ಮೈಸೂರು

ಭಾರತೀಯ ಜನತಾ ಪಾರ್ಟಿ ಕಚೇರಿಯಲ್ಲಿ ತತ್ವಜ್ಞಾನಿ ದಿನಾಚರಣೆ

ಮೈಸೂರು : ನಗರದ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ
ಆದಿ ಜಗದ್ಗುರು ಶ್ರೀ ಶಂಕರಾಚಾರ್ಯರ ಜಯಂತಿ ಅಂಗವಾಗಿ ತತ್ವಜ್ಞಾನಿ ದಿನಾಚರಣೆ ಆಚರಿಸಲಾಯಿತು.

ಆದಿ ಜಗದ್ಗುರು ಶ್ರೀ ಶಂಕರಾಚಾರ್ಯರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಶಾಸಕರಾದ ಟಿಎಸ್. ಶ್ರೀವತ್ಸ ರವರು , ಶಂಕರಾಚಾರ್ಯರು 1236 ವರ್ಷಗಳ ಹಿಂದೆಯೇ ಜನಿಸಿ ಹಿಂದೂ ಧರ್ಮದ ಉಳಿವಿಗಾಗಿ ಭಾರತವನ್ನ ಕಾಲ್ನಡಿಗೆಯಲ್ಲಿ 3ಬಾರಿ ಪರ್ಯಟನೆ ಮಾಡಿ 4ಪೀಠಗಳನ್ನ ಸ್ಥಾಪಿಸಿದ್ದಾರೆ, ಹಿಂದೂ ಧರ್ಮವನ್ನ ಪುನರತ್ಥಾನಗೊಳಿಸಿದ ಶಂಕರರು ಸಹಸ್ರಾಮಾನದ ಹಿಂದೆಯೇ ಸಾಮಾಜಿಕ ಸಾಮರಸ್ಯ ಸಂದೇಶ ಸಾರಿದ ರಾಮಾನುಜರು ಇಬ್ಬರು ಮಹನೀಯರ ಧ್ಯೇಯ ಸಿದ್ದಾಂತಗಳು ಹಿಂದೂ ಸಮಾಜಕ್ಕೆ ಮಾದರಿಯಾಗಿದೆ ಎಂದರು.

ಧಾರ್ಮಿಕ, ಆಧ್ಯಾತ್ಮಿಕವಲ್ಲದೇ ಸಾಂಸ್ಕೃತಿಕ ಹಾಗೂ ವೈಜ್ಞಾನಿಕವಾಗಿಯೂ ಹಲವಾರು ಕೊಡುಗೆಗಳನ್ನ ನೀಡಿದ್ದಾರೆ. ಈ ಎಲ್ಲಾ ಹನ್ನಲೆಯಿಂದಲೇ  ಪ್ರಧಾನಿ ನರೇಂದ್ರ ಮೋದಿರವರು ಶಂಕರ ಜಯಂತಿಯನ್ನ ವಿಶ್ವ ತತ್ವಜ್ಞಾನಿ ದಿನಾಚರಣೆ ಎಂದು ಘೋಷಿಸಿದರು.

ಬಿಜೆಪಿ ನಗರಾಧ್ಯಕ್ಷರಾದ ಎಲ್. ನಾಗೇಂದ್ರ ಮಾತನಾಡಿ, ಶಂಕರಾಚಾರ್ಯರು ಕೇವಲ 32ವರ್ಷಗಳಿದ್ದರೂ ಸಹ ಅವರು ಹಿಂದೂ ಧರ್ಮವನ್ನು ದೇಶದೆಲ್ಲಡೆ ಪ್ರಜ್ವಲಿಸಿದರು. ಇಂದಿಗೂ‌ ಸಹ ಶಂಕರ ತತ್ವಗಳು‌ ಯುವ ಮನಸ್ಸುಗಳನ್ನ ಸನ್ಮಾರ್ಗದತ್ತ ಕೊಂಡೊಯ್ಯುತ್ತದೆ ಎಂದರು.

ಮಾಜಿ.ಮೈಲಾಕ್ ಅಧ್ಯಕ್ಷ ಎನ್ ವಿ ಪನೀಶ್, ಮಾಜಿ ಮಹಾಪೌರರಾದ ಶಿವಕುಮಾರ್, ಮೈಸೂರು ನಗರ ಪ್ರಧಾನ ಕಾರ್ಯದರ್ಶಿ ಎಚ್‌ ಜಿ ಗಿರಿಧರ್, ಕೇಬಲ್ ಮಹೇಶ್, ಗೋಪಾಲ್ ರಾವ್, ನಗರ ಉಪಾಧ್ಯಕ್ಷ ಜೋಗಿ ಮಂಜು, ಮಾಜಿನಗರ ಪಾಲಿಕಾ ಸದಸ್ಯರಾದ ಪ್ರಮೀಳಾ ಭರತ್,ಬಿ.ವಿ.ಮಂಜುನಾಥ ಚಾಮುಂಡೇಶ್ವರಿ ಕ್ಷೇತ್ರದ ನಗರ ಅಧ್ಯಕ್ಷರಾದ ರಾಕೇಶ್ ಭಟ್, ಚಾಮುಂಡೇಶ್ವರಿ ಕ್ಷೇತ್ರದ ಮಂಡಲ ಅಧ್ಯಕ್ಷ ಪೈ. ಟಿ. ರವಿ,ಯುವಮೊರ್ಚಾ ಅಧ್ಯಕ್ಷ ರಾಕೇಶ್ ಗೌಡ,ಎಸ್ಸಿ ಮೊರ್ಚಾ ಅಧ್ಯಕ್ಷ ಶೈಲೇಂದ್ರ, ಅಜಯ್ ಶಾಸ್ತ್ರಿ, ಕೆ ಎಂ ನಿಶಾಂತ್, ಮೂಡ ಮಾಜಿ ಸದಸ್ಯ ನವೀನ್ ಕುಮಾರ್, ಜಗದೀಶ್, ಎಂ ಆರ್ ಬಾಲಕೃಷ್ಣ, ಹಾಗೂ ಇನ್ನಿತರ ಬಿಜೆಪಿ ಕಾರ್ಯಕರ್ತರು ಹಾಜರಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

108 ವರ್ಷದ ಶಾಲೆಯ ಕುಂಟು ನಡಿಗೆ..

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ಅಗ್ರಹಾರದಲ್ಲಿರುವ ಶ್ರೀ ಕೃಷ್ಣ ರಾಜ ಸರ್ಕಾರಿ ಹಿರಿಯ ಪ್ರಾಥಮಿಕ…

2 hours ago

ಎಚ್‌ಪಿವಿ ಲಸಿಕಾ ಅಭಿಯಾನಕ್ಕೆ ಸಿಗದ ನಿರೀಕ್ಷಿತ ಸ್ಪಂದನೆ

ನವೀನ್ ಡಿಸೋಜ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ  ಯೋಜನೆಗೆ ಹಿನ್ನೆಡೆ; ಯೋಜನೆಯ ಸದುಪಯೋಗಕ್ಕೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ: ಜಿಲ್ಲೆಯಲ್ಲಿ ಕೇಂದ್ರ…

2 hours ago

‘ಟ್ರಾನ್ಸ್ ಜೆಂಡರ್ ಹಕ್ಕುಗಳ ತಿದ್ದುಪಡಿ ಮಸೂದೆ ಆತುರದಲ್ಲಿ ಹೇರಲಾದ ಕ್ರಮ’

ಸಂದರ್ಶನ: ರಶ್ಮಿ ಕೋಟಿ " ಟ್ರಾನ್ಸ್‌ಜೆಂಡರ್ ಹಕ್ಕುಗಳ ತಿದ್ದುಪಡಿ ಮಸೂದೆ ದೇಶದಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದೆ. ಸಮುದಾಯದವರೊಂದಿಗೆ ಸಮಾಲೋಚನೆ ಇಲ್ಲದೆ…

2 hours ago

ರಂಗಸಮುದ್ರ ಗ್ರಾಪಂಗೆ ಗಾಂಧಿ ಗ್ರಾಮ ಪುರಸ್ಕಾರ

ಎಂ.ನಾರಾಯಣ ಜಿಲ್ಲಾ ಮಟ್ಟದ ವಿಭಾಗದಲ್ಲಿ ಪ್ರಶಸ್ತಿಗೆ ಪಾತ್ರವಾದ ಮೈಸೂರು ಜಿಲ್ಲೆಯ ಏಕೈಕ ಗ್ರಾಮ ಪಂಚಾಯಿತಿ ತಿ.ನರಸೀಪುರ: ಗ್ರಾಮೀಣ ಆಡಳಿತ ಸಂಸ್ಥೆಯಾಗಿ…

2 hours ago

ರಾಮಕೃಷ್ಣನಗರ ಉದ್ಯಾನ: ಸಂಪೂರ್ಣ ಅಧ್ವಾನ!

ಕೆ.ಪಿ.ಮದನ್ ಮೈಸೂರು: ಬಾಗಿಲಿಗೆ ಬೀಗವಿಲ್ಲದೆ ವರ್ಷ ಪೂರ್ತಿ ತೆರೆದೇ ಇರುವ ಉದ್ಯಾನ.., ನೀರಿಲ್ಲದೆ ನಲುಗುತ್ತಿರುವ ಸಸಿಗಳು.., ಹಸಿರು ಕಂಡು ಪಾರ್ಕ್‌ಗೆ…

2 hours ago