ಮೈಸೂರು : 2023ರ ಚುನಾವಣೆಯಲ್ಲಿ ಸಮುದ್ರಕ್ಕೆ ವಿರುದ್ಧವಾಗಿ ಈಜಿದಂತೆ ಎಂದು ನನಗೆ ಗೊತ್ತು. ಆದರೆ ನನ್ನವರೆಂಬ ಜನ ಎಂದೂ ನನ್ನ ಪರ ಇದ್ದೇ ಇರುತ್ತಾರೆ. ಕೈಬಿಡುವುದಿಲ್ಲಎಂಬ ಬದ್ಧತೆಯೊಂದಿಗೆ ರಾಜಕೀಯ ಮಾಡುತ್ತಿರುವುದಾಗಿ ಶಾಸಕ ಸಾ.ರಾ.ಮಹೇಶ್ ಹೇಳಿದರು.
ಮೈಸೂರಿನ ಕೃಷ್ಣರಾಜ ಪಟ್ಟಣದ ಸಾಯಿ ಸಭಾಂಗಣದಲ್ಲಿ ನಡೆದ ಜಾತ್ಯಾತೀತ ದಳ ಬೆಂಬಲಿತ ಕುರುಬ ಸಮಾಜದ ಮುಖಂಡರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಕ್ಷೇತ್ರದಲ್ಲಿ ನನ್ನ 15 ವರ್ಷದ ರಾಜಕಾರಣದಲ್ಲಿ ಅಭಿವೃದ್ಧಿ ವಿಚಾರವಿರಲಿ, ನನ್ನ ವೈಯುಕ್ತಿಕ ಕೊಡುಗೆ ನೀಡುವ ವಿಚಾರವಿರಲಿ ಯಾವುದೇ ಸಂದರ್ಭದಲ್ಲಿ ಜಾತಿ, ರಾಜಕೀಯ ಮಾಡಿಲ್ಲ ಎಂದ ಶಾಸಕರು, ರಾಜಕಾರಣ ಎಂಬುದು ಬೇರೆಯವರ ಬದುಕು ಕಟ್ಟಿಕೊಡಲು ಮಾಡಬೇಕೆ ವಿನಃ ರಾಜಕಾರಣಿಗಳು ತಮ್ಮ ಬದುಕು ಕಟ್ಟಿಕೊಳ್ಳುವುದಿಲ್ಲ.
ನನ್ನ ಅವಧಿಯಲ್ಲಿ ತಾಲ್ಲೂಕಿನ ಎಲ್ಲಾ ಗ್ರಾಮಗಳಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದು, ಕಳೆದ ಎರಡು ವರ್ಷಗಳ ಅವಧಿಯಲ್ಲಿ ಕೊರೊನಾ ಇದ್ದ ಕಾರಣ ಸರಕಾರದಿಂದ ಸಮರ್ಪಕವಾಗಿ ಅನುದಾನ ಬಾರದ ಕಾರಣ ಕೆಲವೆಡೆ ಅಭಿವೃದ್ಧಿ ಕೆಲಸ ಮಾಡಲಾಗಿಲ್ಲ. ಕೆಲವರು ಅದನ್ನೇ ದೊಡ್ಡದು ಮಾಡಿ ನನ್ನನ್ನು ಜಾತಿ ಮಾಡುತ್ತಾರೆ ಎಂದು ದೂರುತ್ತಾರೆ. ಆದರೆ, ನಾನು ಜಾತಿವಾದಿಯೋ ಅಲ್ಲವೋ ಎಂಬುದು ತಾಲೂಕಿನ ಜನತೆಗೆ ತಿಳಿದಿದೆ ಎಂದರು.
ಎಂ ಎಲ್ ಸಿ ಸಿ.ಎನ್.ಮಂಜೇಗೌಡ ಮಾತನಾಡಿ, ತಾಲೂಕಿನ ಜನತೆ ಜಾತಿ ರಾಜಕೀಯವನ್ನು ಬದಿಗಿಟ್ಟು ಅಭಿವೃದ್ದಿ ಹರಿಕಾರ ಎನಿಸಿದ ಸಾ.ರಾ.ಮಹೇಶ್ರನ್ನು ಬೆಂಬಲಿಸುವಂತೆ ಹೇಳಿದರು.
ಚೆಟ್ಟಳ್ಳಿ: ಕಾಫಿ ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಕಾರ್ಮಿಕನೊಬ್ಬ ಮತ್ತೊಬ್ಬ ಕಾರ್ಮಿಕನನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ…
ನವದೆಹಲಿ: ರಾಜ್ಯಸಭೆ ಚುನಾವಣೆಗೆ ಬಿಜೆಪಿ 9 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಬಿಹಾರದಿಂದ…
ಬೆಂಗಳೂರು: ಅಮೇರಿಕಾ, ಇಸ್ರೇಲ್-ಇರಾನ್ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈನಲ್ಲಿ ಸಿಲುಕಿ ಆತಂಕದಲ್ಲಿರುವ ಕನ್ನಡಿಗರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬರಪೀಡಿತ ಪ್ರದೇಶಗಳಲ್ಲಿ ಒಂದಾದ ಬೂದಬಾಳು ಕೆರೆಗೆ ಕಾವೇರಿ ನದಿ ಮೂಲದಿಂದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಷೇರುದಾರರು ನಿಮ್ಮ ಮೇಲೆ ವಿಶ್ವಾಸವಿಟ್ಟು ಕೃಷಿ ಪತ್ತಿನ ಸಹಕಾರ ಸಂಘದ…
ಟೆಹರಾನ್: ಅಮೇರಿಕಾ ಹಾಗೂ ಇಸ್ರೇಲ್ ದೇಶಗಳು ಇರಾನ್ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ…