Penguin Park at Mysore Karanji Lake Eshwara Khandre
ಬೆಂಗಳೂರು : ಮೈಸೂರು ಮೃಗಾಲಯಕ್ಕೆ ಹೊಂದಿಕೊಂಡಿರುವ ಕಾರಂಜಿ ಕೆರೆಯಲ್ಲಿ ಮತ್ಸ್ಯಾಗಾರದ ಬದಲಿಗೆ ಪೆಂಗ್ವಿನ್ ಪಾರ್ಕ್ ನಿರ್ಮಿಸಲು ಪ್ರಸ್ತಾವನೆ ಸಲ್ಲಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವಿಕಾಸಸೌಧದಲ್ಲಿಂದು ನಡೆದ ಕರ್ನಾಟಕ ಮೃಗಾಲಯ ಪ್ರಾಧಿಕಾರದ 159ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಮತ್ಸ್ಯಾಗಾರದ ಕಟ್ಟಡದಲ್ಲಿ ಪೆಂಗ್ವಿನ್ ಧಾಮ ಮಾಡುವುದು ಸೂಕ್ತವೆಂದು ತಜ್ಞರು ಅಭಿಪ್ರಾಯಪಟ್ಟಿರುವ ಹಿನ್ನೆಲೆಯಲ್ಲಿ ಕೂಡಲೇ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದರು.
ಹೆಚ್ಚು ಆಕರ್ಷಕಗೊಳಿಸಲು ಸೂಚನೆ: ಮೃಗಾಲಯಗಳಲ್ಲಿ ಆಧುನಿಕ ಸೌಲಭ್ಯ ಕಲ್ಪಿಸಿದರೆ, ಹೊಸ ವನ್ಯಜೀವಿಗಳು ಸೇರ್ಪಡೆಯಾದರೆ ಪ್ರವಾಸಿಗರಿಗೆ ಹೆಚ್ಚಿನ ಆಕರ್ಷಣೆ ಇರುತ್ತದೆ. ಈ ನಿಟ್ಟಿನಲ್ಲಿ ವಿದೇಶಿ ಮೃಗಾಲಯಗಳೊಂದಿಗೆ ವಿನಿಮಯ ಕಾರ್ಯಕ್ರಮಕ್ಕೆ ಕ್ರಮ ವಹಿಸಬೇಕು ಎಂದು ಸೂಚಿಸಿದರು.
ಮುಂದಿನ 5 ವರ್ಷಗಳಲ್ಲಿ ಆಯಾ ಮೃಗಾಲಯಗಳು ತಮ್ಮ ಖರ್ಚು, ವೆಚ್ಚವನ್ನು ತಾವೇ ನಿರ್ವಹಿಸಲು ಶಕ್ತವಾಗುವಂತೆ ಮತ್ತು ಆರ್ಥಿಕ ಸ್ವಾವಲಂಬನೆ ಸಾಧಿಸಲು ಅನುವಾಗುವಂತೆ ಯೋಜನೆ ರೂಪಿಸಲು ತಿಳಿಸಿದರು.
ಗಣಿ ಬಾಧಿತ ಜಿಲ್ಲೆಗಳಲ್ಲಿರುವ ಮೃಗಾಲಯಗಳ ಅಭಿವೃದ್ಧಿಗೆ ಕೆ.ಎಂ.ಇ.ಆರ್.ಸಿ. ನಿಧಿಯನ್ನು ಬಳಕೆ ಮಾಡಿಕೊಳ್ಳುವಂತೆ ತಿಳಿಸಿದ ಅವರು, ದಾವಣಗೆರೆಯ ಮೃಗಾಲಯ ಅಭಿವೃದ್ಧಿಗೆ 2 ಕೋಟಿ ರೂ. ಬಿಡುಗಡೆಗೆ ಅನುಮೋದನೆ ನೀಡಿದರು.
ಬೀದರ್ ನಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ಪಕ್ಷಿಧಾಮ: ಬೀದರ್ ನಲ್ಲಿ ವಿದೇಶೀ ಹಕ್ಕಿ, ಪಕ್ಷಿಗಳ ವಿಶಿಷ್ಟವಾದ ಪಕ್ಷಿಲೋಕವನ್ನು ನಿರ್ಮಿಸಲು ವಿಸ್ತೃತ ಯೋಜನಾ ವರದಿ ಸಿದ್ಧಪಡಿಸುವಂತೆ ತಿಳಿಸಿದ ಸಚಿವರು, ಈ ಯೋಜನೆಗೆ 20 ಕೋಟಿ ರೂ.ಗಳನ್ನು ಹಂಚಿಕೆ ಮಾಡಲು ಸೂಚಿಸಿದರು.
ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…
ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.15) ಸಂಜೆ ಅಕಾಲಿಕವಾಗಿ ಮಳೆ ಸುರಿದು…
ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…
ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…
ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…
ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…