ಮೈಸೂರು : ನಗರದಲ್ಲಿ ಇಂದು ನಡೆಯಲಿರುವ ಬಿಜೆಪಿ ಬೃಹತ್ ಸಮಾವೇಶದಲ್ಲಿ ಭಾಗಿಯಾಗಲು ಆಹ್ವಾನ ಬಂದಿದೆ ಆದರೆ ಭಾಗಿಯಾಗುವ ಬಗ್ಗೆ ತೀರ್ಮಾನ ನಮಗೆ ಬಿಟ್ಟಿದ್ದು ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ತಿಳಿಸಿದ್ದಾರೆ.
ನಗರದ ಜಯಲಕ್ಷ್ಮಿಪುರಂನ ತಮ್ಮ ನಿವಾಸ ಭೀಮಸಧನದಲ್ಲಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಮನೆಗೆ ಭೇಟಿ ನೀಡಿ ನನ್ನ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಇಂದು ನಡೆಯಲಿರುವ ಬಜೆಪಿ ಸಮಾವೇಶದಲ್ಲಿ ಭಾಗಿಯಾಗುವಂತೆ ಆಹ್ವಾನ ನೀಡಿದ್ದಾರೆ ಎಂದರು.
ಅವರ ಆಹ್ವಾನಕ್ಕೆ ಗೌರವ ನೀಡೋಣ, ಆದರೆ ಸಮಾವೇಶದಲ್ಲಿ ಭಾಗಿಯಾಗುವುದು ಬಿಡುವುದು ನಮಗೆ ಬಿಟ್ಟಿದ್ದು ಎಂದರು.
ಯಾರಿಗೆ ಮತ ಹಾಕಬೇಕು ಎಂಬುದು ಜನರು ಚಿಂತಿಸಲಿ : ನಾನು ರಾಜಕೀಯ ನಿವೃತ್ತಿಯನ್ನು ಘೋಷಿಸಿದ್ದೇನೆ. ನನ್ನ ಬೆಂಬಲಿಗರಿಗಾಗಲಿ, ಯಾವುದೇ ಪಕ್ಷದ ಮುಖಂಡರಿಗಾಲಿ ಅಥವ ಜನ ಸಾಮಾನ್ಯರಿಗಾಗಲಿ ಯಾರಿಗೆ ಮತ ಹಾಕ ಬೇಕು ಎಂದು ಸಲಹೆ ನೀಡುವುದಿಲ್ಲ.
ನಮ್ಮದು ಪ್ರಜಾಪ್ರಭುತ್ವ ದೇಶ ಮತದಾರರು ಬುದ್ದಿವಂತರಿದ್ದಾರೆ. ಯೋಚನೆ ಮಾಡುವ ಶಕ್ತಿ ಅವರಿಗಿದೆ. ಅವರು ಚಿಂತನೆ ಮಾಡಿ ಯಾರಿಗೆ ಬೇಕಾದರು ಮತ ನೀಡಲಿ ಎಂದರು.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…