ದಸರಾ ರಜೆಗಾಗಿ ಊರಿಗೆ ಬಂದ ಜನ: ಟ್ರಾಫಿಕ್ ಜಾಂ
ದಸರಾ ಹಬ್ಬ ಹಾಗೂ ವಾರಾಂತ್ಯದ ಸಾಲು ರಜೆಗಳ ಹಿನ್ನೆಲೆಯಲ್ಲಿ ಶನಿವಾರ ಭಾರಿ ಸಂಖ್ಯೆಯಲ್ಲಿ ಸಾರ್ವಜನಿಕರು ರಾಜ್ಯದ ಇತರೆ ನಗರಗಳು ಹಾಗೂ ಹೊರ ರಾಜ್ಯದಿಂದ ಬಂದ ಪರಿಣಾಮ ನಗರದ ಬಸ್ ನಿಲ್ದಾಣ, ಕೇಂದ್ರೀಯ ಬಸ್ ನಿಲ್ದಾಣ, ಹಾಗೂ ರೈಲು ನಿಲ್ದಾಣವಿರುವ ಜೆ. ಎಲ್. ಬಿ. ರಸ್ತೆ ಹಾಗೂ ಮೈಸೂರು ನಂಜನಗೂಡು, ಮೈಸೂರು ಎಚ್ ಡಿ ಕೋಟೆ, ಮೈಸೂರು ಹುಣಸೂರು ರಸ್ತೆಗಳಲ್ಲಿ ವಾಹನ ಸಂಚಾರ ದಟ್ಟಣೆ ಉಂಟಾಗಿತ್ತು. ದಸರಾ ಹಬ್ಬ ಹಾಗೂ ವಾರಾಂತ್ಯದ ಸಾಲು ರಜೆಗಳ ಹಿನ್ನೆಲೆಯಲ್ಲಿ ಭಾರಿ ಸಂಖ್ಯೆಯಲ್ಲಿ ಸಾರ್ವಜನಿಕರು ರಾಜ್ಯದ ಇತರೆ ನಗರಗಳು ಹಾಗೂ ಹೊರ ರಾಜ್ಯದಿಂದ ಪ್ರವಾಸಿಗರು ಬಂದ ಪರಿಣಾಮ ನಗರದೆಲ್ಲೆಡೆ ವಾಹನ ಸಂಚಾರ ದಟ್ಟಣೆ ಉಂಟಾಗಿತ್ತು.
ಜನಸಂದಣಿಯ ವೇಳೆಯೇ ಮಳೆಯೂ ಆಗಿದ್ದರಿಂದ ವಿಪರೀತ ಸಂಚಾರ ದಟ್ಟಣೆ ಉಂಟಾಗಿ ವಾಹನ ಚಾಲಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಮಧ್ಯಾಹದಿಂದ ನಗರದ ರಸ್ತೆಗಳಲ್ಲಿ ವಾಹನ ಸಂಚಾರ ದಟ್ಟಣೆ ಕೊಂಚವೇ ಏರಿಕೆಯಾಯಿತು. ರಾತ್ರಿ 7 ರ ವೇಳೆಗೆ ಮೈಸೂರು, ನಂಜನಗೂಡು, ಎಚ್ ಡಿ ಕೋಟೆ. ಹಾಗೂ ಹುಣಸೂರು ರಸ್ತೆಗಳಲ್ಲಿ ವಾಹನ ಸಂಚಾರ ದಟ್ಟಣೆ ಉಂಟಾಗಿ ವಾಹನಗಳು ಮಂದಗತಿಯಲ್ಲಿ ಸಾಗಿದವು. ಇದೇ ವೇಳೆ ನಗರದ ಹಲವೆಡೆ ಅಲ್ಲಲ್ಲಿ ಜಿಟಿ ಜಿಟಿ ಮಳೆಯೂ ಸುರಿದ ಪರಿಣಾಮ ವಾಹನ ಸವಾರರು ಹೈರಾಣಾದರು.
ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…
ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…
ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…
ಡಿಸೆಂಬರ್ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…
ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…
ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…