ಮೈಸೂರು: ‘ಮಳೆ ನಿಂತರೂ ಮರದ ಹನಿ ನಿಲ್ಲುವುದಿಲ್ಲ’ ಎಂಬ ಮಾತಿನಂತೆ ದಸರಾ ಮುಗಿದರೂ ‘ಸಾಂಸ್ಕೃತಿಕ ನಗರಿ’ಗೆ ಬರುವ ಪ್ರವಾಸಿಗರ ಸಂಖ್ಯೆ ಮಾತ್ರ ಕಡಿಮೆ ಆಗಿಲ್ಲ. ದಸರಾ ಬಳಿಕವೂ ಮೈಸೂರಿನತ್ತ ಪ್ರವಾಸಿಗರ ದಂಡು ಹರಿದು ಬಂದಿದ್ದು, ಎಲ್ಲಾ ಕಡೆ ಟ್ರಾಫಿಕ್ ಜಾಮ್ ಆಗಿ ವಾಹನ ಸವಾರರು ಪರದಾಡುತ್ತಿದ್ದರು ಇನ್ನು ಅಲ್ಲೇ ಇದ್ದ ಸಾರ್ವಜನಿಕರು ರಸ್ತೆ ದಾಟಲು ಹರಸಾಹಸ ಪಡುವಂತಾಯಿತು.
ನಗರದ ಹಾರ್ಡಿಂಗ್ ವೃತ್ತ, ಕೆ.ಆರ್ ವೃತ್ತ, ಅಗ್ರಹಾರ, ಸಿ ಟಿ ಬಸ್ ಸ್ಟ್ಯಾಂಡ್ , ಸಯ್ಯಾಜಿ ರಾವ್ ರಸ್ತೆ, ಇರ್ವಿನ್ ರಸ್ತೆ, ಅಯುರ್ವೇದಿಕ್ ಆಸ್ಪತ್ರೆ ರಸ್ತೆಗಳಲ್ಲಿ ಜನಸಾಗರ ಕಂಡು ಬಂತು.
ಕಳೆದ ಎರಡು ವರ್ಷ ಕೋವಿಡ್ ಹಿನ್ನೆಲೆಯಲ್ಲಿ ನಾಡಹಬ್ಬ ದಸರಾ ಮಹೋತ್ಸವ ಸರಳವಾಗಿ ನಡೆದಿತ್ತು. ಹಾಗಾಗಿ ವ್ಯಾಪಾರ, ವಹಿವಾಟು ಮತ್ತು ಪ್ರವಾಸೋದ್ಯಮ ನೆಲಕಚ್ಚಿತ್ತು. ಆದರೆ, ಈ ಬಾರಿ ಸರಕಾರ ಅದ್ಧೂರಿ ದಸರಾ ಆಚರಣೆ ಮಾಡಿದ ಪರಿಣಾಮ ಪ್ರವಾಸೋದ್ಯಮ ಚೇತರಿಕೆಗೆ ಅವಕಾಶ ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ಮೈಸೂರಿನ ಸುತ್ತಮುತ್ತಲಿನ ಪ್ರವಾಸಿ ತಾಣಗಳಲ್ಲಿ ಹೆಚ್ಚಿನ ಪ್ರವಾಸಿಗರು ಓಡಾಡಿಕೊಂಡಿದ್ದ ದೃಶ್ಯ ಕಣ್ಣಿಗೆ ಬಿತ್ತು
ಬೆಂಗಳೂರು: ಉಗಾಂಡಾದಿಂದ ಬಂದಿದ್ದ ಮಹಿಳೆಯಲ್ಲಿ ಎಬೋಲಾ ಸೋಂಕಿನ ಲಕ್ಷಣಗಳು ಪತ್ತೆಯಾಗಿದ್ದು, ಆಕೆಯನ್ನು ಪ್ರತ್ಯೇಕ ವಾರ್ಡ್ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ದೃಢೀಕರಣಕ್ಕಾಗಿ…
ತಿರುವನಂತಪುರ: ಸಿಎಂಆರ್ಎಲ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಕೇರಳದ ಮಾಜಿ ಸಿಎಂ…
ಬೆಂಗಳೂರು: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಮೇ.29ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುವ…
ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…
ಬ್ಯೂಟಿ ಪಾರ್ಲರ್ಗಳನ್ನು ತೆರೆದು ಅದರಿಂದ ಬದುಕು ನಡೆಸಲು ತರಬೇತಿ ೨೦೧೪ರಲ್ಲಿ ದೆಹಲಿಯ ಅಂಶು ರಜಪೂತ್ ೧೫ ವರ್ಷದವಳಾಗಿದ್ದಾಗ ಎಂದಿನಂತೆ ತನ್ನ…
ಎಸ್.ಸಿ. ದಿನೇಶ್ ಕುಮಾರ್, ಹಿರಿಯ ಪತ್ರಕರ್ತರು ಕಾಕ್ರೋಚ್ ಜನತಾ ಪಾರ್ಟಿ ನಮ್ಮ ದೇಶದ ಯುವಜನರ ಹತಾಶೆ, ಸಿಟ್ಟು, ಆಕ್ರೋಶಕ್ಕೆ ಹಿಡಿದ…