ಮೈಸೂರು

ಸಂಸತ್ ಅಧಿವೇಶನ: ಎಎಪಿಯ ಮತ್ತೊಬ್ಬ ಸಂಸದ ಸುಶೀಲ್ ಕುಮಾರ್ ರಿಂಕು ಅಮಾನತು

ನವದೆಹಲಿ: ಸದನದಲ್ಲಿ ಅಶಿಸ್ತಿನ ವರ್ತನೆ ತೋರಿದ ಆರೋಪದ ಮೇಲೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಗುರುವಾರ ಎಎಪಿ ಸಂಸದ ಸುಶೀಲ್ ಕುಮಾರ್ ರಿಂಕು ಅವರನ್ನು ಮುಂಗಾರು ಅಧಿವೇಶನದ ಉಳಿದ ಭಾಗಕ್ಕೆ ಅಮಾನತುಗೊಳಿಸಿದ್ದಾರೆ.

ಲೋಕಸಭೆಯು ರಾಷ್ಟ್ರ ರಾಜಧಾನಿ ದೆಹಲಿ ಪ್ರದೇಶ ಸರ್ಕಾರ ತಿದ್ದುಪಡಿ ಮಸೂದೆ, 2023 ಅನ್ನು ಅಂಗೀಕರಿಸುತ್ತಿದ್ದಂತೆ, ಇದನ್ನು ವಿರೋಧಿಸಿ ರಿಂಕು ಅವರು ಸದನದ ಬಾವಿಗಿಳಿದು ಕೆಲವು ಕಾಗದಗಳನ್ನು ಹರಿದು ಸ್ಪೀಕರ್ ಓಂ ಬಿರ್ಲಾ ಅವರತ್ತ ಎಸೆದರು.

ಮಸೂದೆಯನ್ನು ಅಂಗೀಕರಿಸಿದ ನಂತರ, ಬಿರ್ಲಾ ಅವರು ಸದನದಲ್ಲಿ ರಿಂಕು ಅವರ ನಡವಳಿಕೆಯನ್ನು ಆಕ್ಷೇಪಿಸಿದರು ಮತ್ತು ಎಎಪಿ ಸಂಸದನ ಅಮಾನತಿಗೆ ನಿರ್ಣಯ ಮಂಡಿಸುವಂತೆ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಸೂಚಿಸಿದರು.

ನಂತರ ಪಂಜಾಬ್‌ನ ಜಲಂಧರ್ ಲೋಕಸಭಾ ಕ್ಷೇತ್ರದ ಸಂಸದ ರಿಂಕು ಅವರನ್ನು ಮುಂಗಾರು ಅಧಿವೇಶನದ ಉಳಿದ ಭಾಗಕ್ಕೆ ಅಮಾನತುಗೊಳಿಸುವ ನಿರ್ಣಯವನ್ನು ಪ್ರಲ್ಹಾದ್ ಜೋಶಿ ಅವರು ಮಂಡಿಸಿದರು.

ರಿಂಕು ಅವರು, ಮಣಿಪುರ ಹಿಂಸಾಚಾರದ ವಿಚಾರದಲ್ಲಿ ಗದ್ದಲ ಸೃಷ್ಟಿಸಿದ್ದಕ್ಕಾಗಿ ರಾಜ್ಯಸಭೆಯ ಎಎಪಿ ಸದಸ್ಯ ಸಂಜಯ್ ಸಿಂಗ್ ಅವರನ್ನು ಮೇಲ್ಮನೆಯಿಂದ ಅಮಾನತುಗೊಳಿಸಿದ ನಂತರ ಸಂಸತ್ ಅಧಿವೇಶನದ ಉಳಿದ ಭಾಗದಿಂದ ಅಮಾನತುಗೊಂಡ ಎರಡನೇ ಎಎಪಿ ಸದಸ್ಯರಾಗಿದ್ದಾರೆ.

andolanait

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

3 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

3 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

3 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

3 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

3 hours ago