ಮೈಸೂರು

ನಮ್ಮ ಕೆಲಸಕ್ಕಿಂತ ಹೆಚ್ಚಾಗಿ ನಮ್ಮ ನಡವಳಿಕೆಯನ್ನು ಜನ ಗಮನಿಸುತ್ತಾರೆ : ಹೆಚ್‌.ವಿಶ್ವನಾಥ್‌

ಮೈಸೂರು : ರಾಜಕಾರಣಿಯಾಗಿ ಪ್ರತಾಪ್‌ ಸಿಂಹ ಬಗ್ಗೆ ‘ಎಸ್‌’ ಅನ್ನೋಣ ಆದರೆ ಮನುಷ್ಯತ್ವದ ನಡವಳಿಕೆಯ ವಿಚಾರದಲ್ಲಿ ಪ್ರತಾಪ್‌ ಸಿಂಹ ಅವರನ್ನು ‘ನೋ’ ಎಂದು ಹೇಳಬೇಕಾಗುತ್ತದೆ ಎಂದು ಹೆಚ್‌.ವಿಶ್ವನಾಥ್‌ ಅಭಿಪ್ರಾಯ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿನ ಕಾಲದಲ್ಲಿ ರಾಜಕಾರಿಣಿಗಳು ನೂರಕ್ಕೆ ನೂರು ಕೆಲಸ ಮಾಡಿ, ಜನರಿಗೆ ವಿರೋಧಿ ಎಂದು ಕಂಡಾಗ ಜನರ ಅಭಿಪ್ರಾಯ ಬೇರೆ ಆಗುತ್ತೆ ಎಂದರು.

ಪ್ರತಾಪ್‌ ಸಿಂಹ ಅವರು ಯಾವುದೇ ಪಕ್ಷದವರಾಗಿರಲಿ, ಒಬ್ಬ ರಾಜಕಾರಣಿಯಾಗಿ ಅವರು ಮಾಡಬೇಕಾದ ಕೆಲಸಗಳನ್ನು ಮಾಡಿದ್ದಾರೆ ಅದರಲ್ಲಿ ಎರಡನೆ ಮಾತಿಲ್ಲ. ಆದರೆ ಮನುಷ್ಯತ್ವದ ವಿಚಾರಕ್ಕೆ ಬಂದಾಗ ಅವರನ್ನು ಒಪ್ಪಲು ಸಾಧ್ಯವಿಲ್ಲ ಎಂದರು.

ಅರಮನೆಯಿಂದ ಬಂದವರ್ಯಾರೂ ಗೆದ್ದಿಲ್ಲ : ಯದುವೀರ್‌ ಅವರನ್ನು ಬಿಜೆಪಿ ಅಭ್ಯರ್ಥಿ ಮಾಡುವ ವಿಚಾರ ಎಲ್ಲೆಡೆ ಕೇಳಿ ಬರುತ್ತಿದೆ. ಆದರೆ ಜನತಂತ್ರ ವ್ಯವಸ್ಥೆಯಲ್ಲಿ ಅರಮನೆಯಿಂದ ಬಂದವರು ಯಾರೂ ಗೆದ್ದಿಲ್ಲ. ೧೯೭೦ರಲ್ಲಿ ಕಾಂಗ್ರೆಸ್‌ ಸರ್ಕಾರ ರಾಜ ಮನೆತನ ಸಾಮಾನ್ಯ ಮನೆತನದಂತೆ ಇಟ್ಟರು ಇಂದಿರಾ ಗಾಂಧಿ.  ಕಾಂಗ್ರೆಸ್‌ನಿಂದ ಶ್ರೀಕಂಠದತ್ತ ನರ್ಸಿಂಹರಾಜ ಒಡೆಯರ್‌ ಎರಡು ಬಾರಿ ಗೆದ್ದಿದ್ದರು. ಆದರೆ ಬಿಜೆಪಿಯಿಂದ ಸೋತರು. ಬಿಜೆಪಿಗೆ ಹೋಗಿದ್ದನ್ನೆ ಜನರು ಬಹಳ ನೆಗೆಟಿವ್‌ ಆಗಿ ತೆಗೆದುಕೊಂಡಿದ್ದರು.

ಮಹಾರಾಜರು ವಿಕಾಸ ವಾದಿಗಳು, ಮಾನವತವಾದಿಳು , ಅದಕ್ಕೆ ವಿರುದ್ಧವಾದ ಪಕ್ಷಕ್ಕೆ ಅರಮನೆಯವರು ಹೋಗಿದ್ದನ್ನು ಜನರು ಮಾನ್ಯ ಮಾಡಲಿಲ್ಲ. ಈಗಲೂ ಅಷ್ಟು ಸುಲಭ ಇಲ್ಲ ಎಂದು ಹೆಚ್‌.ವಿಶ್ವನಾಥ್‌ ಅಭಿಪ್ರಾಯ ವ್ಯಕ್ತಪಡಿಸಿದರು.

andolanait

Recent Posts

ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಬಸ್‌ ಸೌಲಭ್ಯ ಕಲ್ಪಿಸಲು ಡಿಪೋ ನಿರ್ಮಾಣ: ಶಾಸಕ ಎಂ.ಆರ್.‌ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…

11 hours ago

ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವು

‌ಶ್ರೀರಂಗಪಟ್ಟಣ: ವಿದ್ಯುತ್‌ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್‌ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…

12 hours ago

ರಾಜ್ಯದ ಹಲವೆಡೆ ಭಾರೀ ಗಾಳಿ ಮಳೆ: ಜನಜೀವನ ಅಸ್ತವ್ಯಸ್ತ

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…

12 hours ago

ಹನೂರು: 153 ದಿನಗಳಿಂದ ರೈತರು ನಡೆಸುತ್ತಿದ್ದ ಅಹೋರಾತ್ರಿ ಧರಣಿ ಅಂತ್ಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…

12 hours ago

ಮೈಸೂರಿನಲ್ಲಿ ಅವೈಜ್ಞಾನಿಕ ಟ್ರಾಫಿಕ್‌ ಸಿಗ್ನಲ್‌ ಆರೋಪ: ಸಚಿವ ಮಹದೇವಪ್ಪ ಪ್ರತಿಕ್ರಿಯೆ

ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್‌ ಸಿಗ್ನಲ್‌ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…

12 hours ago

ದೀದಿ ಸರ್ಕಾರದ ವಿರುದ್ಧ ಅಮಿತ್‌ ಶಾ ಚಾರ್ಜ್‌ಶೀಟ್‌ ರಿಲೀಸ್‌

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…

13 hours ago