟ್ರಿಕ್ ವಾಹನ ಉದ್ಯಮದ ಹಬ್ ಆಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಕ್ಕೆ…
ಸುಪ್ರೀಂ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ ಅಮೆರಿಕ ಅಧ್ಯಕ್ಷ ವಾಷಿಂಗ್ಟನ್ : ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು…