ಮೈಸೂರು : 50 ವರ್ಷದಿಂದ ಯಾವತ್ತೂ ಮಹಿಷಾ ದಸರಾ ಮಾಡಿದ್ದಾರೆ? ಇವರು ಯಾರನ್ನು ಮೂರ್ಖರನ್ನಾಗಿ ಮಾಡುತ್ತಿದ್ದಾರೆ? ಮಹಿಷ ದಸರಾದಂತಹ ವಿಕೃತಿಗಳನ್ನು ಈಗಲೇ ಸದೆ ಬಡಿಯಬೇಕು. ನಾವು ಸಂಘರ್ಷಕ್ಕೂ ಸೈ, ಹೊಡೆದಾಟಕ್ಕೂ ಸೈ, ಎಲ್ಲದ್ದಕ್ಕೂ ಸಿದ್ಧರಾಗಿಯೇ ಚಾಮುಂಡಿ ಬೆಟ್ಟ ಚಲೋ ಮಾಡ್ತಿರೋದು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈಗಲೇ ಇವರನ್ನು ಸದೆ ಬಡಿಯಬೇಕು. ಇಲ್ಲದಿದ್ದರೆ ಮಲೈ ಮಹದೇಶ್ವರ ಬೆಟ್ಟಕ್ಕೆ ಹೋಗಿ ವೀರಪ್ಪನ್ ನಮ್ಮ ದೇವರು. ನಮ್ಮ ಮೂಲ ಪುರುಷ ಅಂತಾ ಹೇಳಿ ಮಲೈ ಮಹದೇಶ್ವರನನ್ನು ದೆವ್ವ ಮಾಡುತ್ತಾರೆ. ವೀರಪ್ಪನ್ ನಮ್ಮ ಮೂಲ ನಿವಾಸಿ, ಅವನು ಪ್ರಕೃತಿ ರಕ್ಷಕ ಅಂತಾ ಕಥೆ ಕಟ್ಟಿ ಮಲೈ ಮಹದೇಶ್ವರನನ್ನು ದೆವ್ವ ಮಾಡಿ ಬಿಡುತ್ತಾರೆ ಎಂದು ಕಿಡಿಕಾರಿದರು.
ಅಕ್ಟೋಬರ್ 13 ರಂದು ಬೆಳಗ್ಗೆ 8 ಗಂಟೆಗೆ ಚಲೋ ಚಾಮುಂಡಿ ಬೆಟ್ಟ ಜಾಥಾ ಹಮ್ಮಿಕೊಂಡಿದ್ದು, ಐದು ಸಾವಿರಕ್ಕೂ ಹೆಚ್ಚು ಜನ ಜಾಥಾದಲ್ಲಿ ಭಾಗಿಯಾಗಲಿದ್ದಾರೆ. ಚಾಮುಂಡಿ ಗೆ ಪೂಜೆ ಮಾಡಿ ಮಹಿಷಾಸುರನ ಮುಂದೆ ಕುಳಿತುಕೊಳ್ಳುತ್ತೇವೆ ಎಂದು ಹೇಳಿದರು.
ಬಿ ಟಿ ಲಲಿತಾ ನಾಯಕ್ ಸಚಿವೆಯಾಗಿದ್ದಾಗ ಅವರ ಮಗ ಅಂಬೇಡ್ಕರ್ ಪ್ರತಿಮೆಗೆ ಮದ್ಯ ಕುಡಿಸಲು ಹೋಗಿದ್ದ. ಡಾ ಬಿಆರ್ ಅಂಬೇಡ್ಕರ್ಗೆ ಅಪಮಾನ ಮಾಡಿದ ವ್ಯಕ್ತಿಯ ತಾಯಿಯನ್ನು ಮಹಿಷ ದಸರಾ ಉದ್ಘಾಟನೆಗೆ ಕೆಲವು ದಲಿತರು ಕರೆದು ಕೊಂಡು ಬರುತ್ತಿರುವುದು ಸರಿನಾ? ಎಂದು ಪ್ರಶ್ನಿಸಿದರು.
ನಾವು ಸಂಘರ್ಷಕ್ಕೂ ಸೈ, ಹೊಡೆದಾಟಕ್ಕೂ ಸೈ, ಎಲ್ಲದ್ದಕ್ಕೂ ಸಿದ್ಧರಾಗಿಯೇ ಚಾಮುಂಡಿ ಬೆಟ್ಟ ಚಲೋ ಮಾಡ್ತಿರೋದು. ಸಂಘರ್ಷ ಆದರೂ ಪರವಾಗಿಲ್ಲ ಇವರನ್ನು ಹೊಸಕಿ ಹಾಕಲೇಬೇಕು. ನಾವು ತೀರ್ಮಾನ ಮಾಡಿಯೆ ಚಾಮುಂಡಿ ಚಲೋ ಮಾಡ್ತಿರೋದು. ದೇಶ ಮತ್ತು ಧರ್ಮ ರಕ್ಷಣೆಗೆ ನಾವು ಸಂಘರ್ಷಕ್ಕೆ ಸಿದ್ಧ. ನಮ್ಮ ಪಕ್ಷವೂ ಅದೇ ರೀತಿ ಬೆಳೆದಿದ್ದು. ಚಾಮುಂಡಿ ತಾಯಿಗೆ ಅವಮಾನ ಮಾಡುವುದನ್ನು ನಿಲ್ಲಿಸಲು ಸಂಘರ್ಷ ಹಾಗೂ ಹೊಡೆದಾಟಕ್ಕೂ ಸಿದ್ಧ ಎಂದರು.
ಸಂಘರ್ಷದಿಂದಲೇ ನಾವು ಪಕ್ಷ ಕಟ್ಟಿರೊದು. ಚೈನಾ, ಪಾಕಿಸ್ತಾನ ಬಾರ್ಡರ್ನಲ್ಲಿ ಸಂಘರ್ಷವನೇ ಮಾಡಬೇಕು. ಇಲ್ಲಿ ಧರ್ಮ ಉಳಿಸಲು ಸಂಘರ್ಷ ಮಾಡಬೇಕು. ಧರ್ಮ ರಕ್ಷಣೆ ವಿಚಾರವಾಗಿ ಸಂಘರ್ಷ ತಪ್ಪಲ್ಲ. ಚಾಮುಂಡಿ ಬೆಟ್ಟದಲ್ಲಿ ನಾವು ಯಾವುದೇ ಅನಾಚಾರ ನಡೆಯಲು ಬಿಡುವುದಿಲ್ಲ ಎಂದು ಪ್ರತಾಪ್ ಸಿಂಹ ಹೇಳಿದರು.
ಬೆಂಗಳೂರು : ಶಕ್ತಿ ಯೋಜನೆಯ ಮಹಿಳಾ ಟಿಕೆಟ್ಗಳನ್ನು ಪುರುಷ ಪ್ರಯಾಣಿಕರಿಗೂ ನೀಡಿ ಹಣ ಸಂಗ್ರಹಿಸಿ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ…
ಮೈಸೂರು : ರಾಜ್ಯದಲ್ಲಿ ಕೃಷಿ, ತೋಟಗಾರಿಕೆ, ಪಶುವೈದ್ಯಕೀಯ ಮತ್ತು ಅರಣ್ಯ ಶಾಸ್ತ್ರ ಪದವಿಗಳಿಗೆ ಕೃಷಿಕರ ಕೋಟಾದಡಿ (50%) ಅಡಿಯಲ್ಲಿ ವಿದ್ಯಾರ್ಥಿಗಳಿಗೆ…
ಮುಂಬೈ : ಖ್ಯಾತ ಗಾಯಕಿ ಆಶಾ ಭೋಸ್ಲೆ (92) ಅವರು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಆಶಾ ಭೋಸ್ಲೆ ಅವರಿಗೆ…
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ಪುನರಾಚನೆಗೆ ಒತ್ತಡ ಹೆಚ್ಚಾಗಿದ್ದು, 20ಕ್ಕೂ ಹೆಚ್ಚು ಶಾಸಕರು ಇಂದು (ಭಾನುವಾರ)…
ಕನ್ನಡಕ್ಕೆ ಶ್ರೇಷ್ಠ ದಾಂಪತ್ಯ ಗೀತೆಗಳನ್ನು ನೀಡಿದ, ಪ್ರೇಮಕವಿಯೆಂದೇ ಹೆಸರಾದ ನಾಡಿನ ಹಿರಿಯ ಕವಿ ಕೆ.ಎಸ್.ನರಸಿಂಹಸ್ವಾಮಿ ಅವರ ಗೌರವಾರ್ಥವಾಗಿ ಹುಟ್ಟೂರಾದ ಕಿಕ್ಕೇರಿಯ…
ಮೈಸೂರಿನಲ್ಲಿ ಸ್ವಲ್ಪ ಮಳೆಯಾದರೂ ರೂಪಾನಗರ ಬಡಾವಣೆಯಲ್ಲಿ ವಿದ್ಯುತ್ ಕಡಿತ ಮಾಡಲಾಗುತ್ತದೆ. ರಾತ್ರಿ ವೇಳೆ ಮಳೆ ಬಂದರಂತೂ ವಿದ್ಯುತ್ ಸಂಪರ್ಕಕಲ್ಪಿಸುವುದು ಬೆಳಿಗ್ಗೆಯೇ.…