ಮೈಸೂರು

ಮಹಿಷ ದಸರಾದಂತಹ ವಿಕೃತಿಗಳನ್ನು ಈಗಲೇ ಸದೆ ಬಡಿಯಬೇಕು : ಪ್ರತಾಪ್‌ ಸಿಂಹ

ಮೈಸೂರು : 50 ವರ್ಷದಿಂದ ಯಾವತ್ತೂ ಮಹಿಷಾ ದಸರಾ ಮಾಡಿದ್ದಾರೆ? ಇವರು ಯಾರನ್ನು ಮೂರ್ಖರನ್ನಾಗಿ ಮಾಡುತ್ತಿದ್ದಾರೆ? ಮಹಿಷ ದಸರಾದಂತಹ ವಿಕೃತಿಗಳನ್ನು ಈಗಲೇ ಸದೆ ಬಡಿಯಬೇಕು. ನಾವು ಸಂಘರ್ಷಕ್ಕೂ ಸೈ, ಹೊಡೆದಾಟಕ್ಕೂ ಸೈ, ಎಲ್ಲದ್ದಕ್ಕೂ ಸಿದ್ಧರಾಗಿಯೇ ಚಾಮುಂಡಿ ಬೆಟ್ಟ ಚಲೋ ಮಾಡ್ತಿರೋದು ಎಂದು ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ.

ಈ ಬಗ್ಗೆ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈಗಲೇ ಇವರನ್ನು ಸದೆ ಬಡಿಯಬೇಕು. ಇಲ್ಲದಿದ್ದರೆ ಮಲೈ ಮಹದೇಶ್ವರ ಬೆಟ್ಟಕ್ಕೆ ಹೋಗಿ ವೀರಪ್ಪನ್ ನಮ್ಮ ದೇವರು. ನಮ್ಮ ಮೂಲ ಪುರುಷ ಅಂತಾ ಹೇಳಿ ಮಲೈ ಮಹದೇಶ್ವರನನ್ನು ದೆವ್ವ ಮಾಡುತ್ತಾರೆ. ವೀರಪ್ಪನ್‌ ನಮ್ಮ‌ ಮೂಲ ನಿವಾಸಿ, ಅವನು ಪ್ರಕೃತಿ ರಕ್ಷಕ ಅಂತಾ ಕಥೆ ಕಟ್ಟಿ ಮಲೈ ಮಹದೇಶ್ವರನನ್ನು ದೆವ್ವ ಮಾಡಿ ಬಿಡುತ್ತಾರೆ ಎಂದು ಕಿಡಿಕಾರಿದರು.

ಅಕ್ಟೋಬರ್‌ 13 ರಂದು ಬೆಳಗ್ಗೆ 8 ಗಂಟೆಗೆ ಚಲೋ ಚಾಮುಂಡಿ ಬೆಟ್ಟ ಜಾಥಾ ಹಮ್ಮಿಕೊಂಡಿದ್ದು, ಐದು ಸಾವಿರಕ್ಕೂ ಹೆಚ್ಚು ಜನ ಜಾಥಾದಲ್ಲಿ ಭಾಗಿಯಾಗಲಿದ್ದಾರೆ. ಚಾಮುಂಡಿ ಗೆ ಪೂಜೆ ಮಾಡಿ ಮಹಿಷಾಸುರನ ಮುಂದೆ ಕುಳಿತುಕೊಳ್ಳುತ್ತೇವೆ ಎಂದು ಹೇಳಿದರು.

ಬಿ ಟಿ ಲಲಿತಾ ನಾಯಕ್ ಸಚಿವೆಯಾಗಿದ್ದಾಗ ಅವರ ಮಗ ಅಂಬೇಡ್ಕರ್ ಪ್ರತಿಮೆಗೆ ಮದ್ಯ ಕುಡಿಸಲು ಹೋಗಿದ್ದ. ಡಾ ಬಿಆರ್‌ ಅಂಬೇಡ್ಕರ್‌ಗೆ ಅಪಮಾನ ಮಾಡಿದ ವ್ಯಕ್ತಿಯ ತಾಯಿಯನ್ನು ಮಹಿಷ ದಸರಾ ಉದ್ಘಾಟನೆಗೆ ಕೆಲವು ದಲಿತರು ಕರೆದು ಕೊಂಡು ಬರುತ್ತಿರುವುದು ಸರಿನಾ? ಎಂದು ಪ್ರಶ್ನಿಸಿದರು.

ನಾವು ಸಂಘರ್ಷಕ್ಕೂ ಸೈ, ಹೊಡೆದಾಟಕ್ಕೂ ಸೈ, ಎಲ್ಲದ್ದಕ್ಕೂ ಸಿದ್ಧರಾಗಿಯೇ ಚಾಮುಂಡಿ ಬೆಟ್ಟ ಚಲೋ ಮಾಡ್ತಿರೋದು. ಸಂಘರ್ಷ ಆದರೂ ಪರವಾಗಿಲ್ಲ ಇವರನ್ನು ಹೊಸಕಿ ಹಾಕಲೇಬೇಕು. ನಾವು ತೀರ್ಮಾನ ಮಾಡಿಯೆ ಚಾಮುಂಡಿ ಚಲೋ ಮಾಡ್ತಿರೋದು. ದೇಶ ಮತ್ತು ಧರ್ಮ ರಕ್ಷಣೆಗೆ ನಾವು ಸಂಘರ್ಷಕ್ಕೆ ಸಿದ್ಧ. ನಮ್ಮ‌ ಪಕ್ಷವೂ ಅದೇ ರೀತಿ ಬೆಳೆದಿದ್ದು. ಚಾಮುಂಡಿ ತಾಯಿಗೆ ಅವಮಾನ ಮಾಡುವುದನ್ನು ನಿಲ್ಲಿಸಲು ಸಂಘರ್ಷ ಹಾಗೂ ಹೊಡೆದಾಟಕ್ಕೂ ಸಿದ್ಧ ಎಂದರು.

ಸಂಘರ್ಷದಿಂದಲೇ ನಾವು ಪಕ್ಷ ಕಟ್ಟಿರೊದು. ಚೈನಾ, ಪಾಕಿಸ್ತಾನ ಬಾರ್ಡರ್‌ನಲ್ಲಿ ಸಂಘರ್ಷವನೇ ಮಾಡಬೇಕು. ಇಲ್ಲಿ ಧರ್ಮ ಉಳಿಸಲು ಸಂಘರ್ಷ ಮಾಡಬೇಕು. ಧರ್ಮ ರಕ್ಷಣೆ‌ ವಿಚಾರವಾಗಿ ಸಂಘರ್ಷ ತಪ್ಪಲ್ಲ. ಚಾಮುಂಡಿ ಬೆಟ್ಟದಲ್ಲಿ ನಾವು ಯಾವುದೇ ಅನಾಚಾರ ನಡೆಯಲು ಬಿಡುವುದಿಲ್ಲ ಎಂದು ಪ್ರತಾಪ್‌ ಸಿಂಹ ಹೇಳಿದರು.

lokesh

Recent Posts

ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡುತ್ತೇವೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…

2 hours ago

ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್‌ ಹುಸೇನ್‌ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…

4 hours ago

ಹಿರಿಯ ಸಾಹಿತಿ ಪಿ.ಲಂಕೇಶ್‌ ಪತ್ನಿ ಇಂದಿರಾ ಲಂಕೇಶ್‌ ನಿಧನ

ಬೆಂಗಳೂರು: ಲಂಕೇಶ್‌ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್‌ ಅವರ ಪತ್ನಿ ಇಂದಿರಾ ಲಂಕೇಶ್‌ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…

4 hours ago

ಮಹಾರಾಷ್ಟ್ರ| ತೆರೆದ ಬಾವಿಗೆ ಬಿದ್ದ ಪಿಕ್‌ಅಪ್‌ ವಾಹನ: 8 ಮಂದಿ ದುರ್ಮರಣ

ಮುಂಬೈ: ಪಿಕ್‌ ಅಪ್‌ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…

5 hours ago

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

9 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

9 hours ago