ಮೈಸೂರು: “ಕಾಂಗ್ರೆಸ್ ಮೈತ್ರಿ ಮಾಡಿಕೊಂಡರೆ ತಪ್ಪಲ್ಲ, ಬಿಜೆಪಿ ಮೈತ್ರಿ ಮಾಡಿಕೊಂಡರೆ ತಪ್ಪಾ? ಮೈತ್ರಿ ಸೋಲು ಗೆಲುವಿನ ಬಗ್ಗೆ ಜನ ತೀರ್ಮಾನಿಸುತ್ತಾರೆ” ಎಂದು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ವಿಚಾರವಾಗಿ ಕಾಂಗ್ರೆಸ್ ಮಾಡಿರುವ ಟೀಕೆಗಳಿಗೆ ಬಿಜೆಪಿ ಸಂಸದ ವಿ ಶ್ರೀನಿವಾಸ ಪ್ರಸಾದ್ ತಿರುಗೇಟು ನೀಡಿದ್ದಾರೆ.
ಸಮಸ್ಯೆಗೆ ಮೇಕೆದಾಟು ಏಕೈಕ ಪರಿಹಾರ
ಇನ್ನು ಕಾವೇರಿ ನೀರಿನ ವಿವಾದಕ್ಕೆ ಮೇಕೆದಾಟು ಯೋಜನೆ ಅನುಷ್ಠಾನವೇ ಏಕೈಕ ಪರಿಹಾರವಾಗಿದೆ. ಉತ್ತಮ ಮಳೆಯಾದಾಗ ಯಥೇಚ್ಛ ನೀರು ತಮಿಳುನಾಡಿಗೆ ಹರಿಯುತ್ತೆ. ಆದರೆ, ಮಳೆ ಕೊರತೆ ಉಂಟಾದಾಗ ಸಮಸ್ಯೆ ಎದುರಾಗುತ್ತದೆ. ಇನ್ನು ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಬಂದು ಮತ್ತೊಂದು ಅಣೆಕಟ್ಟು ನಿರ್ಮಾಣವಾದರೆ ಮಳೆ ಕೊರತೆ ಉಂಟಾದಾಗಲೂ ತಮಿಳುನಾಡಿಗೆ ನೀರು ಹರಿಸಬಹುದು. ಹೀಗಾಗಿ ಮೇಕೆದಾಟು ಅನುಷ್ಠಾನವಾದರೆ ಕಾವೇರಿ ಸಮಸ್ಯೆಗೆ ಪರಿಹಾರ ಸಿಗುತ್ತೆ ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ತಿಳಿಸಿದರು.
ಕಳೆದ 2 – 3 ತಿಂಗಳಿಂದ ರಾಜಕೀಯ ಹಾಗೂ ಹೋರಾಟಗಳಿಂದ ಶ್ರೀನಿವಾಸ್ ಪ್ರಸಾದ್ ದೂರ ಇದ್ದರು. ಆರೋಗ್ಯ ಕಾರಣಗಳಿಂದ ಯಾವ ಸಮಾರಂಭ ಹಾಗೂ ಸಾರ್ವಜನಿಕವಾಗಿ ಕಾಣಿಸಿಕೊಳ್ತಿರಲಿಲ್ಲ. ಜೊತೆಗೆ ಮುಂದಿನ ಬಾರಿ ನಾನು ಸಂಸತ್ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಚುನಾವಣೆಯಿಂದ ದೂರ ಉಳಿಯುತ್ತೇನೆ ಎಂದು ಘೋಷಿಸಿದ್ದರು. ಆದರೆ ಸಕ್ರಿಯ ರಾಜಕಾರಣದಲ್ಲಿ ಇರುವುದಾಗಿ ಭಾವುಕವಾಗಿ ತಿಳಿಸಿದ್ದರು. ಇದೀಗ ಆರೋಗ್ಯ ಸುಧಾರಿಸಿದ ಹಿನ್ನೆಲೆಯಲ್ಲಿ ಅವರು ಹೋರಾಟಕ್ಕೆ ಭಾಗಿಯಾಗಿದ್ದಾರೆ.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…