ಮೈಸೂರು

ದಸರಾ ಹಿನ್ನೆಲೆ ನಗರದೆಲ್ಲೆಡೆ ಟ್ರಾಫಿಕ್‌ ಜಾಂ

ದಸರಾ ರಜೆಗಾಗಿ ಊರಿಗೆ ಬಂದ ಜನ: ಟ್ರಾಫಿಕ್ಜಾಂ

ದಸರಾ ಹಬ್ಬ ಹಾಗೂ ವಾರಾಂತ್ಯದ ಸಾಲು ರಜೆಗಳ ಹಿನ್ನೆಲೆಯಲ್ಲಿ ಶನಿವಾರ ಭಾರಿ ಸಂಖ್ಯೆಯಲ್ಲಿ ಸಾರ್ವಜನಿಕರು ರಾಜ್ಯದ ಇತರೆ ನಗರಗಳು ಹಾಗೂ ಹೊರ ರಾಜ್ಯದಿಂದ ಬಂದ ಪರಿಣಾಮ ನಗರದ ಬಸ್ನಿಲ್ದಾಣ, ಕೇಂದ್ರೀಯ ಬಸ್‌ ನಿಲ್ದಾಣ, ಹಾಗೂ  ರೈಲು ನಿಲ್ದಾಣವಿರುವ ಜೆ. ಎಲ್‌. ಬಿ. ರಸ್ತೆ ಹಾಗೂ ಮೈಸೂರು ನಂಜನಗೂಡು, ಮೈಸೂರು ಎಚ್‌ ಡಿ ಕೋಟೆ, ಮೈಸೂರು ಹುಣಸೂರು ರಸ್ತೆಗಳಲ್ಲಿ ವಾಹನ ಸಂಚಾರ ದಟ್ಟಣೆ ಉಂಟಾಗಿತ್ತು. ದಸರಾ ಹಬ್ಬ ಹಾಗೂ ವಾರಾಂತ್ಯದ ಸಾಲು ರಜೆಗಳ ಹಿನ್ನೆಲೆಯಲ್ಲಿ ಭಾರಿ ಸಂಖ್ಯೆಯಲ್ಲಿ ಸಾರ್ವಜನಿಕರು ರಾಜ್ಯದ ಇತರೆ ನಗರಗಳು ಹಾಗೂ ಹೊರ ರಾಜ್ಯದಿಂದ ಪ್ರವಾಸಿಗರು ಬಂದ ಪರಿಣಾಮ ನಗರದೆಲ್ಲೆಡೆ ವಾಹನ ಸಂಚಾರ ದಟ್ಟಣೆ ಉಂಟಾಗಿತ್ತು.

ಜನಸಂದಣಿಯ ವೇಳೆಯೇ ಮಳೆಯೂ ಆಗಿದ್ದರಿಂದ ವಿಪರೀತ ಸಂಚಾರ ದಟ್ಟಣೆ ಉಂಟಾಗಿ ವಾಹನ ಚಾಲಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಮಧ್ಯಾಹದಿಂದ ನಗರದ ರಸ್ತೆಗಳಲ್ಲಿ ವಾಹನ ಸಂಚಾರ ದಟ್ಟಣೆ ಕೊಂಚವೇ ಏರಿಕೆಯಾಯಿತು. ರಾತ್ರಿ 7 ವೇಳೆಗೆ ಮೈಸೂರು, ನಂಜನಗೂಡು, ಎಚ್ಡಿ ಕೋಟೆ. ಹಾಗೂ ಹುಣಸೂರು ರಸ್ತೆಗಳಲ್ಲಿ ವಾಹನ ಸಂಚಾರ ದಟ್ಟಣೆ ಉಂಟಾಗಿ ವಾಹನಗಳು ಮಂದಗತಿಯಲ್ಲಿ ಸಾಗಿದವು. ಇದೇ ವೇಳೆ ನಗರದ ಹಲವೆಡೆ ಅಲ್ಲಲ್ಲಿ ಜಿಟಿ ಜಿಟಿ ಮಳೆಯೂ ಸುರಿದ ಪರಿಣಾಮ ವಾಹನ ಸವಾರರು ಹೈರಾಣಾದರು.

andolana

Recent Posts

ಓದುಗರ ಪತ್ರ | ನೀರು ಬಿಟ್ಟು ರೈತರಿಗೆ ಅನುಕೂಲ ಕಲ್ಪಿಸಿ

ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…

7 hours ago

ಓದುಗರ ಪತ್ರ | ಈ ವಿಶಾಲ ಪಾರ್ಕ್‌ಗೆ ಬೇಕು ಶೌಚಾಲಯ

ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…

7 hours ago

ಓದುಗರ ಪತ್ರ | ಚರಂಡಿ ಸೇರುತ್ತಿರುವ ನೀರಿಗೆ ‘ತಡೆ’ಹಾಕಿ

ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…

7 hours ago

ನಾಡಿನುದ್ದಕ್ಕೂ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಕಂಪು

ಡಿಸೆಂಬರ್‌ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…

7 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಗಾಂಧಿ ವಾದಕ್ಕೆ ಮನಸೋತಿದ್ದ ಬಳ್ಳಾರಿ ಸಿದ್ದಮ್ಮ

ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…

7 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಆಹಾರದ ಕುರಿತು ಕೆಲವು ಚಿಲ್ಲರೆ ಪ್ರಯೋಗಗಳು

ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…

7 hours ago