ಮೈಸೂರು

ತಿ.ನರಸೀಪುರ: ಮಹಿಳೆಯ ಶವಸಂಸ್ಕಾರಕ್ಕೆ ಅವಕಾಶ ಕೊಡದ ಸ್ಥಳೀಯರು

ಮೈಸೂರು: ಸ್ಮಶಾನದಲ್ಲಿ ಅಂತ್ಯಸಂಸ್ಕಾರ ನಡೆಸಲು ಸ್ಥಳೀಯರು ಅವಕಾಶ ಮಾಡಿಕೊಡದ ಅಮಾನವೀಯ ಘಟನೆಯೊಂದು ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಹಾಗೂ ಸಮಾಜ ಕಲ್ಯಾಣ ಸಚಿವ ಎಚ್‌.ಸಿ.ಮಹದೇವಪ್ಪ ಅವರ ತವರು ಕ್ಷೇತ್ರವಾದ ಮೈಸೂರು ಜಿಲ್ಲೆ ತಿ.ನರಸೀಪುರ ತಾಲ್ಲೂಕಿನ ಭೈರಾಪುರ ಪಟ್ಟಣದಲ್ಲಿ ನಡೆದಿದೆ.

ಮೃತರು ದಾವಣಗೆರೆ ಮೂಲದ ಕೊರಚ ಕುಟುಂಬದ ರತ್ನಮ್ಮ ಎಂಬ ಕಾರಣಕ್ಕೆ ಸ್ಥಳಿಯರು ಅಂತ್ಯಸಂಸ್ಕಾರಕ್ಕೆ ಅವಕಾಶ ಮಾಡಿಕೊಟ್ಟಿಲ್ಲ. ಆದರೆ ಇವರು ಹಲವಾರು ವರ್ಷಗಳಿಂದ ತಿ.ನರಸೀಪುರ ತಾಲ್ಲೂಕಿನ ಭೈರಾಪುರ ಪಟ್ಟಣದಲ್ಲಿ ವಾಸವಾಗಿದ್ದು, ವಾಸಕ್ಕೆ ಸಂಬಂಧಿಸಿದಂತೆ ಆಧಾರ್‌ ಕಾರ್ಡ್‌, ರೇಷನ್‌ ಕಾರ್ಡ್‌, ಓಟರ್‌ ಐಡಿ, ವಾಸಸ್ಥಳ ದೃಢೀಕರಣ ಪತ್ರವಿದೆ.

ಮೃತ ದೇಹವನ್ನು ಕೊರಚ ಕುಟುಂಬವು ಹೂಳಲು ಹೊರಟಾಗ ಸ್ಥಳೀಯರು ಕಿರಿಕ್‌ ತೆಗೆದಿದ್ದಾರೆ. ಬ್ರಾಹ್ಮಣ, ಲಿಂಗಾಯತ, ಒಕ್ಕಲಿಗ, ಪರಿಶಿಷ್ಟ ಜಾತಿ, ಪಂಗಡಗಳಲ್ಲಿ ಪ್ರತ್ಯೇಕ ಸ್ಮಶಾನವಿದ್ದು, ಯಾವ ಸ್ಮಶಾನದಲ್ಲೂ ಅಂತ್ಯಸಂಸ್ಕಾರ ನೆರವೇರಿಸಲು ಮುಖಂಡರು ಅವಕಾಶ ಮಾಡಿಕೊಡದ ಕಾರಣ ಕುಟುಂಬಸ್ಥರು ಮೃತದೇಹವನ್ನು ದಾವಣಗೆರೆಗೆ ಕೊಂಡೊಯ್ದಿದ್ದಾರೆ.

ಈ ಬಗ್ಗೆ ಜಿಲ್ಲಾಡಳಿತ, ಅಧಿಕಾರಿಗಳು, ರಾಜಕಾರಣಿಗಳು ತೀವ್ರ ಮೌನವಹಿಸಿದ್ದು, ಇವರ ನಡೆಗೆ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಶವವನ್ನು ದಾವಣಗೆರೆಗೆ ರವಾನೆ ಮಾಡಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ವಿಧಾನಸಭೆಯಲ್ಲಿ ಹನೂರು ಎನ್‌ಕೌಂಟರ್‌ ಸದ್ದು: ಗದ್ದಲ ಕೋಲಾಹಲ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್‌ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್‌,…

2 hours ago

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

5 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

5 hours ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

6 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

9 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

9 hours ago