ಮೈಸೂರು : ನಗರದಲ್ಲಿ ಇಂದು ನಡೆಯಲಿರುವ ಬಿಜೆಪಿ ಬೃಹತ್ ಸಮಾವೇಶದಲ್ಲಿ ಭಾಗಿಯಾಗಲು ಆಹ್ವಾನ ಬಂದಿದೆ ಆದರೆ ಭಾಗಿಯಾಗುವ ಬಗ್ಗೆ ತೀರ್ಮಾನ ನಮಗೆ ಬಿಟ್ಟಿದ್ದು ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ತಿಳಿಸಿದ್ದಾರೆ.
ನಗರದ ಜಯಲಕ್ಷ್ಮಿಪುರಂನ ತಮ್ಮ ನಿವಾಸ ಭೀಮಸಧನದಲ್ಲಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಮನೆಗೆ ಭೇಟಿ ನೀಡಿ ನನ್ನ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಇಂದು ನಡೆಯಲಿರುವ ಬಜೆಪಿ ಸಮಾವೇಶದಲ್ಲಿ ಭಾಗಿಯಾಗುವಂತೆ ಆಹ್ವಾನ ನೀಡಿದ್ದಾರೆ ಎಂದರು.
ಅವರ ಆಹ್ವಾನಕ್ಕೆ ಗೌರವ ನೀಡೋಣ, ಆದರೆ ಸಮಾವೇಶದಲ್ಲಿ ಭಾಗಿಯಾಗುವುದು ಬಿಡುವುದು ನಮಗೆ ಬಿಟ್ಟಿದ್ದು ಎಂದರು.
ಯಾರಿಗೆ ಮತ ಹಾಕಬೇಕು ಎಂಬುದು ಜನರು ಚಿಂತಿಸಲಿ : ನಾನು ರಾಜಕೀಯ ನಿವೃತ್ತಿಯನ್ನು ಘೋಷಿಸಿದ್ದೇನೆ. ನನ್ನ ಬೆಂಬಲಿಗರಿಗಾಗಲಿ, ಯಾವುದೇ ಪಕ್ಷದ ಮುಖಂಡರಿಗಾಲಿ ಅಥವ ಜನ ಸಾಮಾನ್ಯರಿಗಾಗಲಿ ಯಾರಿಗೆ ಮತ ಹಾಕ ಬೇಕು ಎಂದು ಸಲಹೆ ನೀಡುವುದಿಲ್ಲ.
ನಮ್ಮದು ಪ್ರಜಾಪ್ರಭುತ್ವ ದೇಶ ಮತದಾರರು ಬುದ್ದಿವಂತರಿದ್ದಾರೆ. ಯೋಚನೆ ಮಾಡುವ ಶಕ್ತಿ ಅವರಿಗಿದೆ. ಅವರು ಚಿಂತನೆ ಮಾಡಿ ಯಾರಿಗೆ ಬೇಕಾದರು ಮತ ನೀಡಲಿ ಎಂದರು.
ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ಅರಸಿನಕೆರೆ ಗ್ರಾಮದಲ್ಲಿ ವಾಲ್ಮೀಕಿ ಭವನ ನಿರ್ಮಾಣವಾಗಿ ಎರಡು ವರ್ಷ ಕಳೆದಿದ್ದರೂ ಉದ್ಘಾಟನೆಯಾಗದೇ ಇರುವುದರಿಂದ ಸಾರ್ವಜನಿಕರು…
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ರಸ್ತೆ ಹಾಳಾಗಿದ್ದು, ಮಳೆಗಾಲದಲ್ಲಿ ಗ್ರಾಮಸ್ಥರು ಓಡಾಡಲು ಸಾಧ್ಯವಾಗುತ್ತಿಲ್ಲ. ಗ್ರಾಮದ ಹೊಸ ಬಡಾವಣೆಗಳಿಗೆ…
ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಸಂಚರಿಸುವ ಕೆಲವು ಸಾರಿಗೆ ನಿಗಮದ ಬಸ್ಸುಗಳು ಹಾಗೂ ಮೈಸೂರು ಮತ್ತು, ಬೆಂಗಳೂರು ನಗರ ಸಾರಿಗೆ ಬಸ್ಸುಗಳಲ್ಲಿ…
ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳು ಸಮೀಪಿಸುತ್ತಿದ್ದು, ಅದಕ್ಕೆ ಪೂರಕವಾಗಿ ಸಂಜೆ ೭ರಿಂದ ರಾತ್ರಿ ೯ ರವರೆಗೆ ಎಲ್ಲ ಮನೆಗಳಲ್ಲೂ ಟಿವಿ…
ಗಾಲ್ಫ್ ಕ್ಲಬ್ ಆಡಳಿತ ಮಂಡಳಿಗೆ ಮೈಸೂರು ನಗರಪಾಲಿಕೆ ನೋಟಿಸ್ ಮೈಸೂರು: ನಗರದ ಜಯಚಾಮರಾಜ ಒಡೆಯರ್ ಗಾಲ್ಛ್ ಕ್ಲಬ್ ಆವರಣದಲ್ಲಿ ನಿಯ ಮಾವಳಿ…
ರಿವರ್ ರಾಫ್ಟಿಂಗ್, ಮೋಟಾರ್ ಬೋಟ್, ಬನಾನಾ ರೈಡ್, ಕಯಾಕಿಂಗ್, ಜೆಟ್ ಸ್ಕೀ ಆಯೋಜನೆ ಚಾಮರಾಜನಗರ: ಯುವಜನರಲ್ಲಿ ಸಾಹಸ, ಶೌರ್ಯ ಪ್ರವೃತ್ತಿಯನ್ನು…