sacchidananda swamy
ಮೈಸೂರು : ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸರ್ಕಾರವನ್ನು ದೂಷಿಸಬಾರದು. ಕಾಲ್ತುಳಿತಕ್ಕೆ ಕಾರಣ ಜನರ ಅಶಿಸ್ತು ಹಾಗೂ ಬೇಜಾವಬ್ದಾರಿತನ ಎಂದು ಅವಧೂತ ದತ್ತ ಪೀಠಾಧಿಪತಿ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಹೇಳಿದರು.
ಗುರುವಾರ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕ್ರಿಕೆಟ್ ಆಟಗಾರರನ್ನು ಹತ್ತಿರದಿಂದ ನೋಡುವ ಆಸೆಯಿಂದ ಜನರು ಪ್ರಾಣವನ್ನು ಕಳೆದುಕೊಂಡಿದ್ದಾರೆ. ಆಕಾಶ ನೋಡಲು ನೂಕು ನುಗ್ಗಲು ಯಾಕೆ?
ಟಿ.ವಿ. ಗಳಲ್ಲಿ ಬಹಳ ಹತ್ತಿರದಿಂದ ತೋರಿಸುತ್ತಾರೆ ನೋಡಿದರೆ ಆಯಿತು. ನೀರು, ಉಪ್ಪನ್ನು ಉಚಿತವಾಗಿ ನೀಡುತ್ತಿದ್ದಾರೆ ಎಂಬ ಮಾಹಿತಿ ಸಿಕ್ಕರೂ ಜನ ಓಡಿ ಹೋಗುತ್ತಾರೆ. ಜನರಿಗೆ ತಾಳ್ಮೆ, ಶಿಸ್ತು ಮುಖ್ಯ ಎಂದರು.
ತಿರುಪತಿ ಹಾಗೂ ಕುಂಭಮೇಳದಲ್ಲೂ ಸಹ ಇಂತಹದ್ದೇ ಅವಘಢವಾಯಿತು. ಹೀಗಾಗಿ ನಾವು ನಿಂದಿಸಬೇಕಾದದ್ದು ಸರ್ಕಾರವನ್ನಲ್ಲ. ಜನರು ಮೊದಲು ಎಚ್ಚೆತ್ತುಕೊಳ್ಳಬೇಕು. ನಾಗರಿಕ ಸಮಾಜದಲ್ಲಿ ಬದುಕುತ್ತಿದ್ದೇವೆ ಎಂದು ಉತ್ತಮ ನಾಗರಿಕರಾಗಿ ವರ್ತಿಸಬೇಕು. ಓದಿದಷ್ಟು ಜನರ ಬುದ್ಧಿ ಕೆಳಮಟ್ಟಕ್ಕೆ ಹೋಗುತ್ತಿದೆ. ಗುಡ್ಡ ಕುಸಿಯುತ್ತದೆ ಅಂತ ತಿಳಿದಿದ್ದರೂ ಸಹ ಅದರ ಕೆಳಗೆ ಮನೆ ಕಟ್ಟುತ್ತಾರೆ. ಹೀಗಾಗಿ ಜನ ಮೊದಲು ಬದಲಾಗಬೇಕು ಎಂದು ಹೇಳಿದರು.
10 ಲಕ್ಷ, 5 ಲಕ್ಷ ಪರಿಹಾರ ನೀಡಿದರೆ ಅಲ್ಲಿ ಹೋಗಿರುವ ಜೀವ ವಾಪಸ್ ಬರುಲ್ಲಾ. ಮೊದಲು ಜನರ ಮನ ಪರಿವರ್ತನೆ ಆಗಬೇಕಿದೆ ಎಂದು ನುಡಿದರು.
‘ಸಂಚಾರ ನಿಯಂತ್ರಣ ಪೊಲೀಸರ ಆದ್ಯ ಕರ್ತವ್ಯ ಆಗಲಿ’ ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಬೆಂಗಳೂರಿನ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರ…
ಕೆ.ಬಿ.ಶಂಶುದ್ಧೀನ್ ನಿರೀಕ್ಷಿತ ಪ್ರಮಾಣದಲ್ಲಿ ಬೀಳದ ಮಳೆ; ರೈತರಲ್ಲಿ ಹೆಚ್ಚಿದ ಆತಂಕ ಕುಶಾಲನಗರ: ಮುಂಗಾರು ಮಳೆ ಕೊರತೆಯಿಂದ ಕೊಡಗು ಜಿಲ್ಲೆಯ ಹಾರಂಗಿ…
ಹಳ್ಳದ ನೀರನ್ನೇ ಸೇವಿಸುತ್ತಿರುವ ನಿವಾಸಿಗಳು; ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ಹನೂರು: ತಾಲ್ಲೂಕಿನ ಕಾಡಂಚಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಬೋಧಿಸಬೇಕೆಂದರೆ ಪುಸ್ತಕ ಕೊಂಡೊಯ್ಯುವ ಅನಿವಾರ್ಯತೆ ಮೈಸೂರು: ರಾಜ್ಯದ ಸರ್ಕಾರಿ ಶಾಲೆಗಳ ಆರಂಭದಿಂದಲೇ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಿಸಲಾಗುತ್ತಿದೆ. ಪ್ರತಿವರ್ಷ ಸಾಮಾನ್ಯವಾಗಿ…
ಲಖನೌ: ಉತ್ತರ ಪ್ರದೇಶದ ಅಲಿಗಂಜ್ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…