ಮೈಸೂರು

ಪೆಟ್ರೋಲ್ ಬಂಕ್‌ನಲ್ಲಿ ಗ್ರಾಹಕರಿಗೆ ವಂಚನೆ ಆರೋಪ: ಬಂಕ್ ಮುಂದೆಯೇ ಭಾರೀ ಹೈಡ್ರಾಮಾ

ನಂಜನಗೂಡು: ನಂಜನಗೂಡಿನ ಗೋಳೂರು ಸರ್ಕಲ್ ಬಳಿಯಿರುವ ಆಶೀರ್ವಾದ್ ಭಾರತ್ ಪೆಟ್ರೋಲ್ ಬಂಕ್‌ನಲ್ಲಿ ಗ್ರಾಹಕರಿಗೆ ವಂಚನೆ ಮಾಡುತ್ತಿರುವ ಆರೋಪ ಕೇಳಿಬಂದಿದೆ.

ನಾವು ಕೊಟ್ಟ ಹಣಕ್ಕೆ ಸರಿಯಾಗಿ ಪೆಟ್ರೋಲ್ ಹಾಕುತ್ತಿಲ್ಲ ಎಂದು ತರಾಟೆಗೆ ತೆಗೆದುಕೊಂಡ ಗ್ರಾಹಕರು, ಈ ಬಂಕ್‌ನಿಂದ ನಮಗೆ ತೀವ್ರ ಮೋಸವಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ಬಂಕ್‌ನಲ್ಲಿ ಕೆಲಸ ಮಾಡುವ ಸಿಬ್ಬಂದಿಗಳ ವಿರುದ್ಧ ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದ್ದು, ಸ್ಥಳದಲ್ಲೇ ರಿಯಾಲಿಟಿ ಚೆಕ್ ಮಾಡಿದ್ದಾರೆ. ಹಾಕಿದ ಪೆಟ್ರೋಲನ್ನೇ ಮರು ಪರಿಶೀಲನೆ ಮಾಡಿದ ಗ್ರಾಹಕರು, 1 ಲೀಟರ್‌ಗೆ ಭಾರೀ ಮೋಸವಾಗಿದೆ ಎಂದು ಆರೋಪಿಸಿದ್ದಾರೆ. ಸ್ಥಳಕ್ಕೆ ಬಂಕ್ ಮಾಲೀಕ ಬರುವಂತೆ ಆಗ್ರಹಿಸಿದ ಗ್ರಾಹಕರು, ಸ್ಥಳೀಯ ಪೊಲೀಸರ ಗಮನಕ್ಕೂ ತಂದಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ನಂಜನಗೂಡು ಟೌನ್‌ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೋಸ ಮಾಡುತ್ತಿರುವುದು ಸಾಬೀತಾದರೆ ಪೆಟ್ರೋಲ್‌ ಬಂಕ್‌ ಮಾಲೀಕನ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕಪಿಲಾ ತೀರದಲ್ಲಿ ಮುಂದುವರಿದ ಬಿಸಿ ನೀರಿನ ಸುಲಿಗೆ

ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್‌ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…

3 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಆಸಿಡ್ ದಾಳಿಯ ಸಂತ್ರಸ್ತೆಯರನ್ನು ಸಂತೈಸುವ ‘ದಿ ನೆಸ್ಟ್ ಸಲೂನ್’

ಬ್ಯೂಟಿ ಪಾರ್ಲರ್‌ಗಳನ್ನು ತೆರೆದು ಅದರಿಂದ ಬದುಕು ನಡೆಸಲು ತರಬೇತಿ ೨೦೧೪ರಲ್ಲಿ ದೆಹಲಿಯ ಅಂಶು ರಜಪೂತ್ ೧೫ ವರ್ಷದವಳಾಗಿದ್ದಾಗ ಎಂದಿನಂತೆ ತನ್ನ…

3 hours ago

ಜಿರಳೆಗಳು ಎದ್ದಿವೆ, ವ್ಯವಸ್ಥೆಯ ಗಟಾರ ತೊಳೆಯುವವರು ಯಾರು?

ಎಸ್.ಸಿ. ದಿನೇಶ್ ಕುಮಾರ್, ಹಿರಿಯ ಪತ್ರಕರ್ತರು ಕಾಕ್ರೋಚ್ ಜನತಾ ಪಾರ್ಟಿ ನಮ್ಮ ದೇಶದ ಯುವಜನರ ಹತಾಶೆ, ಸಿಟ್ಟು, ಆಕ್ರೋಶಕ್ಕೆ  ಹಿಡಿದ…

3 hours ago

ಅಕಾಲಿಕ ಮಳೆ; ಮಾವು ಇಳುವರಿ ಕುಂಠಿತ

ಚಿರಂಜೀವಿ ಸಿ. ಹುಲ್ಲಹಳ್ಳಿ ಬೆಳೆಗಾರ ಕಂಗಾಲು; ನಷ್ಟಕ್ಕೆ ಪರಿಹಾರ ಕಲ್ಪಿಸಲು ರೈತರ ಒತ್ತಾಯ ಮೈಸೂರು: ಮಳೆ ಕೊರತೆ ಮತ್ತು ಹವಾಮಾನ ವೈಪರೀತ್ಯದಿಂದಾಗಿ…

4 hours ago

ಗೂಡ್ಸ್ ಆಟೋ ಉರುಳಿ ಬಿದ್ದು ಮಹಿಳೆ ಸಾವು: ಹಲವರಿಗೆ ಗಾಯ

ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…

13 hours ago