ಮೈಸೂರು

ಮಹಿಷ ದಸರಾದಂತಹ ವಿಕೃತಿಗಳನ್ನು ಈಗಲೇ ಸದೆ ಬಡಿಯಬೇಕು : ಪ್ರತಾಪ್‌ ಸಿಂಹ

ಮೈಸೂರು : 50 ವರ್ಷದಿಂದ ಯಾವತ್ತೂ ಮಹಿಷಾ ದಸರಾ ಮಾಡಿದ್ದಾರೆ? ಇವರು ಯಾರನ್ನು ಮೂರ್ಖರನ್ನಾಗಿ ಮಾಡುತ್ತಿದ್ದಾರೆ? ಮಹಿಷ ದಸರಾದಂತಹ ವಿಕೃತಿಗಳನ್ನು ಈಗಲೇ ಸದೆ ಬಡಿಯಬೇಕು. ನಾವು ಸಂಘರ್ಷಕ್ಕೂ ಸೈ, ಹೊಡೆದಾಟಕ್ಕೂ ಸೈ, ಎಲ್ಲದ್ದಕ್ಕೂ ಸಿದ್ಧರಾಗಿಯೇ ಚಾಮುಂಡಿ ಬೆಟ್ಟ ಚಲೋ ಮಾಡ್ತಿರೋದು ಎಂದು ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ.

ಈ ಬಗ್ಗೆ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈಗಲೇ ಇವರನ್ನು ಸದೆ ಬಡಿಯಬೇಕು. ಇಲ್ಲದಿದ್ದರೆ ಮಲೈ ಮಹದೇಶ್ವರ ಬೆಟ್ಟಕ್ಕೆ ಹೋಗಿ ವೀರಪ್ಪನ್ ನಮ್ಮ ದೇವರು. ನಮ್ಮ ಮೂಲ ಪುರುಷ ಅಂತಾ ಹೇಳಿ ಮಲೈ ಮಹದೇಶ್ವರನನ್ನು ದೆವ್ವ ಮಾಡುತ್ತಾರೆ. ವೀರಪ್ಪನ್‌ ನಮ್ಮ‌ ಮೂಲ ನಿವಾಸಿ, ಅವನು ಪ್ರಕೃತಿ ರಕ್ಷಕ ಅಂತಾ ಕಥೆ ಕಟ್ಟಿ ಮಲೈ ಮಹದೇಶ್ವರನನ್ನು ದೆವ್ವ ಮಾಡಿ ಬಿಡುತ್ತಾರೆ ಎಂದು ಕಿಡಿಕಾರಿದರು.

ಅಕ್ಟೋಬರ್‌ 13 ರಂದು ಬೆಳಗ್ಗೆ 8 ಗಂಟೆಗೆ ಚಲೋ ಚಾಮುಂಡಿ ಬೆಟ್ಟ ಜಾಥಾ ಹಮ್ಮಿಕೊಂಡಿದ್ದು, ಐದು ಸಾವಿರಕ್ಕೂ ಹೆಚ್ಚು ಜನ ಜಾಥಾದಲ್ಲಿ ಭಾಗಿಯಾಗಲಿದ್ದಾರೆ. ಚಾಮುಂಡಿ ಗೆ ಪೂಜೆ ಮಾಡಿ ಮಹಿಷಾಸುರನ ಮುಂದೆ ಕುಳಿತುಕೊಳ್ಳುತ್ತೇವೆ ಎಂದು ಹೇಳಿದರು.

ಬಿ ಟಿ ಲಲಿತಾ ನಾಯಕ್ ಸಚಿವೆಯಾಗಿದ್ದಾಗ ಅವರ ಮಗ ಅಂಬೇಡ್ಕರ್ ಪ್ರತಿಮೆಗೆ ಮದ್ಯ ಕುಡಿಸಲು ಹೋಗಿದ್ದ. ಡಾ ಬಿಆರ್‌ ಅಂಬೇಡ್ಕರ್‌ಗೆ ಅಪಮಾನ ಮಾಡಿದ ವ್ಯಕ್ತಿಯ ತಾಯಿಯನ್ನು ಮಹಿಷ ದಸರಾ ಉದ್ಘಾಟನೆಗೆ ಕೆಲವು ದಲಿತರು ಕರೆದು ಕೊಂಡು ಬರುತ್ತಿರುವುದು ಸರಿನಾ? ಎಂದು ಪ್ರಶ್ನಿಸಿದರು.

ನಾವು ಸಂಘರ್ಷಕ್ಕೂ ಸೈ, ಹೊಡೆದಾಟಕ್ಕೂ ಸೈ, ಎಲ್ಲದ್ದಕ್ಕೂ ಸಿದ್ಧರಾಗಿಯೇ ಚಾಮುಂಡಿ ಬೆಟ್ಟ ಚಲೋ ಮಾಡ್ತಿರೋದು. ಸಂಘರ್ಷ ಆದರೂ ಪರವಾಗಿಲ್ಲ ಇವರನ್ನು ಹೊಸಕಿ ಹಾಕಲೇಬೇಕು. ನಾವು ತೀರ್ಮಾನ ಮಾಡಿಯೆ ಚಾಮುಂಡಿ ಚಲೋ ಮಾಡ್ತಿರೋದು. ದೇಶ ಮತ್ತು ಧರ್ಮ ರಕ್ಷಣೆಗೆ ನಾವು ಸಂಘರ್ಷಕ್ಕೆ ಸಿದ್ಧ. ನಮ್ಮ‌ ಪಕ್ಷವೂ ಅದೇ ರೀತಿ ಬೆಳೆದಿದ್ದು. ಚಾಮುಂಡಿ ತಾಯಿಗೆ ಅವಮಾನ ಮಾಡುವುದನ್ನು ನಿಲ್ಲಿಸಲು ಸಂಘರ್ಷ ಹಾಗೂ ಹೊಡೆದಾಟಕ್ಕೂ ಸಿದ್ಧ ಎಂದರು.

ಸಂಘರ್ಷದಿಂದಲೇ ನಾವು ಪಕ್ಷ ಕಟ್ಟಿರೊದು. ಚೈನಾ, ಪಾಕಿಸ್ತಾನ ಬಾರ್ಡರ್‌ನಲ್ಲಿ ಸಂಘರ್ಷವನೇ ಮಾಡಬೇಕು. ಇಲ್ಲಿ ಧರ್ಮ ಉಳಿಸಲು ಸಂಘರ್ಷ ಮಾಡಬೇಕು. ಧರ್ಮ ರಕ್ಷಣೆ‌ ವಿಚಾರವಾಗಿ ಸಂಘರ್ಷ ತಪ್ಪಲ್ಲ. ಚಾಮುಂಡಿ ಬೆಟ್ಟದಲ್ಲಿ ನಾವು ಯಾವುದೇ ಅನಾಚಾರ ನಡೆಯಲು ಬಿಡುವುದಿಲ್ಲ ಎಂದು ಪ್ರತಾಪ್‌ ಸಿಂಹ ಹೇಳಿದರು.

lokesh

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

21 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

21 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

21 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

22 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

22 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

22 hours ago