ಮೈಸೂರು

ಪಿರಿಯಾಪಟ್ಟಣ : ಈಜಲು ನೀರಿಗಿಳಿದಿ ಯುವಕರಿಬ್ಬರು ಸಾವು

ಪಿರಿಯಾಪಟ್ಟಣ : ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ದೊಡ್ಡ ಹರವೆ ಬಳಿ ನಡೆದಿದೆ.

ಪಿರಿಯಾಪಟ್ಟಣದಲ್ಲಿ ಟೈಲ್ಸ್ ಮತ್ತು ಪೇಂಟಿಂಗ್ ಕೆಲಸ ಮಾಡುವ ನಾಲ್ವರು ಭಾನುವಾರ ಮಧ್ಯಾಹ್ನ ಈಜಲು ನದಿಗೆತೆರಳಿದ್ದು, ಈಜುತ್ತಿದ್ದ ವೇಳೆ ಪಿ. ಪಟ್ಟಣ ಟೌನ್ ನಿವಾಸಿ ಶಿವಮೂರ್ತಿ ಮಗ ಗಣೇಶ (೨೨) ಮತ್ತು ಕೆ. ಎಂ. ಬಡಾವಣೆಯ ನಿವಾಸಿ ಶತಾಜ್ ಎಂಬವರ ಮಗ ಇಮ್ರಾನ್ (೨೮) ಮೃತಪಟ್ಟಿದ್ದಾರೆ.

ನದಿಯಲ್ಲಿ ಈಜಲು ಹೋದ ಸಂದರ್ಭದಲ್ಲಿ ಇಮ್ರಾನ್ ಮುಳುಗಿದ್ದು, ಈತನನ್ನು ರಕ್ಷಿಸಲು ಹೋದ ಗಣೇಶ್ ಕೂಡ ಸಾವಿಗೀಡಾಗಿದ್ದಾನೆ. ಈ ಸಂಬಂಧ ಬೈಲಕುಪ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಳುಗು ತಜ್ಞರಿಂದ ಗಣೇಶನ ಮೃತದೇಹ ಹೊರತೆಗೆಯಲಾಗಿದ್ದು, ಇಮ್ರಾನ್ ಶವ ಪತ್ತೆಯಾಗಿಲ್ಲ. ರಾತ್ರಿಯಾದ ಕಾರಣ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ. ಸೋಮವಾರ ಕಾರ್ಯಾಚರಣೆ ಮುಂದುವರಿಸುವುದಾಗಿ ಪೊಲೀಸ್ ಇಲಾಖೆಯವರು ತಿಳಿಸಿದ್ದಾರೆ. ಗಣೇಶ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪಿರಿಯಾಪಟ್ಟಣಕ್ಕೆ ತರಲಾಗಿದೆ.

ಆಂದೋಲನ ಡೆಸ್ಕ್

Recent Posts

ಪ್ರಧಾನ್‌ ರಾಜೀನಾಮೆ : ವಾಂಗ್ಚುಕ್‌ ಫಸ್ಟ್‌ ರಿಯಾಕ್ಷನ್‌

ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್‌ ವಾಂಗ್ಚುಕ್‌ ಮೊದಲ ಪ್ರತಿಕ್ರಿಯೆ…

11 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

19 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

19 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

19 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ಉಡುಪು ಯಾಕೆ ಬದಲಾಯಿತು?

  ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…

19 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಸಜ್ಜನನಾದ ಆಂಗ್ಲನಾಗುವ ಪ್ರಯತ್ನ

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…

19 hours ago