sacchidananda swamy
ಮೈಸೂರು : ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸರ್ಕಾರವನ್ನು ದೂಷಿಸಬಾರದು. ಕಾಲ್ತುಳಿತಕ್ಕೆ ಕಾರಣ ಜನರ ಅಶಿಸ್ತು ಹಾಗೂ ಬೇಜಾವಬ್ದಾರಿತನ ಎಂದು ಅವಧೂತ ದತ್ತ ಪೀಠಾಧಿಪತಿ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಹೇಳಿದರು.
ಗುರುವಾರ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕ್ರಿಕೆಟ್ ಆಟಗಾರರನ್ನು ಹತ್ತಿರದಿಂದ ನೋಡುವ ಆಸೆಯಿಂದ ಜನರು ಪ್ರಾಣವನ್ನು ಕಳೆದುಕೊಂಡಿದ್ದಾರೆ. ಆಕಾಶ ನೋಡಲು ನೂಕು ನುಗ್ಗಲು ಯಾಕೆ?
ಟಿ.ವಿ. ಗಳಲ್ಲಿ ಬಹಳ ಹತ್ತಿರದಿಂದ ತೋರಿಸುತ್ತಾರೆ ನೋಡಿದರೆ ಆಯಿತು. ನೀರು, ಉಪ್ಪನ್ನು ಉಚಿತವಾಗಿ ನೀಡುತ್ತಿದ್ದಾರೆ ಎಂಬ ಮಾಹಿತಿ ಸಿಕ್ಕರೂ ಜನ ಓಡಿ ಹೋಗುತ್ತಾರೆ. ಜನರಿಗೆ ತಾಳ್ಮೆ, ಶಿಸ್ತು ಮುಖ್ಯ ಎಂದರು.
ತಿರುಪತಿ ಹಾಗೂ ಕುಂಭಮೇಳದಲ್ಲೂ ಸಹ ಇಂತಹದ್ದೇ ಅವಘಢವಾಯಿತು. ಹೀಗಾಗಿ ನಾವು ನಿಂದಿಸಬೇಕಾದದ್ದು ಸರ್ಕಾರವನ್ನಲ್ಲ. ಜನರು ಮೊದಲು ಎಚ್ಚೆತ್ತುಕೊಳ್ಳಬೇಕು. ನಾಗರಿಕ ಸಮಾಜದಲ್ಲಿ ಬದುಕುತ್ತಿದ್ದೇವೆ ಎಂದು ಉತ್ತಮ ನಾಗರಿಕರಾಗಿ ವರ್ತಿಸಬೇಕು. ಓದಿದಷ್ಟು ಜನರ ಬುದ್ಧಿ ಕೆಳಮಟ್ಟಕ್ಕೆ ಹೋಗುತ್ತಿದೆ. ಗುಡ್ಡ ಕುಸಿಯುತ್ತದೆ ಅಂತ ತಿಳಿದಿದ್ದರೂ ಸಹ ಅದರ ಕೆಳಗೆ ಮನೆ ಕಟ್ಟುತ್ತಾರೆ. ಹೀಗಾಗಿ ಜನ ಮೊದಲು ಬದಲಾಗಬೇಕು ಎಂದು ಹೇಳಿದರು.
10 ಲಕ್ಷ, 5 ಲಕ್ಷ ಪರಿಹಾರ ನೀಡಿದರೆ ಅಲ್ಲಿ ಹೋಗಿರುವ ಜೀವ ವಾಪಸ್ ಬರುಲ್ಲಾ. ಮೊದಲು ಜನರ ಮನ ಪರಿವರ್ತನೆ ಆಗಬೇಕಿದೆ ಎಂದು ನುಡಿದರು.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…