ಮೈಸೂರು

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ ಹಣದೊಂದಿಗೆ ಲೋಕಾಯುಕ್ತ ಬಲೆಗೆ ಬಿದ್ದಿರು ಘಟನೆ ಸಾಲಿಗ್ರಾಮ ತಾಲೂಕಿನ ಕರ್ಪೂರವಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ.

ರಾಂಪುರ ಗ್ರಾಮದ ಗೌರಮ್ಮ ಹಾಗೂ ಭಾಸ್ಕರ್‌ ಎಂಬುವವರು ಮನೆ ನಿವೇಶನವನ್ನು ಇ-ಸ್ವತ್ತು ಮಾಡಿ ಕೊಡುವಂತೆ ಅರ್ಜಿ ಸಲ್ಲಿಸಿದ್ದರು. ಗ್ರಾಮ ಪಂಚಾಯಿತಿಗೆ ಇಬ್ಬರು ಅರ್ಜಿದಾರರು ಅರ್ಜಿ ಸಲ್ಲಿಸುವಾಗ ತಮ್ಮ ತಮ್ಮ ಆಸ್ತಿಗೆ ಸಂಬಂಧಪಟ್ಟ ದಾಖಲೆ ನೀಡಿದ್ದರೂ ಪಿಡಿಒ ಕುಳ್ಳೇಗೌಡ ಇ-ಸ್ವತ್ತು ಮಾಡಿ ಕೊಟ್ಟಿರಲಿಲ್ಲ.

ಹೀಗಾಗಿ, ಅರ್ಜಿದಾರರು ಪಿಡಿಒಗೆ ಕರೆ ಮಾಡಿ ಇ-ಸ್ವತ್ತು ಮಾಡಿಲ್ಲ ಏಕೆ ಎಂದು ಕೇಳಿದಾಗ ಪಿಡಿಒ ಹಣಕ್ಕೆ ಒತ್ತಾಯ ಮಾಡಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸೋಮವಾರಪೇಟೆ: ಹಿರಿಕರ ಗ್ರಾಮದಲ್ಲಿ ಮಳೆಗಾಗಿ ದೇವರ ಮೊರೆ

ಸೋಮವಾರಪೇಟೆ: ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲ್ಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹಿರಿಕರ ಗ್ರಾಮದ ಕೃಷಿಕರು, ಗ್ರಾಮದ…

4 mins ago

ರಾಜ್ಯದಲ್ಲೇ ಕಲಬುರ್ಗಿಯಲ್ಲಿ ಗರಿಷ್ಠ ತಾಪಮಾನ ದಾಖಲು

ಕಲಬುರ್ಗಿ: ಇಂದು(ಏಪ್ರಿಲ್.‌15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ಜಿಲ್ಲೆಯ ನಾಲ್ಕು…

7 mins ago

ಅಯೋಧ್ಯೆ ಶ್ರೀರಾಮನ ದರ್ಶನ ಪಡೆದ ರಾಜ್ಯದ ಕಾಂಗ್ರೆಸ್‌ ಶಾಸಕರು

ಲಕ್ನೋ: ಕರ್ನಾಟಕ ಕಾಂಗ್ರೆಸ್‌ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು. 12 ಮಂದಿ ಶಾಸಕರು ಇಂದು…

9 mins ago

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್‌ ಮಾಜಿ…

15 mins ago

ಪ್ರಧಾನಿ ನರೇಂದ್ರ ಮೋದಿಗೆ ಮನವಿ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…

1 hour ago

ಅಮೇರಿಕಾ-ಇರಾನ್‌ ಸಂಧಾನ: ಪಾಕ್‌ನಲ್ಲೇ 2ನೇ ಸುತ್ತಿನ ಮಾತುಕತೆ

ವಾಷಿಂಗ್ಟನ್:‌ ಇರಾನ್‌ ಜೊತೆ ಎರಡನೇ ಸುತ್ತಿನ ಮಾತುಕತೆ ಮುಂದಿನ ಎರಡು ದಿನಗಳಲ್ಲಿ ನಡೆಯಬಹುದು ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌…

1 hour ago