ಮೈಸೂರು : 2023ರ ಚುನಾವಣೆಯಲ್ಲಿ ಸಮುದ್ರಕ್ಕೆ ವಿರುದ್ಧವಾಗಿ ಈಜಿದಂತೆ ಎಂದು ನನಗೆ ಗೊತ್ತು. ಆದರೆ ನನ್ನವರೆಂಬ ಜನ ಎಂದೂ ನನ್ನ ಪರ ಇದ್ದೇ ಇರುತ್ತಾರೆ. ಕೈಬಿಡುವುದಿಲ್ಲಎಂಬ ಬದ್ಧತೆಯೊಂದಿಗೆ ರಾಜಕೀಯ ಮಾಡುತ್ತಿರುವುದಾಗಿ ಶಾಸಕ ಸಾ.ರಾ.ಮಹೇಶ್ ಹೇಳಿದರು.
ಮೈಸೂರಿನ ಕೃಷ್ಣರಾಜ ಪಟ್ಟಣದ ಸಾಯಿ ಸಭಾಂಗಣದಲ್ಲಿ ನಡೆದ ಜಾತ್ಯಾತೀತ ದಳ ಬೆಂಬಲಿತ ಕುರುಬ ಸಮಾಜದ ಮುಖಂಡರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಕ್ಷೇತ್ರದಲ್ಲಿ ನನ್ನ 15 ವರ್ಷದ ರಾಜಕಾರಣದಲ್ಲಿ ಅಭಿವೃದ್ಧಿ ವಿಚಾರವಿರಲಿ, ನನ್ನ ವೈಯುಕ್ತಿಕ ಕೊಡುಗೆ ನೀಡುವ ವಿಚಾರವಿರಲಿ ಯಾವುದೇ ಸಂದರ್ಭದಲ್ಲಿ ಜಾತಿ, ರಾಜಕೀಯ ಮಾಡಿಲ್ಲ ಎಂದ ಶಾಸಕರು, ರಾಜಕಾರಣ ಎಂಬುದು ಬೇರೆಯವರ ಬದುಕು ಕಟ್ಟಿಕೊಡಲು ಮಾಡಬೇಕೆ ವಿನಃ ರಾಜಕಾರಣಿಗಳು ತಮ್ಮ ಬದುಕು ಕಟ್ಟಿಕೊಳ್ಳುವುದಿಲ್ಲ.
ನನ್ನ ಅವಧಿಯಲ್ಲಿ ತಾಲ್ಲೂಕಿನ ಎಲ್ಲಾ ಗ್ರಾಮಗಳಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದು, ಕಳೆದ ಎರಡು ವರ್ಷಗಳ ಅವಧಿಯಲ್ಲಿ ಕೊರೊನಾ ಇದ್ದ ಕಾರಣ ಸರಕಾರದಿಂದ ಸಮರ್ಪಕವಾಗಿ ಅನುದಾನ ಬಾರದ ಕಾರಣ ಕೆಲವೆಡೆ ಅಭಿವೃದ್ಧಿ ಕೆಲಸ ಮಾಡಲಾಗಿಲ್ಲ. ಕೆಲವರು ಅದನ್ನೇ ದೊಡ್ಡದು ಮಾಡಿ ನನ್ನನ್ನು ಜಾತಿ ಮಾಡುತ್ತಾರೆ ಎಂದು ದೂರುತ್ತಾರೆ. ಆದರೆ, ನಾನು ಜಾತಿವಾದಿಯೋ ಅಲ್ಲವೋ ಎಂಬುದು ತಾಲೂಕಿನ ಜನತೆಗೆ ತಿಳಿದಿದೆ ಎಂದರು.
ಎಂ ಎಲ್ ಸಿ ಸಿ.ಎನ್.ಮಂಜೇಗೌಡ ಮಾತನಾಡಿ, ತಾಲೂಕಿನ ಜನತೆ ಜಾತಿ ರಾಜಕೀಯವನ್ನು ಬದಿಗಿಟ್ಟು ಅಭಿವೃದ್ದಿ ಹರಿಕಾರ ಎನಿಸಿದ ಸಾ.ರಾ.ಮಹೇಶ್ರನ್ನು ಬೆಂಬಲಿಸುವಂತೆ ಹೇಳಿದರು.
ಹೊಸ ವರ್ಷದಂದು ಹಲವರು ಬಂಧು,ಬಳಗ, ಸ್ನೇಹಿತರ ಜತೆ ಸೇರಿ ಸಂಭ್ರಮಿಸಿದರು. ಆದರೆ ಸಾಂಸ್ಕ ತಿಕ ನಗರ ಮೈಸೂರಿನಲ್ಲಿ ದಾಖಲೆ ಮದ್ಯ…
ಸ್ವಾಗತಾರ್ಹ ನಡೆ! ಜಾತಿ ಮೀರಿ ಪ್ರೀತಿಸಿದರೆ ಕುಂದಲ್ಲವದು ಮರ್ಯಾದೆಗೆ ಬದಲಿಗೆ ಹೆಚ್ಚುವುದು ಮರ್ಯಾದೆ ಗೌರವ! ಜಾತಿ ಕಟ್ಟಳೆ ಮುರಿವ ಸಮತೆಯ…
ಸಾಂಸ್ಕ ತಿಕ ನಗರಿ ಮೈಸೂರಿನಲ್ಲಿ ಪೊಲೀಸ್ ಇಲಾಖೆಗೆ ಸೇರಿದ ಬ್ಯಾರಿಕೇಡ್ಗಳು ಬಳಕೆಯಾದ ನಂತರ ನಿರ್ಲಕ್ಷ್ಯಕ್ಕೆ ಒಳಪಡುತ್ತಿವೆ. ಅವುಗಳನ್ನು ಸುರಕ್ಷಿತವಾಗಿ ಒಂದೆಡೆ…
ಲೊಕ್ಕನಹಳ್ಳಿ ಬಳಿ ಶಾಲಾ-ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ; ಅಧಿಕಾರಿಗಳ ವಿರುದ್ಧ ಆಕ್ರೋಶ ಹನೂರು: ಒಂದೆಡೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಶಾಲಾ-ಕಾಲೇಜು…
ನವೀನ್ ಡಿಸೋಜ ೧೮,೫೦೦ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆದಿರುವ ರೈತರು; ಹವಾಮಾನ ವೈಪರೀತ್ಯದ ನಡುವೆಯೂ ಕಟಾವು ಕಾರ್ಯ ಚುರುಕು ಮಡಿಕೇರಿ:…
ಚಾಮರಾಜನಗರ: ತೀವ್ರ ಚಳಿಯಿಂದ ತತ್ತರಿಸಿದ್ದ ಜಿಲ್ಲೆಯ ಜನತೆ ಕಳೆದ ೨-೩ ದಿನಗಳಿಂದ ಎದುರಾಗಿರುವ ಮೋಡ ಕವಿದ ವಾತಾವರಣ ಮತ್ತು ಅಲ್ಲಲ್ಲಿ…