ಮೈಸೂರು : ನಗರದಲ್ಲಿ ಇಂದು ನಡೆಯಲಿರುವ ಬಿಜೆಪಿ ಬೃಹತ್ ಸಮಾವೇಶದಲ್ಲಿ ಭಾಗಿಯಾಗಲು ಆಹ್ವಾನ ಬಂದಿದೆ ಆದರೆ ಭಾಗಿಯಾಗುವ ಬಗ್ಗೆ ತೀರ್ಮಾನ ನಮಗೆ ಬಿಟ್ಟಿದ್ದು ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ತಿಳಿಸಿದ್ದಾರೆ.
ನಗರದ ಜಯಲಕ್ಷ್ಮಿಪುರಂನ ತಮ್ಮ ನಿವಾಸ ಭೀಮಸಧನದಲ್ಲಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಮನೆಗೆ ಭೇಟಿ ನೀಡಿ ನನ್ನ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಇಂದು ನಡೆಯಲಿರುವ ಬಜೆಪಿ ಸಮಾವೇಶದಲ್ಲಿ ಭಾಗಿಯಾಗುವಂತೆ ಆಹ್ವಾನ ನೀಡಿದ್ದಾರೆ ಎಂದರು.
ಅವರ ಆಹ್ವಾನಕ್ಕೆ ಗೌರವ ನೀಡೋಣ, ಆದರೆ ಸಮಾವೇಶದಲ್ಲಿ ಭಾಗಿಯಾಗುವುದು ಬಿಡುವುದು ನಮಗೆ ಬಿಟ್ಟಿದ್ದು ಎಂದರು.
ಯಾರಿಗೆ ಮತ ಹಾಕಬೇಕು ಎಂಬುದು ಜನರು ಚಿಂತಿಸಲಿ : ನಾನು ರಾಜಕೀಯ ನಿವೃತ್ತಿಯನ್ನು ಘೋಷಿಸಿದ್ದೇನೆ. ನನ್ನ ಬೆಂಬಲಿಗರಿಗಾಗಲಿ, ಯಾವುದೇ ಪಕ್ಷದ ಮುಖಂಡರಿಗಾಲಿ ಅಥವ ಜನ ಸಾಮಾನ್ಯರಿಗಾಗಲಿ ಯಾರಿಗೆ ಮತ ಹಾಕ ಬೇಕು ಎಂದು ಸಲಹೆ ನೀಡುವುದಿಲ್ಲ.
ನಮ್ಮದು ಪ್ರಜಾಪ್ರಭುತ್ವ ದೇಶ ಮತದಾರರು ಬುದ್ದಿವಂತರಿದ್ದಾರೆ. ಯೋಚನೆ ಮಾಡುವ ಶಕ್ತಿ ಅವರಿಗಿದೆ. ಅವರು ಚಿಂತನೆ ಮಾಡಿ ಯಾರಿಗೆ ಬೇಕಾದರು ಮತ ನೀಡಲಿ ಎಂದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…