ಮೈಸೂರು: ಕಾಂಗ್ರೆಸ್ ನವರು ನನ್ನ ಬಗ್ಗೆ ಮೃದುಧೋರಣೆ ತಳೆದಿರುವ ಕುರಿತು ಏನನ್ನು ಹೇಳುವುದಿಲ್ಲ. ಯಾರ ಬಗ್ಗೆಯೂ ನಾನು ವೈಯುಕ್ತಿಕ ಟೀಕೆಗಳನ್ನು ಮಾಡುವುದಿಲ್ಲ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.
ಯದುವೀರ್ ಒಡೆಯರ್ ಬಗ್ಗೆ ಕಾಂಗ್ರೆಸ್ ನಾಯಕರು ಸಾಫ್ಟ್ ಕಾರ್ನರ್ ಆಗಿರುವ ವಿಚಾರ ಕುರಿತು ಮಾತನಾಡಿದ ಅವರು, ಮುಖ್ಯಮಂತ್ರಿ ಹುದ್ದೆಗೆ ತನ್ನದೇ ಆದ ಮಹತ್ವವಿದೆ. ಮುಖ್ಯಮಂತ್ರಿಗಳ ಬಗ್ಗೆ ನಾನು ಏನನ್ನೂ ಮಾತನಾಡುವುದಿಲ್ಲ. ಯಾರನ್ನೂ ಕೂಡ ನಾನು ವೈಯುಕ್ತಿಕವಾಗಿ ಟೀಕಿಸುವುದಿಲ್ಲ. ಕಾಂಗ್ರೆಸ್ ನವರು ನನ್ನ ಬಗ್ಗೆ ಮೃದುಧೋರಣೆ ತಳೆದಿರುವ ಕುರಿತು ಏನನ್ನು ಹೇಳುವುದಿಲ್ಲ. ಯಾರ ಬಗ್ಗೆಯೂ ನಾನು ವೈಯುಕ್ತಿಕ ಟೀಕೆಗಳನ್ನು ಮಾಡುವುದಿಲ್ಲ ಎಂದರು.
ಇನ್ನು ಇಷ್ಟು ದಿನ ನಾನು ಜನಸಾಮಾನ್ಯರ ಜೊತೆ ಬೆರೆಯಲು ಸಾಧ್ಯವಾಗಿರಲಿಲ್ಲ. ಇದೀಗ ಬಿಜೆಪಿ ಅಭ್ಯರ್ಥಿ ಆಗಿರುವುದರಿಂದ ಜನಸಾಮಾನ್ಯರನ್ನು ಭೇಟಿ ಮಾಡುತ್ತಿದ್ದೇನೆ. ಜನರು ಕೂಡ ಪ್ರೀತಿ, ಅಭಿಮಾನದಿಂದ ಕಾಣುತ್ತಿದ್ದಾರೆ. ನಾನು ಕೂಡ ಜನರೊಂದಿಗೆ ಬೆರೆತು ಸಮಸ್ಯೆಗಳನ್ನು ಆಲಿಸುತ್ತಿದ್ದೇನೆ. ಇದು ನನಗೆ ಸಂತಸ ತಂದಿದೆ ಎಂದಿದ್ದಾರೆ.
ಇದುವರೆಗೆ ನನಗೆ ಏನು ಸಿಕ್ಕಿರಲಿಲ್ಲವೋ ಅದು ಕಳೆದ 15 ದಿನಗಳಿಂದ ಸಿಗುತ್ತಿದೆ. ಜನರು ತೋರುತ್ತಿರುವ ಕಾಳಜಿಗೆ ನಾನು ಆಭಾರಿ. ನಾನು ಮುಂದೆಯೂ ಇದೇ ರೀತಿ ಜನರ ಜೊತೆ ಇರುತ್ತೇನೆ ಎಂದು ತಿಳಿಸಿದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…