ಮೈಸೂರು: “ಕಾಂಗ್ರೆಸ್ ಮೈತ್ರಿ ಮಾಡಿಕೊಂಡರೆ ತಪ್ಪಲ್ಲ, ಬಿಜೆಪಿ ಮೈತ್ರಿ ಮಾಡಿಕೊಂಡರೆ ತಪ್ಪಾ? ಮೈತ್ರಿ ಸೋಲು ಗೆಲುವಿನ ಬಗ್ಗೆ ಜನ ತೀರ್ಮಾನಿಸುತ್ತಾರೆ” ಎಂದು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ವಿಚಾರವಾಗಿ ಕಾಂಗ್ರೆಸ್ ಮಾಡಿರುವ ಟೀಕೆಗಳಿಗೆ ಬಿಜೆಪಿ ಸಂಸದ ವಿ ಶ್ರೀನಿವಾಸ ಪ್ರಸಾದ್ ತಿರುಗೇಟು ನೀಡಿದ್ದಾರೆ.
ಸಮಸ್ಯೆಗೆ ಮೇಕೆದಾಟು ಏಕೈಕ ಪರಿಹಾರ
ಇನ್ನು ಕಾವೇರಿ ನೀರಿನ ವಿವಾದಕ್ಕೆ ಮೇಕೆದಾಟು ಯೋಜನೆ ಅನುಷ್ಠಾನವೇ ಏಕೈಕ ಪರಿಹಾರವಾಗಿದೆ. ಉತ್ತಮ ಮಳೆಯಾದಾಗ ಯಥೇಚ್ಛ ನೀರು ತಮಿಳುನಾಡಿಗೆ ಹರಿಯುತ್ತೆ. ಆದರೆ, ಮಳೆ ಕೊರತೆ ಉಂಟಾದಾಗ ಸಮಸ್ಯೆ ಎದುರಾಗುತ್ತದೆ. ಇನ್ನು ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಬಂದು ಮತ್ತೊಂದು ಅಣೆಕಟ್ಟು ನಿರ್ಮಾಣವಾದರೆ ಮಳೆ ಕೊರತೆ ಉಂಟಾದಾಗಲೂ ತಮಿಳುನಾಡಿಗೆ ನೀರು ಹರಿಸಬಹುದು. ಹೀಗಾಗಿ ಮೇಕೆದಾಟು ಅನುಷ್ಠಾನವಾದರೆ ಕಾವೇರಿ ಸಮಸ್ಯೆಗೆ ಪರಿಹಾರ ಸಿಗುತ್ತೆ ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ತಿಳಿಸಿದರು.
ಕಳೆದ 2 – 3 ತಿಂಗಳಿಂದ ರಾಜಕೀಯ ಹಾಗೂ ಹೋರಾಟಗಳಿಂದ ಶ್ರೀನಿವಾಸ್ ಪ್ರಸಾದ್ ದೂರ ಇದ್ದರು. ಆರೋಗ್ಯ ಕಾರಣಗಳಿಂದ ಯಾವ ಸಮಾರಂಭ ಹಾಗೂ ಸಾರ್ವಜನಿಕವಾಗಿ ಕಾಣಿಸಿಕೊಳ್ತಿರಲಿಲ್ಲ. ಜೊತೆಗೆ ಮುಂದಿನ ಬಾರಿ ನಾನು ಸಂಸತ್ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಚುನಾವಣೆಯಿಂದ ದೂರ ಉಳಿಯುತ್ತೇನೆ ಎಂದು ಘೋಷಿಸಿದ್ದರು. ಆದರೆ ಸಕ್ರಿಯ ರಾಜಕಾರಣದಲ್ಲಿ ಇರುವುದಾಗಿ ಭಾವುಕವಾಗಿ ತಿಳಿಸಿದ್ದರು. ಇದೀಗ ಆರೋಗ್ಯ ಸುಧಾರಿಸಿದ ಹಿನ್ನೆಲೆಯಲ್ಲಿ ಅವರು ಹೋರಾಟಕ್ಕೆ ಭಾಗಿಯಾಗಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಕಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ಮಂಡ್ಯ: ಯುವಕ-ಯುವತಿಯರಿಗೆ ಆಸಕ್ತಿಯ ಕ್ಷೇತ್ರದಲ್ಲಿ ಉದ್ಯೋಗ ಮಾಡಲು ಉಚಿತ ಕೌಶಲ್ಯ ತರಬೇತಿ ಹಾಗೂ ಸ್ವಉದ್ಯೋಗ ನೀಡಲು ಮಾರ್ಗದರ್ಶನ ನೀಡಲು ಅಗತ್ಯ…
ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಅಭಾವವಿದ್ದು, ಪರಿಸ್ಥಿತಿ ಗಂಭೀರವಾಗಿದೆ ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಮನವಿ ಮಾಡಿದ್ದಾರೆ. ಈ…
ಅಹಮದಾಬಾದ್: 45,000 ಮೆಟ್ರಿಕ್ ಟನ್ ಎಲ್ಪಿಜಿ ಹೊತ್ತ ಶಿವಾಲಿಕ್ ಹಡಗು ಗುಜರಾತ್ನ ಮುಂದ್ರಾ ಬಂದರಿಗೆ ಬಂದು ತಲುಪಲಿದೆ. ಈ ಬಗ್ಗೆ…
ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ರೈತರ ಜೀವನಾಡಿ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 110.44 ಅಡಿಗೆ ಇಳಿದಿದೆ. ಈ ಬಗ್ಗೆ…
ಬೆಂಗಳೂರು: ಮಾರ್ಚ್.18ರಿಂದ ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆಗಳು ಪ್ರಾರಂಭವಾಗಲಿವೆ. ಪರೀಕ್ಷಾ ಅಕ್ರಮಗಳನ್ನು ತಡೆಯಲು ಮತ್ತು ಪಾರದರ್ಶಕತೆ ಕಾಪಾಡಲು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಬಿಡುಗಡೆ…