ದಸರಾ ರಜೆಗಾಗಿ ಊರಿಗೆ ಬಂದ ಜನ: ಟ್ರಾಫಿಕ್ ಜಾಂ
ದಸರಾ ಹಬ್ಬ ಹಾಗೂ ವಾರಾಂತ್ಯದ ಸಾಲು ರಜೆಗಳ ಹಿನ್ನೆಲೆಯಲ್ಲಿ ಶನಿವಾರ ಭಾರಿ ಸಂಖ್ಯೆಯಲ್ಲಿ ಸಾರ್ವಜನಿಕರು ರಾಜ್ಯದ ಇತರೆ ನಗರಗಳು ಹಾಗೂ ಹೊರ ರಾಜ್ಯದಿಂದ ಬಂದ ಪರಿಣಾಮ ನಗರದ ಬಸ್ ನಿಲ್ದಾಣ, ಕೇಂದ್ರೀಯ ಬಸ್ ನಿಲ್ದಾಣ, ಹಾಗೂ ರೈಲು ನಿಲ್ದಾಣವಿರುವ ಜೆ. ಎಲ್. ಬಿ. ರಸ್ತೆ ಹಾಗೂ ಮೈಸೂರು ನಂಜನಗೂಡು, ಮೈಸೂರು ಎಚ್ ಡಿ ಕೋಟೆ, ಮೈಸೂರು ಹುಣಸೂರು ರಸ್ತೆಗಳಲ್ಲಿ ವಾಹನ ಸಂಚಾರ ದಟ್ಟಣೆ ಉಂಟಾಗಿತ್ತು. ದಸರಾ ಹಬ್ಬ ಹಾಗೂ ವಾರಾಂತ್ಯದ ಸಾಲು ರಜೆಗಳ ಹಿನ್ನೆಲೆಯಲ್ಲಿ ಭಾರಿ ಸಂಖ್ಯೆಯಲ್ಲಿ ಸಾರ್ವಜನಿಕರು ರಾಜ್ಯದ ಇತರೆ ನಗರಗಳು ಹಾಗೂ ಹೊರ ರಾಜ್ಯದಿಂದ ಪ್ರವಾಸಿಗರು ಬಂದ ಪರಿಣಾಮ ನಗರದೆಲ್ಲೆಡೆ ವಾಹನ ಸಂಚಾರ ದಟ್ಟಣೆ ಉಂಟಾಗಿತ್ತು.
ಜನಸಂದಣಿಯ ವೇಳೆಯೇ ಮಳೆಯೂ ಆಗಿದ್ದರಿಂದ ವಿಪರೀತ ಸಂಚಾರ ದಟ್ಟಣೆ ಉಂಟಾಗಿ ವಾಹನ ಚಾಲಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಮಧ್ಯಾಹದಿಂದ ನಗರದ ರಸ್ತೆಗಳಲ್ಲಿ ವಾಹನ ಸಂಚಾರ ದಟ್ಟಣೆ ಕೊಂಚವೇ ಏರಿಕೆಯಾಯಿತು. ರಾತ್ರಿ 7 ರ ವೇಳೆಗೆ ಮೈಸೂರು, ನಂಜನಗೂಡು, ಎಚ್ ಡಿ ಕೋಟೆ. ಹಾಗೂ ಹುಣಸೂರು ರಸ್ತೆಗಳಲ್ಲಿ ವಾಹನ ಸಂಚಾರ ದಟ್ಟಣೆ ಉಂಟಾಗಿ ವಾಹನಗಳು ಮಂದಗತಿಯಲ್ಲಿ ಸಾಗಿದವು. ಇದೇ ವೇಳೆ ನಗರದ ಹಲವೆಡೆ ಅಲ್ಲಲ್ಲಿ ಜಿಟಿ ಜಿಟಿ ಮಳೆಯೂ ಸುರಿದ ಪರಿಣಾಮ ವಾಹನ ಸವಾರರು ಹೈರಾಣಾದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ದಾಸೋಹ ಭವನಕ್ಕೆ ಬರುವ…
ಬೆಂಗಳೂರು: ಮುಂದಿನ ಸಲ ಮಹಿಳಾ ಮೀಸಲಾತಿ ಬಂದರೆ ಮಗಳನ್ನೇ ಚುನಾವಣೆಗೆ ನಿಲ್ಲಿಸುತ್ತೇನೆ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ…
ಬೆಂಗಳೂರು: ನಾನು ರಾಜ್ಯ ರಾಜಕಾರಣಕ್ಕೆ ಬರುವ ಯೋಚನೆ ಇಲ್ಲ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು…
ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಹೊಸ ಬಾಂಬ್ ಸಿಡಿಸಿದ್ದಾರೆ. ರಾಜ್ಯ ಮುಖ್ಯ…
ಹನೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ ಹುಲಿಯೊಂದು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ…
ಟೆಲ್ ಅವಿವ್: ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ.25 ರಿಂದ 26ರವರೆಗೆ ಎರಡು ದಿನಗಳ ಭೇಟಿಗಾಗಿ ಇಸ್ರೇಲ್ಗೆ ಪ್ರಯಾಣಿಸಲಿದ್ದಾರೆ ಎಂದು…