ಮೈಸೂರು : ರಾಜಕಾರಣಿಯಾಗಿ ಪ್ರತಾಪ್ ಸಿಂಹ ಬಗ್ಗೆ ‘ಎಸ್’ ಅನ್ನೋಣ ಆದರೆ ಮನುಷ್ಯತ್ವದ ನಡವಳಿಕೆಯ ವಿಚಾರದಲ್ಲಿ ಪ್ರತಾಪ್ ಸಿಂಹ ಅವರನ್ನು ‘ನೋ’ ಎಂದು ಹೇಳಬೇಕಾಗುತ್ತದೆ ಎಂದು ಹೆಚ್.ವಿಶ್ವನಾಥ್ ಅಭಿಪ್ರಾಯ ವ್ಯಕ್ತಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿನ ಕಾಲದಲ್ಲಿ ರಾಜಕಾರಿಣಿಗಳು ನೂರಕ್ಕೆ ನೂರು ಕೆಲಸ ಮಾಡಿ, ಜನರಿಗೆ ವಿರೋಧಿ ಎಂದು ಕಂಡಾಗ ಜನರ ಅಭಿಪ್ರಾಯ ಬೇರೆ ಆಗುತ್ತೆ ಎಂದರು.
ಪ್ರತಾಪ್ ಸಿಂಹ ಅವರು ಯಾವುದೇ ಪಕ್ಷದವರಾಗಿರಲಿ, ಒಬ್ಬ ರಾಜಕಾರಣಿಯಾಗಿ ಅವರು ಮಾಡಬೇಕಾದ ಕೆಲಸಗಳನ್ನು ಮಾಡಿದ್ದಾರೆ ಅದರಲ್ಲಿ ಎರಡನೆ ಮಾತಿಲ್ಲ. ಆದರೆ ಮನುಷ್ಯತ್ವದ ವಿಚಾರಕ್ಕೆ ಬಂದಾಗ ಅವರನ್ನು ಒಪ್ಪಲು ಸಾಧ್ಯವಿಲ್ಲ ಎಂದರು.
ಅರಮನೆಯಿಂದ ಬಂದವರ್ಯಾರೂ ಗೆದ್ದಿಲ್ಲ : ಯದುವೀರ್ ಅವರನ್ನು ಬಿಜೆಪಿ ಅಭ್ಯರ್ಥಿ ಮಾಡುವ ವಿಚಾರ ಎಲ್ಲೆಡೆ ಕೇಳಿ ಬರುತ್ತಿದೆ. ಆದರೆ ಜನತಂತ್ರ ವ್ಯವಸ್ಥೆಯಲ್ಲಿ ಅರಮನೆಯಿಂದ ಬಂದವರು ಯಾರೂ ಗೆದ್ದಿಲ್ಲ. ೧೯೭೦ರಲ್ಲಿ ಕಾಂಗ್ರೆಸ್ ಸರ್ಕಾರ ರಾಜ ಮನೆತನ ಸಾಮಾನ್ಯ ಮನೆತನದಂತೆ ಇಟ್ಟರು ಇಂದಿರಾ ಗಾಂಧಿ. ಕಾಂಗ್ರೆಸ್ನಿಂದ ಶ್ರೀಕಂಠದತ್ತ ನರ್ಸಿಂಹರಾಜ ಒಡೆಯರ್ ಎರಡು ಬಾರಿ ಗೆದ್ದಿದ್ದರು. ಆದರೆ ಬಿಜೆಪಿಯಿಂದ ಸೋತರು. ಬಿಜೆಪಿಗೆ ಹೋಗಿದ್ದನ್ನೆ ಜನರು ಬಹಳ ನೆಗೆಟಿವ್ ಆಗಿ ತೆಗೆದುಕೊಂಡಿದ್ದರು.
ಮಹಾರಾಜರು ವಿಕಾಸ ವಾದಿಗಳು, ಮಾನವತವಾದಿಳು , ಅದಕ್ಕೆ ವಿರುದ್ಧವಾದ ಪಕ್ಷಕ್ಕೆ ಅರಮನೆಯವರು ಹೋಗಿದ್ದನ್ನು ಜನರು ಮಾನ್ಯ ಮಾಡಲಿಲ್ಲ. ಈಗಲೂ ಅಷ್ಟು ಸುಲಭ ಇಲ್ಲ ಎಂದು ಹೆಚ್.ವಿಶ್ವನಾಥ್ ಅಭಿಪ್ರಾಯ ವ್ಯಕ್ತಪಡಿಸಿದರು.
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…