ಮೈಸೂರು

ಸಂಸತ್‌ ಭದ್ರತಾ ಲೋಪ: ಮನೋರಂಜನ್ ನಿವಾಸದಲ್ಲಿ ದೆಹಲಿ ಪೊಲೀಸರ ಶೋಧ

ಮೈಸೂರು: ದೆಹಲಿಯ ಸಂಸತ್ ಭವನದ ಕಲಾಪದ ವೇಳೆ ಸ್ಮೋಕ್ ಬಾಂಬ್ ಹಾಕಿದ್ದ ಆರೋಪದಡಿ ಬಂಧಿತನಾಗಿರುವ ಮನೋರಂಜನ್‍ನ ಮೈಸೂರಿನ ನಿವಾಸಕ್ಕೆ ಇಂದು ಓರ್ವ ಮಹಿಳಾ ಪೊಲೀಸ್ ಸೇರಿದಂತೆ ಇಬ್ಬರು ಅಧಿಕಾರಿಗಳ ತಂಡವಾದ ಐಬಿ ಮತ್ತು ದೆಹಲಿಯ ಪೊಲೀಸರು ಇಂದು ಭೇಟಿ ನೀಡಿದ್ದು, ದೀರ್ಘಾವಧಿ ತಪಾಸಣೆ ನಡಸಿದ್ದಾರೆ.

ಮನೆಯಿಂದ ಹೊರಗೆ ಹೋಗಿದ್ದ ಮನೋರಂಜನ್ ತಂದೆ ದೇವರಾಜೇಗೌಡ ಮಧ್ಯಾಹ್ನದ ವೇಳೆಗೆ ಮನೆಗೆ ಬರುವ ಈ ಮೊದಲೇ ಮನೋರಂಜನ್ ರೂಂ ಸೀಜ್ ಮಾಡಿದ್ದ ಪೊಲೀಸರು, ಕೊಠಡಿ ತೆರೆದು ಇಂಚಿಂಚು ಪರಿಶೀಲನೆ ಮಾಡಿದ್ದಾರೆ.

ಮನೋರಂಜನ್ ಪೋಷಕರನ್ನ ತೀವ್ರ ವಿಚಾರಣೆಗೆ ಒಳಪಡಿಸಿದ ಪೊಲೀಸ್ರು, ತಂದೆ ತಾಯಿ ಇಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆಗೆ ಒಳಪಡಿಸಿದ್ದು, ಇಬ್ಬರಿಗು ಮೈಸೂರನ್ನು ತೊರೆಯದಂತೆ ಸೂಚನೆ ನೀಡಿದ್ದಾರೆ.

ಸಾಗರ್ ಶರ್ಮ ನಿಮಗೆ ಪರಿಚಯ ಇದ್ದಾನಾ. ಸಾಗರ್‌ ಮತ್ತು ನಿಮ್ಮ ಮಗನಿಗೆ ಹೇಗೆ ಪರಿಚಯ, ಸಾಗರ್ ಒಬ್ಬನೇ ಬಂದಿದ್ನಾ, ನಿಮ್ಮ ಮಗ ಎಂಜಿನಿಯರಿಂಗ್ ಯಾಕಾಗಿ ಅರ್ಧಕ್ಕೆ ನಿಲ್ಲಿಸಿದ್ದ ಹೀಗೆ ಹತ್ತು ಹಲವು ಪ್ರಶ್ನೆಗಳನ್ನು ಮನೋರಂಜನ್‌ ಪೋಷಕರಿಗೆ ಕೇಳಿದ್ದಾರೆ.

ಒಂದಷ್ಟು ಮಹತ್ವದ ಮಾಹಿತಿಯನ್ನ ಸಂಗ್ರಹಿಸಿದ ಐಬಿ ಮತ್ತು ದೆಹಲಿ ಪೊಲೀಸರು, ಮನೋರಂಜನ್ ರೂಂ ನಲ್ಲಿ ಮಹತ್ವದ ದಾಖಲೆಗಳನ್ನ ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಬೆಳಿಗ್ಗೆಯೇ ಮೈಸೂರಿಗೆ ಬಂದ ಪೊಲೀಸರ ತಂಡ ಸಂಜೆ 6.30 ವರಗೆ ಶೋಧ ಕಾರ್ಯ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

andolanait

Recent Posts

ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ನಾಯಕರ ನಡುವೆ ಪೈಪೋಟಿ

ಬೆಂಗಳೂರು : ಡಿ.ಕೆ.ಶಿವಕುಮಾರ್‌ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…

48 mins ago

ಶಾಲೆ ಶುರುವಾಗಿದೆ; ಮನಸು ಯಾಕೋ ಹೂ ಬಿಟ್ಟಿದೆ…

ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…

4 hours ago

ಭಾನುವಾರದ ಹಾಡುಪಾಡು | ಶಾಲೆಯೆಂಬ ಕಟ್ಟಡಗಳಿಗೆ ಜೀವ ಬರುವ ಹೊತ್ತು…..

ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…

4 hours ago

ಭಾನುವಾರದ ಹಾಡುಪಾಡು | ಜೂನ್ ಬಂತು ಎಂದರೆ ಶಿಕ್ಷಕರಿಗೆ ಸುಗ್ಗಿ ಕಾಲ

ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌| ಮೇ 31 ಭಾನುವಾರ

4 hours ago

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

17 hours ago