ಮೈಸೂರು

ಮೈಸೂರು ಕಾರಂಜಿ ಕೆರೆಯಲ್ಲಿ ಪೆಂಗ್ವಿನ್ ಪಾರ್ಕ್: ಈಶ್ವರ ಖಂಡ್ರೆ

ಬೆಂಗಳೂರು : ಮೈಸೂರು ಮೃಗಾಲಯಕ್ಕೆ ಹೊಂದಿಕೊಂಡಿರುವ ಕಾರಂಜಿ ಕೆರೆಯಲ್ಲಿ ಮತ್ಸ್ಯಾಗಾರದ ಬದಲಿಗೆ ಪೆಂಗ್ವಿನ್ ಪಾರ್ಕ್ ನಿರ್ಮಿಸಲು ಪ್ರಸ್ತಾವನೆ ಸಲ್ಲಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವಿಕಾಸಸೌಧದಲ್ಲಿಂದು ನಡೆದ ಕರ್ನಾಟಕ ಮೃಗಾಲಯ ಪ್ರಾಧಿಕಾರದ 159ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಮತ್ಸ್ಯಾಗಾರದ ಕಟ್ಟಡದಲ್ಲಿ ಪೆಂಗ್ವಿನ್ ಧಾಮ ಮಾಡುವುದು ಸೂಕ್ತವೆಂದು ತಜ್ಞರು ಅಭಿಪ್ರಾಯಪಟ್ಟಿರುವ ಹಿನ್ನೆಲೆಯಲ್ಲಿ ಕೂಡಲೇ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದರು.

ಹೆಚ್ಚು ಆಕರ್ಷಕಗೊಳಿಸಲು ಸೂಚನೆ: ಮೃಗಾಲಯಗಳಲ್ಲಿ ಆಧುನಿಕ ಸೌಲಭ್ಯ ಕಲ್ಪಿಸಿದರೆ, ಹೊಸ ವನ್ಯಜೀವಿಗಳು ಸೇರ್ಪಡೆಯಾದರೆ ಪ್ರವಾಸಿಗರಿಗೆ ಹೆಚ್ಚಿನ ಆಕರ್ಷಣೆ ಇರುತ್ತದೆ. ಈ ನಿಟ್ಟಿನಲ್ಲಿ ವಿದೇಶಿ ಮೃಗಾಲಯಗಳೊಂದಿಗೆ ವಿನಿಮಯ ಕಾರ್ಯಕ್ರಮಕ್ಕೆ ಕ್ರಮ ವಹಿಸಬೇಕು ಎಂದು ಸೂಚಿಸಿದರು.

ಮುಂದಿನ 5 ವರ್ಷಗಳಲ್ಲಿ ಆಯಾ ಮೃಗಾಲಯಗಳು ತಮ್ಮ ಖರ್ಚು, ವೆಚ್ಚವನ್ನು ತಾವೇ ನಿರ್ವಹಿಸಲು ಶಕ್ತವಾಗುವಂತೆ ಮತ್ತು ಆರ್ಥಿಕ ಸ್ವಾವಲಂಬನೆ ಸಾಧಿಸಲು ಅನುವಾಗುವಂತೆ ಯೋಜನೆ ರೂಪಿಸಲು ತಿಳಿಸಿದರು.

ಗಣಿ ಬಾಧಿತ ಜಿಲ್ಲೆಗಳಲ್ಲಿರುವ ಮೃಗಾಲಯಗಳ ಅಭಿವೃದ್ಧಿಗೆ ಕೆ.ಎಂ.ಇ.ಆರ್.ಸಿ. ನಿಧಿಯನ್ನು ಬಳಕೆ ಮಾಡಿಕೊಳ್ಳುವಂತೆ ತಿಳಿಸಿದ ಅವರು, ದಾವಣಗೆರೆಯ ಮೃಗಾಲಯ ಅಭಿವೃದ್ಧಿಗೆ 2 ಕೋಟಿ ರೂ. ಬಿಡುಗಡೆಗೆ ಅನುಮೋದನೆ ನೀಡಿದರು.

ಬೀದರ್ ನಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ಪಕ್ಷಿಧಾಮ: ಬೀದರ್ ನಲ್ಲಿ ವಿದೇಶೀ ಹಕ್ಕಿ, ಪಕ್ಷಿಗಳ ವಿಶಿಷ್ಟವಾದ ಪಕ್ಷಿಲೋಕವನ್ನು ನಿರ್ಮಿಸಲು ವಿಸ್ತೃತ ಯೋಜನಾ ವರದಿ ಸಿದ್ಧಪಡಿಸುವಂತೆ ತಿಳಿಸಿದ ಸಚಿವರು, ಈ ಯೋಜನೆಗೆ 20 ಕೋಟಿ ರೂ.ಗಳನ್ನು ಹಂಚಿಕೆ ಮಾಡಲು ಸೂಚಿಸಿದರು.

ಆಂದೋಲನ ಡೆಸ್ಕ್

Recent Posts

ವಿಧಾನಸಭೆಯಲ್ಲಿ ಹನೂರು ಎನ್‌ಕೌಂಟರ್‌ ಸದ್ದು: ಗದ್ದಲ ಕೋಲಾಹಲ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್‌ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್‌,…

4 hours ago

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

7 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

7 hours ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

8 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

11 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

11 hours ago