ಮೈಸೂರು

ಕ್ಷೇತ್ರದ ಜನ ಯಾರಿಗೆ ಹೇಳುತ್ತಾರೆ ಅವರಿಗೆ ಪಕ್ಷದ ಟಿಕೆಟ್: ಎಚ್ ಸಿ ಎಂ

ನಂಜನಗೂಡು: ಖಾಸಗಿ ಕಾರ್ಯಕ್ರಮ ಮುಗಿಸಿಕೊಂಡು ತಮ್ಮ ಹೌಸಿಂಗ್ ಬೋರ್ಡ್ ಬಡಾವಣೆಯಲ್ಲಿರುವ ಅವರ ನಿವಾಸದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರ ಸಭೆ ಮಾಡಿ ಆ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷರಾದ ಮೇಲೆ ಮೊದಲ ಬಾರಿಗೆ ಬೆಂಗಳೂರಿಗೆ ಬರುವುದರಿಂದ ಮತ್ತು ರಾಜ್ಯ ಮತ್ತು ಕೇಂದ್ರ ಸರ್ಕಾರದ ಆಡಳಿತದ ವಿರುದ್ಧ ನಂಜನಗೂಡು ವಿಧಾನಸಭಾ ಕ್ಷೇತ್ರದ ಪಕ್ಷದ ಟಿಕೆಟ್ ವಿಷಯದ ಬಗ್ಗೆ ಚರ್ಚಿಸಿದರು.

ಐವತ್ತು ವರ್ಷ ಹಿಂದೆ ನಿಜಲಿಂಗಪ್ಪ ಅಧ್ಯಕ್ಷರಾಗಿದ್ದರು ನಂತರ ದಿನದಲ್ಲಿ ಚುನಾವಣೆಯ ಮೂಲಕ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿರುವುದು ಪಕ್ಷಕ್ಕೆ ಹೆಚ್ಚಿನ ಬಲಬಂದಂತೆ ಆಗಿದೆ ಹೊಸ ಸಂಚಲನ ಮೂಡಿದೆ ಮಲ್ಲಿಕಾರ್ಜುನ ಖರ್ಗೆ ಅವರು ಆಯ್ಕೆಯಾಗಿರುವುದು ರಾಜ್ಯ ಮತ್ತು ದೇಶ ಎಮ್ಮೆ ಪಡುವ ವಿಷಯ ವಾಗಿದೆ ಎಂದರು ಪಕ್ಷಕ್ಕೆ ಮುಂದಿನ ಚುನಾವಣೆಗಳಿಗೆ ಇವರ ನಾಯಕತ್ವ ದೊಡ್ಡ ಶಕ್ತಿಯಾಗಲಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಆಡಳಿತ ಪಕ್ಷದವರು ದೇಶದಲ್ಲಿ ಕೋಮುವಾದ ಸೃಷ್ಟಿಸುವಲ್ಲಿ ಮುಂಚೂಣಿಯಲ್ಲಿದ್ದಾರೆ ಕೃಷಿ ಗ್ರಾಮೀಣಾಭಿವೃದ್ಧಿ ಅಲ್ಪಸಂಖ್ಯಾತರ ವಿಷಯದಲ್ಲಿ ಅಭಿವೃದ್ಧಿ ಮಾಡುವಲ್ಲಿ ಹಿಂದೆ ಸರಿದಿದ್ದಾರೆ ಮತ್ತು ರಾಜ್ಯ ಮತ್ತು ಕೇಂದ್ರ ಸರ್ಕಾರದಲ್ಲಿ ಸರ್ವಾಧಿಕಾರಿ ಧೋರಣೆ, ಅಧಿಕಾರ ಮಾಡುತ್ತಿದ್ದಾರೆ.

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರ ಶೂನ್ಯವಾಗಿದೆ.
ಈ ಕ್ಷೇತ್ರದಲ್ಲಿ ಈ ಬಾರಿ ನಿಮ್ಮ ಬೆಂಬಲಿಗರು ನಿಮ್ಮನ್ನೇ ಅಭ್ಯರ್ಥಿ ಎಂದು ಬಿಂಬಿಸುತ್ತಿದ್ದಾರೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದವರು ಕಾಂಗ್ರೆಸ್ ಪಕ್ಷದಲ್ಲಿ ತನ್ನದೇ ಆದ ಸಿದ್ಧಾಂತವಿದೆ ನಾನು ರಾಜಕೀಯ ಮಾಡುತ್ತಿರುವುದು ಅಭಿವೃದ್ಧಿಗೋಸ್ಕರ ಅಧಿಕಾರಕ್ಕೆ ಅಲ್ಲ ಈ ಕ್ಷೇತ್ರದಲ್ಲಿ ನಾನು ಕೂಡ ಅಭಿವೃದ್ಧಿ ಕೆಲಸ ಮಾಡಿದ್ದೇನೆ ಕ್ಷೇತ್ರದ ಜನ ಯಾರಿಗೆ ಹೇಳುತ್ತಾರೋ ಅವರಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡುತ್ತಾರೆ ಎಂದು ಹೇಳಿದರು.

ಕಾಂಗ್ರೆಸ್ ಅಂದರೆ ಚಳುವಳಿ ನಾನು ಸೇರಿ ಎಲ್ಲರೂ ಕಾಂಗ್ರೆಸ್ ಪಕ್ಷದ ಅಡಿಯಲ್ಲಿ ಕೆಲಸ ಮಾಡಬೇಕು ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷರಾದ ಮೇಲೆ ಪಕ್ಷದಲ್ಲಿ ಬದಲಾವಣೆ ಉಂಟಾಗಿದೆ ಇವರು ಜಾತಿ ಕೋಮುವಾದ ಪರ ರಾಜಕೀಯ ಮಾಡಿದವರು ಅಲ್ಲ ಸರ್ವತೋಮುಖವಾಗಿ ಎಲ್ಲಾ ಜನಾಂಗದವರನ್ನು ಒಟ್ಟುಗೂಡಿಸಿಕೊಂಡು ಪಕ್ಷವನ್ನು ಬೆಳೆಸಿದವರು ಅಧ್ಯಕ್ಷರಾದ ಮೇಲೆ ಪಕ್ಷದಲ್ಲಿ ಹೊಸ ಸಂಚಲನ ಮೂಡಿದೆ ಎಂದರು.

ಈ ಸಂದರ್ಭದಲ್ಲಿ ಬುಲೆಟ್ ಮಾದೇವಪ್ಪ ಇಂಧನ ಬಾಬು, ಮೂಗ್ ಶೆಟ್ಟಿ, ಕೆಂಪಣ್ಣ, ಬಸವಗೌಡ ,ನಾಸೀರ್, ಚಾಮರಾಜ್, ನಟರಾಜ್ ಪಿ, ಶ್ರೀನಿವಾಸ್ ಸ್ವಾಮಿ, ಸಿದ್ದೇಶ್, ಶ್ರೀನಿವಾಸ್ ,ಸೇರಿದಂತೆ ನೂರಾರು ಮುಖಂಡರು ಕಾರ್ಯಕರ್ತರು ಭಾಗವಹಿಸಿದ್ದರು.

andolana

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

4 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

7 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

11 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

13 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

14 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

15 hours ago