ಮೈಸೂರು: “ಕಾಂಗ್ರೆಸ್ ಮೈತ್ರಿ ಮಾಡಿಕೊಂಡರೆ ತಪ್ಪಲ್ಲ, ಬಿಜೆಪಿ ಮೈತ್ರಿ ಮಾಡಿಕೊಂಡರೆ ತಪ್ಪಾ? ಮೈತ್ರಿ ಸೋಲು ಗೆಲುವಿನ ಬಗ್ಗೆ ಜನ ತೀರ್ಮಾನಿಸುತ್ತಾರೆ” ಎಂದು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ವಿಚಾರವಾಗಿ ಕಾಂಗ್ರೆಸ್ ಮಾಡಿರುವ ಟೀಕೆಗಳಿಗೆ ಬಿಜೆಪಿ ಸಂಸದ ವಿ ಶ್ರೀನಿವಾಸ ಪ್ರಸಾದ್ ತಿರುಗೇಟು ನೀಡಿದ್ದಾರೆ.
ಸಮಸ್ಯೆಗೆ ಮೇಕೆದಾಟು ಏಕೈಕ ಪರಿಹಾರ
ಇನ್ನು ಕಾವೇರಿ ನೀರಿನ ವಿವಾದಕ್ಕೆ ಮೇಕೆದಾಟು ಯೋಜನೆ ಅನುಷ್ಠಾನವೇ ಏಕೈಕ ಪರಿಹಾರವಾಗಿದೆ. ಉತ್ತಮ ಮಳೆಯಾದಾಗ ಯಥೇಚ್ಛ ನೀರು ತಮಿಳುನಾಡಿಗೆ ಹರಿಯುತ್ತೆ. ಆದರೆ, ಮಳೆ ಕೊರತೆ ಉಂಟಾದಾಗ ಸಮಸ್ಯೆ ಎದುರಾಗುತ್ತದೆ. ಇನ್ನು ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಬಂದು ಮತ್ತೊಂದು ಅಣೆಕಟ್ಟು ನಿರ್ಮಾಣವಾದರೆ ಮಳೆ ಕೊರತೆ ಉಂಟಾದಾಗಲೂ ತಮಿಳುನಾಡಿಗೆ ನೀರು ಹರಿಸಬಹುದು. ಹೀಗಾಗಿ ಮೇಕೆದಾಟು ಅನುಷ್ಠಾನವಾದರೆ ಕಾವೇರಿ ಸಮಸ್ಯೆಗೆ ಪರಿಹಾರ ಸಿಗುತ್ತೆ ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ತಿಳಿಸಿದರು.
ಕಳೆದ 2 – 3 ತಿಂಗಳಿಂದ ರಾಜಕೀಯ ಹಾಗೂ ಹೋರಾಟಗಳಿಂದ ಶ್ರೀನಿವಾಸ್ ಪ್ರಸಾದ್ ದೂರ ಇದ್ದರು. ಆರೋಗ್ಯ ಕಾರಣಗಳಿಂದ ಯಾವ ಸಮಾರಂಭ ಹಾಗೂ ಸಾರ್ವಜನಿಕವಾಗಿ ಕಾಣಿಸಿಕೊಳ್ತಿರಲಿಲ್ಲ. ಜೊತೆಗೆ ಮುಂದಿನ ಬಾರಿ ನಾನು ಸಂಸತ್ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಚುನಾವಣೆಯಿಂದ ದೂರ ಉಳಿಯುತ್ತೇನೆ ಎಂದು ಘೋಷಿಸಿದ್ದರು. ಆದರೆ ಸಕ್ರಿಯ ರಾಜಕಾರಣದಲ್ಲಿ ಇರುವುದಾಗಿ ಭಾವುಕವಾಗಿ ತಿಳಿಸಿದ್ದರು. ಇದೀಗ ಆರೋಗ್ಯ ಸುಧಾರಿಸಿದ ಹಿನ್ನೆಲೆಯಲ್ಲಿ ಅವರು ಹೋರಾಟಕ್ಕೆ ಭಾಗಿಯಾಗಿದ್ದಾರೆ.
ಬೆಂಗಳೂರು: ಇಂದಿನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ಹಸ್ತಕ್ಷೇಪ ಮಾಡುತ್ತಿದ್ದಾರೆಂದು ಬೇಸರಗೊಂಡು ಸಚಿವ ಕೆ.ಜೆ.ಜಾರ್ಜ್ ಸಿಎಂ ಸಿದ್ದರಾಮಯ್ಯ…
ಬೆಂಗಳೂರು: ಕುಡಿದು ವಾಹನ ಚಾಲನೆ ಮಾಡಿ ಕಾರ್ಗಳಿಗೆ ಸರಣಿ ಅಪಘಾತ ಉಂಟು ಮಾಡಿದ ನಟ ಮಯೂರ್ ಪಟೇಲ್ ವಿರುದ್ಧ ಎಫ್ಐಆರ್…
ಮೈಸೂರು: ಜಿಲ್ಲೆಯಲ್ಲಿ ಕಾದು ಪ್ರಾಣಿಗಳ ಹಾವಳಿ ಮುಂದುವರಿದಿದ್ದು, ಕಣಿಯನಹುಂಡಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಗ್ರಾಮದ ಕೃಷ್ಣ ಎಂಬುವವರ ಜಮೀನಿನಲ್ಲಿ ಚಿರತೆ…
ನಂಜನಗೂಡು: ಗುಜರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಕ್ಷಾಂತರ ಮೌಲ್ಯದ ಪದಾರ್ಥಗಳು ಸುಟ್ಟು ಕರಕಲಾಗಿರುವ ಘಟನೆ ನಂಜನಗೂಡಿನ ಶಂಕರಪುರ ಬಡಾವಣೆಯಲ್ಲಿ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎನ್ಸಿಬಿ ದಾಳಿ ವೇಳೆ ಯಾವುದೇ ಮಾದಕ ವಸ್ತು ಪತ್ತೆಯಾಗಿಲ್ಲ ಎಂದು ಪೊಲೀಸ್ ಕಮಿಷನರ್ ಸೀಮಾ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದೆಹಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಕೈಗೊಂಡಿದ್ದು, ಕೆಮಿಕಲ್ ಘಟಕದಲ್ಲಿ ಲೇಬಲ್ ಇಲ್ಲದ ಖಾಲಿ ಬಾಟಲ್ಗಳನ್ನು…