ಮೈಸೂರು

ಮೈಸೂರು ಕಾರಂಜಿ ಕೆರೆಯಲ್ಲಿ ಪೆಂಗ್ವಿನ್ ಪಾರ್ಕ್: ಈಶ್ವರ ಖಂಡ್ರೆ

ಬೆಂಗಳೂರು : ಮೈಸೂರು ಮೃಗಾಲಯಕ್ಕೆ ಹೊಂದಿಕೊಂಡಿರುವ ಕಾರಂಜಿ ಕೆರೆಯಲ್ಲಿ ಮತ್ಸ್ಯಾಗಾರದ ಬದಲಿಗೆ ಪೆಂಗ್ವಿನ್ ಪಾರ್ಕ್ ನಿರ್ಮಿಸಲು ಪ್ರಸ್ತಾವನೆ ಸಲ್ಲಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವಿಕಾಸಸೌಧದಲ್ಲಿಂದು ನಡೆದ ಕರ್ನಾಟಕ ಮೃಗಾಲಯ ಪ್ರಾಧಿಕಾರದ 159ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಮತ್ಸ್ಯಾಗಾರದ ಕಟ್ಟಡದಲ್ಲಿ ಪೆಂಗ್ವಿನ್ ಧಾಮ ಮಾಡುವುದು ಸೂಕ್ತವೆಂದು ತಜ್ಞರು ಅಭಿಪ್ರಾಯಪಟ್ಟಿರುವ ಹಿನ್ನೆಲೆಯಲ್ಲಿ ಕೂಡಲೇ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದರು.

ಹೆಚ್ಚು ಆಕರ್ಷಕಗೊಳಿಸಲು ಸೂಚನೆ: ಮೃಗಾಲಯಗಳಲ್ಲಿ ಆಧುನಿಕ ಸೌಲಭ್ಯ ಕಲ್ಪಿಸಿದರೆ, ಹೊಸ ವನ್ಯಜೀವಿಗಳು ಸೇರ್ಪಡೆಯಾದರೆ ಪ್ರವಾಸಿಗರಿಗೆ ಹೆಚ್ಚಿನ ಆಕರ್ಷಣೆ ಇರುತ್ತದೆ. ಈ ನಿಟ್ಟಿನಲ್ಲಿ ವಿದೇಶಿ ಮೃಗಾಲಯಗಳೊಂದಿಗೆ ವಿನಿಮಯ ಕಾರ್ಯಕ್ರಮಕ್ಕೆ ಕ್ರಮ ವಹಿಸಬೇಕು ಎಂದು ಸೂಚಿಸಿದರು.

ಮುಂದಿನ 5 ವರ್ಷಗಳಲ್ಲಿ ಆಯಾ ಮೃಗಾಲಯಗಳು ತಮ್ಮ ಖರ್ಚು, ವೆಚ್ಚವನ್ನು ತಾವೇ ನಿರ್ವಹಿಸಲು ಶಕ್ತವಾಗುವಂತೆ ಮತ್ತು ಆರ್ಥಿಕ ಸ್ವಾವಲಂಬನೆ ಸಾಧಿಸಲು ಅನುವಾಗುವಂತೆ ಯೋಜನೆ ರೂಪಿಸಲು ತಿಳಿಸಿದರು.

ಗಣಿ ಬಾಧಿತ ಜಿಲ್ಲೆಗಳಲ್ಲಿರುವ ಮೃಗಾಲಯಗಳ ಅಭಿವೃದ್ಧಿಗೆ ಕೆ.ಎಂ.ಇ.ಆರ್.ಸಿ. ನಿಧಿಯನ್ನು ಬಳಕೆ ಮಾಡಿಕೊಳ್ಳುವಂತೆ ತಿಳಿಸಿದ ಅವರು, ದಾವಣಗೆರೆಯ ಮೃಗಾಲಯ ಅಭಿವೃದ್ಧಿಗೆ 2 ಕೋಟಿ ರೂ. ಬಿಡುಗಡೆಗೆ ಅನುಮೋದನೆ ನೀಡಿದರು.

ಬೀದರ್ ನಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ಪಕ್ಷಿಧಾಮ: ಬೀದರ್ ನಲ್ಲಿ ವಿದೇಶೀ ಹಕ್ಕಿ, ಪಕ್ಷಿಗಳ ವಿಶಿಷ್ಟವಾದ ಪಕ್ಷಿಲೋಕವನ್ನು ನಿರ್ಮಿಸಲು ವಿಸ್ತೃತ ಯೋಜನಾ ವರದಿ ಸಿದ್ಧಪಡಿಸುವಂತೆ ತಿಳಿಸಿದ ಸಚಿವರು, ಈ ಯೋಜನೆಗೆ 20 ಕೋಟಿ ರೂ.ಗಳನ್ನು ಹಂಚಿಕೆ ಮಾಡಲು ಸೂಚಿಸಿದರು.

ಆಂದೋಲನ ಡೆಸ್ಕ್

Recent Posts

ಸಿಎಂಗೆ ವಿದ್ಯಾರ್ಥಿಗಳ ಪತ್ರ

ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…

1 hour ago

ದಿವ್ಯ ಎಂಬ ಅಂದಿನ ಕಾಲದ ಪಣ ಪರೀಕ್ಷೆ

ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…

1 hour ago

ಎಮ್ಮೆ ನಿನಗೆ ಸಾಟಿ ಇಲ್ಲ…

ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…

2 hours ago

ಭಾನುವಾರದ ಪುರವಣಿಗಳಲ್ಲಿ ಸಾಹಿತ್ಯ ಯಾಕೆ ಮಾಯ?

ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…

2 hours ago

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

13 hours ago