ಮೈಸೂರು: ದೆಹಲಿಯ ಸಂಸತ್ ಭವನದ ಕಲಾಪದ ವೇಳೆ ಸ್ಮೋಕ್ ಬಾಂಬ್ ಹಾಕಿದ್ದ ಆರೋಪದಡಿ ಬಂಧಿತನಾಗಿರುವ ಮನೋರಂಜನ್ನ ಮೈಸೂರಿನ ನಿವಾಸಕ್ಕೆ ಇಂದು ಓರ್ವ ಮಹಿಳಾ ಪೊಲೀಸ್ ಸೇರಿದಂತೆ ಇಬ್ಬರು ಅಧಿಕಾರಿಗಳ ತಂಡವಾದ ಐಬಿ ಮತ್ತು ದೆಹಲಿಯ ಪೊಲೀಸರು ಇಂದು ಭೇಟಿ ನೀಡಿದ್ದು, ದೀರ್ಘಾವಧಿ ತಪಾಸಣೆ ನಡಸಿದ್ದಾರೆ.
ಮನೆಯಿಂದ ಹೊರಗೆ ಹೋಗಿದ್ದ ಮನೋರಂಜನ್ ತಂದೆ ದೇವರಾಜೇಗೌಡ ಮಧ್ಯಾಹ್ನದ ವೇಳೆಗೆ ಮನೆಗೆ ಬರುವ ಈ ಮೊದಲೇ ಮನೋರಂಜನ್ ರೂಂ ಸೀಜ್ ಮಾಡಿದ್ದ ಪೊಲೀಸರು, ಕೊಠಡಿ ತೆರೆದು ಇಂಚಿಂಚು ಪರಿಶೀಲನೆ ಮಾಡಿದ್ದಾರೆ.
ಮನೋರಂಜನ್ ಪೋಷಕರನ್ನ ತೀವ್ರ ವಿಚಾರಣೆಗೆ ಒಳಪಡಿಸಿದ ಪೊಲೀಸ್ರು, ತಂದೆ ತಾಯಿ ಇಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆಗೆ ಒಳಪಡಿಸಿದ್ದು, ಇಬ್ಬರಿಗು ಮೈಸೂರನ್ನು ತೊರೆಯದಂತೆ ಸೂಚನೆ ನೀಡಿದ್ದಾರೆ.
ಸಾಗರ್ ಶರ್ಮ ನಿಮಗೆ ಪರಿಚಯ ಇದ್ದಾನಾ. ಸಾಗರ್ ಮತ್ತು ನಿಮ್ಮ ಮಗನಿಗೆ ಹೇಗೆ ಪರಿಚಯ, ಸಾಗರ್ ಒಬ್ಬನೇ ಬಂದಿದ್ನಾ, ನಿಮ್ಮ ಮಗ ಎಂಜಿನಿಯರಿಂಗ್ ಯಾಕಾಗಿ ಅರ್ಧಕ್ಕೆ ನಿಲ್ಲಿಸಿದ್ದ ಹೀಗೆ ಹತ್ತು ಹಲವು ಪ್ರಶ್ನೆಗಳನ್ನು ಮನೋರಂಜನ್ ಪೋಷಕರಿಗೆ ಕೇಳಿದ್ದಾರೆ.
ಒಂದಷ್ಟು ಮಹತ್ವದ ಮಾಹಿತಿಯನ್ನ ಸಂಗ್ರಹಿಸಿದ ಐಬಿ ಮತ್ತು ದೆಹಲಿ ಪೊಲೀಸರು, ಮನೋರಂಜನ್ ರೂಂ ನಲ್ಲಿ ಮಹತ್ವದ ದಾಖಲೆಗಳನ್ನ ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಬೆಳಿಗ್ಗೆಯೇ ಮೈಸೂರಿಗೆ ಬಂದ ಪೊಲೀಸರ ತಂಡ ಸಂಜೆ 6.30 ವರಗೆ ಶೋಧ ಕಾರ್ಯ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…