ಮೈಸೂರು

ನಮ್ಮ ಕೆಲಸಕ್ಕಿಂತ ಹೆಚ್ಚಾಗಿ ನಮ್ಮ ನಡವಳಿಕೆಯನ್ನು ಜನ ಗಮನಿಸುತ್ತಾರೆ : ಹೆಚ್‌.ವಿಶ್ವನಾಥ್‌

ಮೈಸೂರು : ರಾಜಕಾರಣಿಯಾಗಿ ಪ್ರತಾಪ್‌ ಸಿಂಹ ಬಗ್ಗೆ ‘ಎಸ್‌’ ಅನ್ನೋಣ ಆದರೆ ಮನುಷ್ಯತ್ವದ ನಡವಳಿಕೆಯ ವಿಚಾರದಲ್ಲಿ ಪ್ರತಾಪ್‌ ಸಿಂಹ ಅವರನ್ನು ‘ನೋ’ ಎಂದು ಹೇಳಬೇಕಾಗುತ್ತದೆ ಎಂದು ಹೆಚ್‌.ವಿಶ್ವನಾಥ್‌ ಅಭಿಪ್ರಾಯ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿನ ಕಾಲದಲ್ಲಿ ರಾಜಕಾರಿಣಿಗಳು ನೂರಕ್ಕೆ ನೂರು ಕೆಲಸ ಮಾಡಿ, ಜನರಿಗೆ ವಿರೋಧಿ ಎಂದು ಕಂಡಾಗ ಜನರ ಅಭಿಪ್ರಾಯ ಬೇರೆ ಆಗುತ್ತೆ ಎಂದರು.

ಪ್ರತಾಪ್‌ ಸಿಂಹ ಅವರು ಯಾವುದೇ ಪಕ್ಷದವರಾಗಿರಲಿ, ಒಬ್ಬ ರಾಜಕಾರಣಿಯಾಗಿ ಅವರು ಮಾಡಬೇಕಾದ ಕೆಲಸಗಳನ್ನು ಮಾಡಿದ್ದಾರೆ ಅದರಲ್ಲಿ ಎರಡನೆ ಮಾತಿಲ್ಲ. ಆದರೆ ಮನುಷ್ಯತ್ವದ ವಿಚಾರಕ್ಕೆ ಬಂದಾಗ ಅವರನ್ನು ಒಪ್ಪಲು ಸಾಧ್ಯವಿಲ್ಲ ಎಂದರು.

ಅರಮನೆಯಿಂದ ಬಂದವರ್ಯಾರೂ ಗೆದ್ದಿಲ್ಲ : ಯದುವೀರ್‌ ಅವರನ್ನು ಬಿಜೆಪಿ ಅಭ್ಯರ್ಥಿ ಮಾಡುವ ವಿಚಾರ ಎಲ್ಲೆಡೆ ಕೇಳಿ ಬರುತ್ತಿದೆ. ಆದರೆ ಜನತಂತ್ರ ವ್ಯವಸ್ಥೆಯಲ್ಲಿ ಅರಮನೆಯಿಂದ ಬಂದವರು ಯಾರೂ ಗೆದ್ದಿಲ್ಲ. ೧೯೭೦ರಲ್ಲಿ ಕಾಂಗ್ರೆಸ್‌ ಸರ್ಕಾರ ರಾಜ ಮನೆತನ ಸಾಮಾನ್ಯ ಮನೆತನದಂತೆ ಇಟ್ಟರು ಇಂದಿರಾ ಗಾಂಧಿ.  ಕಾಂಗ್ರೆಸ್‌ನಿಂದ ಶ್ರೀಕಂಠದತ್ತ ನರ್ಸಿಂಹರಾಜ ಒಡೆಯರ್‌ ಎರಡು ಬಾರಿ ಗೆದ್ದಿದ್ದರು. ಆದರೆ ಬಿಜೆಪಿಯಿಂದ ಸೋತರು. ಬಿಜೆಪಿಗೆ ಹೋಗಿದ್ದನ್ನೆ ಜನರು ಬಹಳ ನೆಗೆಟಿವ್‌ ಆಗಿ ತೆಗೆದುಕೊಂಡಿದ್ದರು.

ಮಹಾರಾಜರು ವಿಕಾಸ ವಾದಿಗಳು, ಮಾನವತವಾದಿಳು , ಅದಕ್ಕೆ ವಿರುದ್ಧವಾದ ಪಕ್ಷಕ್ಕೆ ಅರಮನೆಯವರು ಹೋಗಿದ್ದನ್ನು ಜನರು ಮಾನ್ಯ ಮಾಡಲಿಲ್ಲ. ಈಗಲೂ ಅಷ್ಟು ಸುಲಭ ಇಲ್ಲ ಎಂದು ಹೆಚ್‌.ವಿಶ್ವನಾಥ್‌ ಅಭಿಪ್ರಾಯ ವ್ಯಕ್ತಪಡಿಸಿದರು.

andolanait

Recent Posts

ಮಲೆನಾಡಿನಲ್ಲಿ ಮಳೆಯ ಅಬ್ಬರ: ಜೋಗ ಜಲಪಾತಕ್ಕೆ ಜೀವಕಳೆ

ಶಿವಮೊಗ್ಗ: ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಶಿವಮೊಗ್ಗದಲ್ಲಿ ಭಾರೀ…

5 hours ago

ಕೊಡಗು ಜಿಲ್ಲೆಯ ಮಳೆ ವಿವರ

ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಜಿಲ್ಲೆಯ ಮಳೆಯ ವಿವರ ಈ…

5 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…

6 hours ago

ವಯನಾಡಿನಲ್ಲಿ ಮೇಘಸ್ಫೋಟ: ಇಬ್ಬರು ಕಾರ್ಮಿಕರು ಜೀವಂತ ಸಮಾಧಿ: 30 ಮಂದಿ ನಾಪತ್ತೆ

ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…

6 hours ago

ಬ್ರಿಡ್ಜ್‌ ಮ್ಯಾನ್‌ ಖ್ಯಾತಿಯ ಪದ್ಮಶ್ರೀ ಡಾ.ಗಿರೀಶ್‌ ಭಾರದ್ವಾಜ್‌ ನಿಧನ

ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್‌ ಡಾ.ಗಿರೀಶ್‌ ಭಾರದ್ವಾಜ್‌ ಅವರು ಇಂದು ನಿಧನರಾಗಿದ್ದಾರೆ.…

7 hours ago

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆ

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…

9 hours ago