petroll bunk
ನಂಜನಗೂಡು: ನಂಜನಗೂಡಿನ ಗೋಳೂರು ಸರ್ಕಲ್ ಬಳಿಯಿರುವ ಆಶೀರ್ವಾದ್ ಭಾರತ್ ಪೆಟ್ರೋಲ್ ಬಂಕ್ನಲ್ಲಿ ಗ್ರಾಹಕರಿಗೆ ವಂಚನೆ ಮಾಡುತ್ತಿರುವ ಆರೋಪ ಕೇಳಿಬಂದಿದೆ.
ನಾವು ಕೊಟ್ಟ ಹಣಕ್ಕೆ ಸರಿಯಾಗಿ ಪೆಟ್ರೋಲ್ ಹಾಕುತ್ತಿಲ್ಲ ಎಂದು ತರಾಟೆಗೆ ತೆಗೆದುಕೊಂಡ ಗ್ರಾಹಕರು, ಈ ಬಂಕ್ನಿಂದ ನಮಗೆ ತೀವ್ರ ಮೋಸವಾಗುತ್ತಿದೆ ಎಂದು ಕಿಡಿಕಾರಿದ್ದಾರೆ.
ಬಂಕ್ನಲ್ಲಿ ಕೆಲಸ ಮಾಡುವ ಸಿಬ್ಬಂದಿಗಳ ವಿರುದ್ಧ ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದ್ದು, ಸ್ಥಳದಲ್ಲೇ ರಿಯಾಲಿಟಿ ಚೆಕ್ ಮಾಡಿದ್ದಾರೆ. ಹಾಕಿದ ಪೆಟ್ರೋಲನ್ನೇ ಮರು ಪರಿಶೀಲನೆ ಮಾಡಿದ ಗ್ರಾಹಕರು, 1 ಲೀಟರ್ಗೆ ಭಾರೀ ಮೋಸವಾಗಿದೆ ಎಂದು ಆರೋಪಿಸಿದ್ದಾರೆ. ಸ್ಥಳಕ್ಕೆ ಬಂಕ್ ಮಾಲೀಕ ಬರುವಂತೆ ಆಗ್ರಹಿಸಿದ ಗ್ರಾಹಕರು, ಸ್ಥಳೀಯ ಪೊಲೀಸರ ಗಮನಕ್ಕೂ ತಂದಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ನಂಜನಗೂಡು ಟೌನ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೋಸ ಮಾಡುತ್ತಿರುವುದು ಸಾಬೀತಾದರೆ ಪೆಟ್ರೋಲ್ ಬಂಕ್ ಮಾಲೀಕನ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್ ವಾಂಗ್ಚುಕ್ ಮೊದಲ ಪ್ರತಿಕ್ರಿಯೆ…
ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…
ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…
ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…
ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…