ಮೈಸೂರು

ನಮ್ಮ ಕೆಲಸಕ್ಕಿಂತ ಹೆಚ್ಚಾಗಿ ನಮ್ಮ ನಡವಳಿಕೆಯನ್ನು ಜನ ಗಮನಿಸುತ್ತಾರೆ : ಹೆಚ್‌.ವಿಶ್ವನಾಥ್‌

ಮೈಸೂರು : ರಾಜಕಾರಣಿಯಾಗಿ ಪ್ರತಾಪ್‌ ಸಿಂಹ ಬಗ್ಗೆ ‘ಎಸ್‌’ ಅನ್ನೋಣ ಆದರೆ ಮನುಷ್ಯತ್ವದ ನಡವಳಿಕೆಯ ವಿಚಾರದಲ್ಲಿ ಪ್ರತಾಪ್‌ ಸಿಂಹ ಅವರನ್ನು ‘ನೋ’ ಎಂದು ಹೇಳಬೇಕಾಗುತ್ತದೆ ಎಂದು ಹೆಚ್‌.ವಿಶ್ವನಾಥ್‌ ಅಭಿಪ್ರಾಯ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿನ ಕಾಲದಲ್ಲಿ ರಾಜಕಾರಿಣಿಗಳು ನೂರಕ್ಕೆ ನೂರು ಕೆಲಸ ಮಾಡಿ, ಜನರಿಗೆ ವಿರೋಧಿ ಎಂದು ಕಂಡಾಗ ಜನರ ಅಭಿಪ್ರಾಯ ಬೇರೆ ಆಗುತ್ತೆ ಎಂದರು.

ಪ್ರತಾಪ್‌ ಸಿಂಹ ಅವರು ಯಾವುದೇ ಪಕ್ಷದವರಾಗಿರಲಿ, ಒಬ್ಬ ರಾಜಕಾರಣಿಯಾಗಿ ಅವರು ಮಾಡಬೇಕಾದ ಕೆಲಸಗಳನ್ನು ಮಾಡಿದ್ದಾರೆ ಅದರಲ್ಲಿ ಎರಡನೆ ಮಾತಿಲ್ಲ. ಆದರೆ ಮನುಷ್ಯತ್ವದ ವಿಚಾರಕ್ಕೆ ಬಂದಾಗ ಅವರನ್ನು ಒಪ್ಪಲು ಸಾಧ್ಯವಿಲ್ಲ ಎಂದರು.

ಅರಮನೆಯಿಂದ ಬಂದವರ್ಯಾರೂ ಗೆದ್ದಿಲ್ಲ : ಯದುವೀರ್‌ ಅವರನ್ನು ಬಿಜೆಪಿ ಅಭ್ಯರ್ಥಿ ಮಾಡುವ ವಿಚಾರ ಎಲ್ಲೆಡೆ ಕೇಳಿ ಬರುತ್ತಿದೆ. ಆದರೆ ಜನತಂತ್ರ ವ್ಯವಸ್ಥೆಯಲ್ಲಿ ಅರಮನೆಯಿಂದ ಬಂದವರು ಯಾರೂ ಗೆದ್ದಿಲ್ಲ. ೧೯೭೦ರಲ್ಲಿ ಕಾಂಗ್ರೆಸ್‌ ಸರ್ಕಾರ ರಾಜ ಮನೆತನ ಸಾಮಾನ್ಯ ಮನೆತನದಂತೆ ಇಟ್ಟರು ಇಂದಿರಾ ಗಾಂಧಿ.  ಕಾಂಗ್ರೆಸ್‌ನಿಂದ ಶ್ರೀಕಂಠದತ್ತ ನರ್ಸಿಂಹರಾಜ ಒಡೆಯರ್‌ ಎರಡು ಬಾರಿ ಗೆದ್ದಿದ್ದರು. ಆದರೆ ಬಿಜೆಪಿಯಿಂದ ಸೋತರು. ಬಿಜೆಪಿಗೆ ಹೋಗಿದ್ದನ್ನೆ ಜನರು ಬಹಳ ನೆಗೆಟಿವ್‌ ಆಗಿ ತೆಗೆದುಕೊಂಡಿದ್ದರು.

ಮಹಾರಾಜರು ವಿಕಾಸ ವಾದಿಗಳು, ಮಾನವತವಾದಿಳು , ಅದಕ್ಕೆ ವಿರುದ್ಧವಾದ ಪಕ್ಷಕ್ಕೆ ಅರಮನೆಯವರು ಹೋಗಿದ್ದನ್ನು ಜನರು ಮಾನ್ಯ ಮಾಡಲಿಲ್ಲ. ಈಗಲೂ ಅಷ್ಟು ಸುಲಭ ಇಲ್ಲ ಎಂದು ಹೆಚ್‌.ವಿಶ್ವನಾಥ್‌ ಅಭಿಪ್ರಾಯ ವ್ಯಕ್ತಪಡಿಸಿದರು.

andolanait

Recent Posts

ಮಾಲ್ದಾರೆ : ರಸ್ತೆ ಕಾಮಗಾರಿ ಬಳಿಕ ಸಿಮೆಂಟ್ ಚೀಲಗಳ ತ್ಯಾಜ್ಯ ; ಪಂಚಾಯಿತಿ ವಾಹನ ದುರುಪಯೋಗ ಆರೋಪ

ಸಿದ್ದಾಪುರ : ಮಾಲ್ದಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಲ್ದಾರೆ–ಗುಡ್ಲೂರು ರಸ್ತೆ ಹಾಗೂ ಮೈಲಾಪುರ–ಗುಡ್ಲೂರು ರಸ್ತೆ ಕಾಮಗಾರಿಗಳು ಪೂರ್ಣಗೊಂಡಿದ್ದರೂ, ಕಾಮಗಾರಿಯಲ್ಲಿ ಬಳಸಿದ…

5 mins ago

ಅನಿಲ ಬಿಕ್ಕಟ್ಟಿನ ನಡುವೆ ಆಟೋ ಎಲ್‌ಪಿಜಿ ಪೂರೈಕೆ ಹೆಚ್ಚಳ

ಬೆಂಗಳೂರು : ಪಶ್ಚಿಮ ಕೊಲ್ಲಿ ರಾಷ್ಟ್ರಗಳ ಯುದ್ಧದಿಂದಾಗಿ ಇದೀಗ ದೇಶದಲ್ಲಿ ಅನಿಲ ಬಿಕ್ಕಟ್ಟು ಎದುರಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಇತರೆ…

15 mins ago

ಇಂದಿನಿಂದ ಕೊಡವ ಕೌಟುಂಬಿಕ ಕ್ರಿಕೆಟ್‌ ಉತ್ಸವ

24ನೇ ವರ್ಷದ ಕ್ರಿಕೆಟ್ ಪಂದ್ಯಾವಳಿಗೆ ಬೇತ್ರಿ ಮುಕ್ಕಾಟೀರ ಕುಟುಂಬಸ್ಥರಿಂದ ಸಿದ್ದತೆ; 24 ದಿನಗಳ ಕಾಲ ಕ್ರಿಕೆಟ್ ಹಬ್ಬ ಪುನೀತ್ ಮಡಿಕೇರಿ…

2 hours ago

ಓದುಗರ ಪತ್ರ | ಕಠಿಣ ಕ್ರಮ ಕೈಗೊಳ್ಳಿ

ಮುರ್ಖರ ದಿನ ವಾದ ಏಪ್ರಿಲ್ ಒಂದರಂದು ( ಬುಧವಾರ), ಕೆಲವು ಜಾಲತಾಣಗಳಲ್ಲಿ ದೇಶದ ರಾಷ್ಟ್ರೀಯ ಲಾಂಛನದ ಅಡಿಯಲ್ಲಿ,(ಸಿಂಹ ಮತ್ತು ಅಶೋಕ…

3 hours ago

ಓದುಗರ ಪತ್ರ | ನಿ. . . ದರ್ಶನ !

ನಿ. . . ದರ್ಶನ ! ಟೇಪು ಕತ್ತರಿಸಿ, ಗುದ್ದಲಿ ಪೂಜೆ ನೆರವೇರಿಸಿ ಸರಸರನೆ ಪರದೆಯನು ಸರಿಸಿ ನೀಡುವರು ಫೋಟೋಗೆ…

3 hours ago

ಓದುಗರ ಪತ್ರ | ಮಕ್ಕಳ ಸುರಕ್ಷತೆಯ ಬಗ್ಗೆ ಗಮನ ಹರಿಸಿ

ಶಾಲೆಗಳಿಗೆ ಬೇಸಿಗೆ ರಜೆ ಆರಂಭವಾಗಿರುವ ಈ ಸಂದರ್ಭದಲ್ಲಿ ಮಕ್ಕಳ ಸುರಕ್ಷತೆಯ ಬಗ್ಗೆ ಪೋಷಕರು ಹೆಚ್ಚಿನ ನಿಗಾವಹಿಸುವುದು ಅಗತ್ಯವಾಗಿದೆ. ಮಕ್ಕಳು ಬಿಸಿಲಿನಬೇಗೆಯಿಂದ…

3 hours ago