yadhuveer wadiyar
ಮೈಸೂರು: ಮೈಸೂರಿನ ಹೊರ ವಲಯದಲ್ಲಿ ರಾಷ್ಟ್ರೀಯ ಹೆದ್ದಾರಿಯ ಬಳಿ ನೂತನ ಪಾದಚಾರಿ ಸೇತುವೆ ನಿರ್ಮಿಸಲಾಗುತ್ತಿದ್ದು, ಅತಿ ಶೀಘ್ರದಲ್ಲೇ ಇದು ಪೂರ್ಣಗೊಳ್ಳಲಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.
ಮೈಸೂರಿನ ರಾಷ್ಟ್ರೀಯ ಹೆದ್ದಾರಿಯ ಕೆ.ಆರ್. ಮಿಲ್ ಬಳಿ ನಡೆಯುತ್ತಿರುವ ಪಾದಚಾರಿ ಸೇತುವೆ ಕಾಮಗಾರಿಯನ್ನು ಪರಿಶೀಲಿಸಿದ ನಂತರ ಸೋಮವಾರ ಸುದ್ದಿಗಾರರೊಂದಿಗೆ ಯದುವೀರ್ ಒಡೆಯರ್ ಮಾತನಾಡಿದರು.
ರಾಷ್ಟ್ರೀಯ ಹೆದ್ದಾರಿಯನ್ನು ದಾಟುವುದು ಕಷ್ಟವಾಗುತ್ತಿತ್ತು. ಈ ಬಗ್ಗೆ ಜನರು ಕುಂದುಕೊರತೆ ಹೇಳಿಕೊಂಡಾಗ ಕೂಡಲೇ ಇದನ್ನು ನಿರ್ಮಿಸುವ ಕುರಿತು ಕ್ರಮ ಕೈಗೊಳ್ಳಲಾಯಿತು ಎಂದರು.
ಕಾಮಗಾರಿ ಕೆಲಸ ತ್ವರಿತ ಗತಿಯಲ್ಲಿ ಸಾಗುತ್ತಿದ್ದು, ಅತಿ ಶೀಘ್ರದಲ್ಲೇ ಇದನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಂಸದರು ತಿಳಿಸಿದರು.
ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಎಲ್ಲ ರೀತಿಯ ಕೆಲಸಗಳನ್ನು ಮಾಡಲಾಗುವುದು. ಅಭಿವೃದ್ಧಿಯ ಜೊತೆಗೆ ಜನೋಪಯೋಗಿ ಕೆಲಸಗಳಿಗೂ ಆದ್ಯತೆ ನೀಡಲಾಗುವುದು ಎಂದು ಯದುವೀರ್ ಒಡೆಯರ್ ಹೇಳಿದರು.
ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…
ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು…