ಎಚ್.ಡಿ.ಕೋಟೆ: ಎರಡು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಎಚ್.ಡಿ.ಕೋಟೆ ತಾಲ್ಲೂಕಿನ ಕಳಸೂರು ಗ್ರಾಮದ ನಿವಾಸಿ ಅನಿಲ್ ಎಂಬುವವರಿಗೆ ಆರ್.ಧ್ರುವನಾರಾಯಣ್ ಅಭಿಮಾನಿ ಬಳಗದ ಸದಸ್ಯರು ಧನ ಸಹಾಯ ಹಾಗೂ ಆಹಾರ ಕಿಟ್ ವಿತರಣೆ ಮಾಡಿದರು.
ಕಳಸೂರು ಗ್ರಾಮದ ಅನಿಲ್ ಎಂಬುವವರು ಕಳೆದ ಕೆಲ ವರ್ಷಗಳಿಂದ ಎರಡು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು. ಜೀವನಕ್ಕೆ ಆಸರೆಯಾದ ಮಗನಿಗೆ ಈ ರೀತಿ ಅನಾರೋಗ್ಯ ಕಾಡುತ್ತಿದೆ ಎಂದು ಪೋಷಕರು ತೀವ್ರ ದುಃಖದಲ್ಲಿದ್ದರು.
ವಿಷಯ ತಿಳಿದು ಅನಿಲ್ ಮನೆಗೆ ಭೇಟಿ ನೀಡಿದ ಆರ್.ಧ್ರುವನಾರಾಯಣ್ ಅಭಿಮಾನಿ ಬಳಗದ ಸದಸ್ಯರು, ಧನ ಸಹಾಯ ಹಾಗೂ ಆಹಾರ ಕಿಟ್ ವಿತರಣೆ ಮಾಡಿದರು.
ಈ ವೇಳೆ ಆರ್.ಧ್ರುವನಾರಾಯಣ್ ಬಳಗದ ಅಧ್ಯಕ್ಷ ಎಚ್.ಸಿ.ನರಸಿಂಹಮೂರ್ತಿ, ಕಾರ್ಯದರ್ಶಿ ಮಂಜು ಮುಳ್ಳೂರು, ಯೂತ್ ಕಾಂಗ್ರೆಸ್ ಅಧ್ಯಕ್ಷ ಶಿವರಾಜ್, ನಾಗರಾಜ್ ಉಯ್ಯಂಬಳ್ಳಿ ಸೇರಿದಂತೆ ಹಲವರು ಹಾಜರಿದ್ದರು.
ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…
ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…
ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…
ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…
ಎಸ್.ಎಸ್.ಭಟ್ ಸುತ್ತಲಿನ ಕ್ರಷರ್ನಿಂದ ತಂದು ಹಾಕುತ್ತಿರುವ ರಾಶಿ ದೂಳಿನಿಂದ ತುಂಬುತ್ತಿದೆ ಕೆರೆ; ಗ್ರಾಮಸ್ಥರ ಆಕ್ರೋಶ ನಂಜನಗೂಡು: ಮಳೆ ಬಂದರೆ ನೀರಿನಿಂದ…