ಮೈಸೂರು: ‘ಮಳೆ ನಿಂತರೂ ಮರದ ಹನಿ ನಿಲ್ಲುವುದಿಲ್ಲ’ ಎಂಬ ಮಾತಿನಂತೆ ದಸರಾ ಮುಗಿದರೂ ‘ಸಾಂಸ್ಕೃತಿಕ ನಗರಿ’ಗೆ ಬರುವ ಪ್ರವಾಸಿಗರ ಸಂಖ್ಯೆ ಮಾತ್ರ ಕಡಿಮೆ ಆಗಿಲ್ಲ. ದಸರಾ ಬಳಿಕವೂ ಮೈಸೂರಿನತ್ತ ಪ್ರವಾಸಿಗರ ದಂಡು ಹರಿದು ಬಂದಿದ್ದು, ಎಲ್ಲಾ ಕಡೆ ಟ್ರಾಫಿಕ್ ಜಾಮ್ ಆಗಿ ವಾಹನ ಸವಾರರು ಪರದಾಡುತ್ತಿದ್ದರು ಇನ್ನು ಅಲ್ಲೇ ಇದ್ದ ಸಾರ್ವಜನಿಕರು ರಸ್ತೆ ದಾಟಲು ಹರಸಾಹಸ ಪಡುವಂತಾಯಿತು.
ನಗರದ ಹಾರ್ಡಿಂಗ್ ವೃತ್ತ, ಕೆ.ಆರ್ ವೃತ್ತ, ಅಗ್ರಹಾರ, ಸಿ ಟಿ ಬಸ್ ಸ್ಟ್ಯಾಂಡ್ , ಸಯ್ಯಾಜಿ ರಾವ್ ರಸ್ತೆ, ಇರ್ವಿನ್ ರಸ್ತೆ, ಅಯುರ್ವೇದಿಕ್ ಆಸ್ಪತ್ರೆ ರಸ್ತೆಗಳಲ್ಲಿ ಜನಸಾಗರ ಕಂಡು ಬಂತು.
ಕಳೆದ ಎರಡು ವರ್ಷ ಕೋವಿಡ್ ಹಿನ್ನೆಲೆಯಲ್ಲಿ ನಾಡಹಬ್ಬ ದಸರಾ ಮಹೋತ್ಸವ ಸರಳವಾಗಿ ನಡೆದಿತ್ತು. ಹಾಗಾಗಿ ವ್ಯಾಪಾರ, ವಹಿವಾಟು ಮತ್ತು ಪ್ರವಾಸೋದ್ಯಮ ನೆಲಕಚ್ಚಿತ್ತು. ಆದರೆ, ಈ ಬಾರಿ ಸರಕಾರ ಅದ್ಧೂರಿ ದಸರಾ ಆಚರಣೆ ಮಾಡಿದ ಪರಿಣಾಮ ಪ್ರವಾಸೋದ್ಯಮ ಚೇತರಿಕೆಗೆ ಅವಕಾಶ ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ಮೈಸೂರಿನ ಸುತ್ತಮುತ್ತಲಿನ ಪ್ರವಾಸಿ ತಾಣಗಳಲ್ಲಿ ಹೆಚ್ಚಿನ ಪ್ರವಾಸಿಗರು ಓಡಾಡಿಕೊಂಡಿದ್ದ ದೃಶ್ಯ ಕಣ್ಣಿಗೆ ಬಿತ್ತು
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…