ಮೈಸೂರು : ನಗರದಲ್ಲಿ ಇಂದು ನಡೆಯಲಿರುವ ಬಿಜೆಪಿ ಬೃಹತ್ ಸಮಾವೇಶದಲ್ಲಿ ಭಾಗಿಯಾಗಲು ಆಹ್ವಾನ ಬಂದಿದೆ ಆದರೆ ಭಾಗಿಯಾಗುವ ಬಗ್ಗೆ ತೀರ್ಮಾನ ನಮಗೆ ಬಿಟ್ಟಿದ್ದು ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ತಿಳಿಸಿದ್ದಾರೆ.
ನಗರದ ಜಯಲಕ್ಷ್ಮಿಪುರಂನ ತಮ್ಮ ನಿವಾಸ ಭೀಮಸಧನದಲ್ಲಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಮನೆಗೆ ಭೇಟಿ ನೀಡಿ ನನ್ನ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಇಂದು ನಡೆಯಲಿರುವ ಬಜೆಪಿ ಸಮಾವೇಶದಲ್ಲಿ ಭಾಗಿಯಾಗುವಂತೆ ಆಹ್ವಾನ ನೀಡಿದ್ದಾರೆ ಎಂದರು.
ಅವರ ಆಹ್ವಾನಕ್ಕೆ ಗೌರವ ನೀಡೋಣ, ಆದರೆ ಸಮಾವೇಶದಲ್ಲಿ ಭಾಗಿಯಾಗುವುದು ಬಿಡುವುದು ನಮಗೆ ಬಿಟ್ಟಿದ್ದು ಎಂದರು.
ಯಾರಿಗೆ ಮತ ಹಾಕಬೇಕು ಎಂಬುದು ಜನರು ಚಿಂತಿಸಲಿ : ನಾನು ರಾಜಕೀಯ ನಿವೃತ್ತಿಯನ್ನು ಘೋಷಿಸಿದ್ದೇನೆ. ನನ್ನ ಬೆಂಬಲಿಗರಿಗಾಗಲಿ, ಯಾವುದೇ ಪಕ್ಷದ ಮುಖಂಡರಿಗಾಲಿ ಅಥವ ಜನ ಸಾಮಾನ್ಯರಿಗಾಗಲಿ ಯಾರಿಗೆ ಮತ ಹಾಕ ಬೇಕು ಎಂದು ಸಲಹೆ ನೀಡುವುದಿಲ್ಲ.
ನಮ್ಮದು ಪ್ರಜಾಪ್ರಭುತ್ವ ದೇಶ ಮತದಾರರು ಬುದ್ದಿವಂತರಿದ್ದಾರೆ. ಯೋಚನೆ ಮಾಡುವ ಶಕ್ತಿ ಅವರಿಗಿದೆ. ಅವರು ಚಿಂತನೆ ಮಾಡಿ ಯಾರಿಗೆ ಬೇಕಾದರು ಮತ ನೀಡಲಿ ಎಂದರು.
ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ಅಗ್ರಹಾರದಲ್ಲಿರುವ ಶ್ರೀ ಕೃಷ್ಣ ರಾಜ ಸರ್ಕಾರಿ ಹಿರಿಯ ಪ್ರಾಥಮಿಕ…
ನವೀನ್ ಡಿಸೋಜ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಹಿನ್ನೆಡೆ; ಯೋಜನೆಯ ಸದುಪಯೋಗಕ್ಕೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ: ಜಿಲ್ಲೆಯಲ್ಲಿ ಕೇಂದ್ರ…
ಸಂದರ್ಶನ: ರಶ್ಮಿ ಕೋಟಿ " ಟ್ರಾನ್ಸ್ಜೆಂಡರ್ ಹಕ್ಕುಗಳ ತಿದ್ದುಪಡಿ ಮಸೂದೆ ದೇಶದಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದೆ. ಸಮುದಾಯದವರೊಂದಿಗೆ ಸಮಾಲೋಚನೆ ಇಲ್ಲದೆ…
ಎಂ.ನಾರಾಯಣ ಜಿಲ್ಲಾ ಮಟ್ಟದ ವಿಭಾಗದಲ್ಲಿ ಪ್ರಶಸ್ತಿಗೆ ಪಾತ್ರವಾದ ಮೈಸೂರು ಜಿಲ್ಲೆಯ ಏಕೈಕ ಗ್ರಾಮ ಪಂಚಾಯಿತಿ ತಿ.ನರಸೀಪುರ: ಗ್ರಾಮೀಣ ಆಡಳಿತ ಸಂಸ್ಥೆಯಾಗಿ…
ಕೆ.ಪಿ.ಮದನ್ ಮೈಸೂರು: ಬಾಗಿಲಿಗೆ ಬೀಗವಿಲ್ಲದೆ ವರ್ಷ ಪೂರ್ತಿ ತೆರೆದೇ ಇರುವ ಉದ್ಯಾನ.., ನೀರಿಲ್ಲದೆ ನಲುಗುತ್ತಿರುವ ಸಸಿಗಳು.., ಹಸಿರು ಕಂಡು ಪಾರ್ಕ್ಗೆ…