ಮೈಸೂರು

ಕ್ಷೇತ್ರದ ಜನ ನನ್ನ ಪರ ಇದ್ದಾರೆ ಅವರು ನನ್ನ ಕೈ ಬಿಡುವುದಿಲ್ಲ : ಸಾ ರಾ ಮಹೇಶ್‌

ಮೈಸೂರು  : 2023ರ ಚುನಾವಣೆಯಲ್ಲಿ ಸಮುದ್ರಕ್ಕೆ ವಿರುದ್ಧವಾಗಿ ಈಜಿದಂತೆ ಎಂದು ನನಗೆ ಗೊತ್ತು. ಆದರೆ ನನ್ನವರೆಂಬ ಜನ ಎಂದೂ ನನ್ನ ಪರ ಇದ್ದೇ ಇರುತ್ತಾರೆ. ಕೈಬಿಡುವುದಿಲ್ಲಎಂಬ ಬದ್ಧತೆಯೊಂದಿಗೆ ರಾಜಕೀಯ ಮಾಡುತ್ತಿರುವುದಾಗಿ ಶಾಸಕ ಸಾ.ರಾ.ಮಹೇಶ್‌ ಹೇಳಿದರು.

ಮೈಸೂರಿನ ಕೃಷ್ಣರಾಜ ಪಟ್ಟಣದ ಸಾಯಿ ಸಭಾಂಗಣದಲ್ಲಿ ನಡೆದ ಜಾತ್ಯಾತೀತ ದಳ ಬೆಂಬಲಿತ ಕುರುಬ ಸಮಾಜದ ಮುಖಂಡರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಕ್ಷೇತ್ರದಲ್ಲಿ ನನ್ನ 15 ವರ್ಷದ ರಾಜಕಾರಣದಲ್ಲಿ ಅಭಿವೃದ್ಧಿ ವಿಚಾರವಿರಲಿ, ನನ್ನ ವೈಯುಕ್ತಿಕ ಕೊಡುಗೆ ನೀಡುವ ವಿಚಾರವಿರಲಿ ಯಾವುದೇ ಸಂದರ್ಭದಲ್ಲಿ ಜಾತಿ, ರಾಜಕೀಯ ಮಾಡಿಲ್ಲ ಎಂದ ಶಾಸಕರು, ರಾಜಕಾರಣ ಎಂಬುದು ಬೇರೆಯವರ ಬದುಕು ಕಟ್ಟಿಕೊಡಲು ಮಾಡಬೇಕೆ ವಿನಃ ರಾಜಕಾರಣಿಗಳು ತಮ್ಮ ಬದುಕು ಕಟ್ಟಿಕೊಳ್ಳುವುದಿಲ್ಲ.

ನನ್ನ ಅವಧಿಯಲ್ಲಿ ತಾಲ್ಲೂಕಿನ ಎಲ್ಲಾ ಗ್ರಾಮಗಳಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದು, ಕಳೆದ ಎರಡು ವರ್ಷಗಳ ಅವಧಿಯಲ್ಲಿ ಕೊರೊನಾ ಇದ್ದ ಕಾರಣ ಸರಕಾರದಿಂದ ಸಮರ್ಪಕವಾಗಿ ಅನುದಾನ ಬಾರದ ಕಾರಣ ಕೆಲವೆಡೆ ಅಭಿವೃದ್ಧಿ ಕೆಲಸ ಮಾಡಲಾಗಿಲ್ಲ. ಕೆಲವರು ಅದನ್ನೇ ದೊಡ್ಡದು ಮಾಡಿ ನನ್ನನ್ನು ಜಾತಿ ಮಾಡುತ್ತಾರೆ ಎಂದು ದೂರುತ್ತಾರೆ. ಆದರೆ, ನಾನು ಜಾತಿವಾದಿಯೋ ಅಲ್ಲವೋ ಎಂಬುದು ತಾಲೂಕಿನ ಜನತೆಗೆ ತಿಳಿದಿದೆ ಎಂದರು.

ಎಂ ಎಲ್‌ ಸಿ  ಸಿ.ಎನ್‌.ಮಂಜೇಗೌಡ ಮಾತನಾಡಿ, ತಾಲೂಕಿನ ಜನತೆ ಜಾತಿ ರಾಜಕೀಯವನ್ನು ಬದಿಗಿಟ್ಟು ಅಭಿವೃದ್ದಿ ಹರಿಕಾರ ಎನಿಸಿದ ಸಾ.ರಾ.ಮಹೇಶ್‌ರನ್ನು ಬೆಂಬಲಿಸುವಂತೆ ಹೇಳಿದರು.

andolana

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

5 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

7 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

7 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

8 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

11 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

11 hours ago