ಮೈಸೂರು: ದೆಹಲಿಯ ಸಂಸತ್ ಭವನದ ಕಲಾಪದ ವೇಳೆ ಸ್ಮೋಕ್ ಬಾಂಬ್ ಹಾಕಿದ್ದ ಆರೋಪದಡಿ ಬಂಧಿತನಾಗಿರುವ ಮನೋರಂಜನ್ನ ಮೈಸೂರಿನ ನಿವಾಸಕ್ಕೆ ಇಂದು ಓರ್ವ ಮಹಿಳಾ ಪೊಲೀಸ್ ಸೇರಿದಂತೆ ಇಬ್ಬರು ಅಧಿಕಾರಿಗಳ ತಂಡವಾದ ಐಬಿ ಮತ್ತು ದೆಹಲಿಯ ಪೊಲೀಸರು ಇಂದು ಭೇಟಿ ನೀಡಿದ್ದು, ದೀರ್ಘಾವಧಿ ತಪಾಸಣೆ ನಡಸಿದ್ದಾರೆ.
ಮನೆಯಿಂದ ಹೊರಗೆ ಹೋಗಿದ್ದ ಮನೋರಂಜನ್ ತಂದೆ ದೇವರಾಜೇಗೌಡ ಮಧ್ಯಾಹ್ನದ ವೇಳೆಗೆ ಮನೆಗೆ ಬರುವ ಈ ಮೊದಲೇ ಮನೋರಂಜನ್ ರೂಂ ಸೀಜ್ ಮಾಡಿದ್ದ ಪೊಲೀಸರು, ಕೊಠಡಿ ತೆರೆದು ಇಂಚಿಂಚು ಪರಿಶೀಲನೆ ಮಾಡಿದ್ದಾರೆ.
ಮನೋರಂಜನ್ ಪೋಷಕರನ್ನ ತೀವ್ರ ವಿಚಾರಣೆಗೆ ಒಳಪಡಿಸಿದ ಪೊಲೀಸ್ರು, ತಂದೆ ತಾಯಿ ಇಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆಗೆ ಒಳಪಡಿಸಿದ್ದು, ಇಬ್ಬರಿಗು ಮೈಸೂರನ್ನು ತೊರೆಯದಂತೆ ಸೂಚನೆ ನೀಡಿದ್ದಾರೆ.
ಸಾಗರ್ ಶರ್ಮ ನಿಮಗೆ ಪರಿಚಯ ಇದ್ದಾನಾ. ಸಾಗರ್ ಮತ್ತು ನಿಮ್ಮ ಮಗನಿಗೆ ಹೇಗೆ ಪರಿಚಯ, ಸಾಗರ್ ಒಬ್ಬನೇ ಬಂದಿದ್ನಾ, ನಿಮ್ಮ ಮಗ ಎಂಜಿನಿಯರಿಂಗ್ ಯಾಕಾಗಿ ಅರ್ಧಕ್ಕೆ ನಿಲ್ಲಿಸಿದ್ದ ಹೀಗೆ ಹತ್ತು ಹಲವು ಪ್ರಶ್ನೆಗಳನ್ನು ಮನೋರಂಜನ್ ಪೋಷಕರಿಗೆ ಕೇಳಿದ್ದಾರೆ.
ಒಂದಷ್ಟು ಮಹತ್ವದ ಮಾಹಿತಿಯನ್ನ ಸಂಗ್ರಹಿಸಿದ ಐಬಿ ಮತ್ತು ದೆಹಲಿ ಪೊಲೀಸರು, ಮನೋರಂಜನ್ ರೂಂ ನಲ್ಲಿ ಮಹತ್ವದ ದಾಖಲೆಗಳನ್ನ ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಬೆಳಿಗ್ಗೆಯೇ ಮೈಸೂರಿಗೆ ಬಂದ ಪೊಲೀಸರ ತಂಡ ಸಂಜೆ 6.30 ವರಗೆ ಶೋಧ ಕಾರ್ಯ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…