ಮೈಸೂರು : ರಾಜಕಾರಣಿಯಾಗಿ ಪ್ರತಾಪ್ ಸಿಂಹ ಬಗ್ಗೆ ‘ಎಸ್’ ಅನ್ನೋಣ ಆದರೆ ಮನುಷ್ಯತ್ವದ ನಡವಳಿಕೆಯ ವಿಚಾರದಲ್ಲಿ ಪ್ರತಾಪ್ ಸಿಂಹ ಅವರನ್ನು ‘ನೋ’ ಎಂದು ಹೇಳಬೇಕಾಗುತ್ತದೆ ಎಂದು ಹೆಚ್.ವಿಶ್ವನಾಥ್ ಅಭಿಪ್ರಾಯ ವ್ಯಕ್ತಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿನ ಕಾಲದಲ್ಲಿ ರಾಜಕಾರಿಣಿಗಳು ನೂರಕ್ಕೆ ನೂರು ಕೆಲಸ ಮಾಡಿ, ಜನರಿಗೆ ವಿರೋಧಿ ಎಂದು ಕಂಡಾಗ ಜನರ ಅಭಿಪ್ರಾಯ ಬೇರೆ ಆಗುತ್ತೆ ಎಂದರು.
ಪ್ರತಾಪ್ ಸಿಂಹ ಅವರು ಯಾವುದೇ ಪಕ್ಷದವರಾಗಿರಲಿ, ಒಬ್ಬ ರಾಜಕಾರಣಿಯಾಗಿ ಅವರು ಮಾಡಬೇಕಾದ ಕೆಲಸಗಳನ್ನು ಮಾಡಿದ್ದಾರೆ ಅದರಲ್ಲಿ ಎರಡನೆ ಮಾತಿಲ್ಲ. ಆದರೆ ಮನುಷ್ಯತ್ವದ ವಿಚಾರಕ್ಕೆ ಬಂದಾಗ ಅವರನ್ನು ಒಪ್ಪಲು ಸಾಧ್ಯವಿಲ್ಲ ಎಂದರು.
ಅರಮನೆಯಿಂದ ಬಂದವರ್ಯಾರೂ ಗೆದ್ದಿಲ್ಲ : ಯದುವೀರ್ ಅವರನ್ನು ಬಿಜೆಪಿ ಅಭ್ಯರ್ಥಿ ಮಾಡುವ ವಿಚಾರ ಎಲ್ಲೆಡೆ ಕೇಳಿ ಬರುತ್ತಿದೆ. ಆದರೆ ಜನತಂತ್ರ ವ್ಯವಸ್ಥೆಯಲ್ಲಿ ಅರಮನೆಯಿಂದ ಬಂದವರು ಯಾರೂ ಗೆದ್ದಿಲ್ಲ. ೧೯೭೦ರಲ್ಲಿ ಕಾಂಗ್ರೆಸ್ ಸರ್ಕಾರ ರಾಜ ಮನೆತನ ಸಾಮಾನ್ಯ ಮನೆತನದಂತೆ ಇಟ್ಟರು ಇಂದಿರಾ ಗಾಂಧಿ. ಕಾಂಗ್ರೆಸ್ನಿಂದ ಶ್ರೀಕಂಠದತ್ತ ನರ್ಸಿಂಹರಾಜ ಒಡೆಯರ್ ಎರಡು ಬಾರಿ ಗೆದ್ದಿದ್ದರು. ಆದರೆ ಬಿಜೆಪಿಯಿಂದ ಸೋತರು. ಬಿಜೆಪಿಗೆ ಹೋಗಿದ್ದನ್ನೆ ಜನರು ಬಹಳ ನೆಗೆಟಿವ್ ಆಗಿ ತೆಗೆದುಕೊಂಡಿದ್ದರು.
ಮಹಾರಾಜರು ವಿಕಾಸ ವಾದಿಗಳು, ಮಾನವತವಾದಿಳು , ಅದಕ್ಕೆ ವಿರುದ್ಧವಾದ ಪಕ್ಷಕ್ಕೆ ಅರಮನೆಯವರು ಹೋಗಿದ್ದನ್ನು ಜನರು ಮಾನ್ಯ ಮಾಡಲಿಲ್ಲ. ಈಗಲೂ ಅಷ್ಟು ಸುಲಭ ಇಲ್ಲ ಎಂದು ಹೆಚ್.ವಿಶ್ವನಾಥ್ ಅಭಿಪ್ರಾಯ ವ್ಯಕ್ತಪಡಿಸಿದರು.
ಬೆಳಗಾವಿ (ಸುವರ್ಣಸೌಧ) : ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕೇಬಲ್ ಟಿವಿ ಆಪರೇಟರ್ಗಳಿಗೆ ವಿಧಿಸಲಾಗುತ್ತಿರುವ ಶುಲ್ಕವನ್ನು ಶೇ.50ರಷ್ಟು ಕಡಿಮೆ ಮಾಡಲಾಗುವುದು…
ಬೆಳಗಾವಿ : ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಜೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ನಿಯಮದಂತೆ ಕ್ರಮ…
ಚಿಕ್ಕಮಗಳೂರು : ಅತ್ಯಂತ ಪರಿಸರ ಸೂಕ್ಷ ಸ್ಥಳಗಳನ್ನು ಹೊಂದಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪರಿಸರದ ಮೇಲೆ ಆಗುವ ದುಷ್ಪರಿಣಾಮಗಳನ್ನು ಗಣನೆಗೆ ತೆಗೆದುಕೊಳ್ಳದೆ…
ಹೊಸದಿಲ್ಲಿ : ಲೋಕಸಭೆಯಲ್ಲಿ ವಂದೇ ಮಾತರಂ ಗೀತೆ ಕುರಿತ ಚರ್ಚೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವು ಇತಿಹಾಸವನ್ನು…
ಬೆಳಗಾವಿ : ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ಒಂದೇ ಒಂದು ಮಗುವಿದ್ದರೂ ಕೂಡ ಯಾವುದೇ ಕಾರಣಕ್ಕೂ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವುದಿಲ್ಲ…
ಬೆಳಗಾವಿ : ಡಿನ್ನರ್ ಬ್ರೇಕ್ಫಾಸ್ಟ್ ಬಳಿಕವೂ ತಂದೆಯ ಪರ ಪುತ್ರ ಯತೀಂದ್ರ ಬ್ಯಾಟಿಂಗ್ ಮಾಡುವುದನ್ನು ಮುಂದುವರಿಸಿದ್ದಾರೆ. ಸಿದ್ದರಾಮಯ್ಯ ಪೂರ್ಣ ಅವಧಿಯವರೆಗೆ…