ಮೈಸೂರು

ಭಾರತೀಯ ಜನತಾ ಪಾರ್ಟಿ ಕಚೇರಿಯಲ್ಲಿ ತತ್ವಜ್ಞಾನಿ ದಿನಾಚರಣೆ

ಮೈಸೂರು : ನಗರದ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ
ಆದಿ ಜಗದ್ಗುರು ಶ್ರೀ ಶಂಕರಾಚಾರ್ಯರ ಜಯಂತಿ ಅಂಗವಾಗಿ ತತ್ವಜ್ಞಾನಿ ದಿನಾಚರಣೆ ಆಚರಿಸಲಾಯಿತು.

ಆದಿ ಜಗದ್ಗುರು ಶ್ರೀ ಶಂಕರಾಚಾರ್ಯರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಶಾಸಕರಾದ ಟಿಎಸ್. ಶ್ರೀವತ್ಸ ರವರು , ಶಂಕರಾಚಾರ್ಯರು 1236 ವರ್ಷಗಳ ಹಿಂದೆಯೇ ಜನಿಸಿ ಹಿಂದೂ ಧರ್ಮದ ಉಳಿವಿಗಾಗಿ ಭಾರತವನ್ನ ಕಾಲ್ನಡಿಗೆಯಲ್ಲಿ 3ಬಾರಿ ಪರ್ಯಟನೆ ಮಾಡಿ 4ಪೀಠಗಳನ್ನ ಸ್ಥಾಪಿಸಿದ್ದಾರೆ, ಹಿಂದೂ ಧರ್ಮವನ್ನ ಪುನರತ್ಥಾನಗೊಳಿಸಿದ ಶಂಕರರು ಸಹಸ್ರಾಮಾನದ ಹಿಂದೆಯೇ ಸಾಮಾಜಿಕ ಸಾಮರಸ್ಯ ಸಂದೇಶ ಸಾರಿದ ರಾಮಾನುಜರು ಇಬ್ಬರು ಮಹನೀಯರ ಧ್ಯೇಯ ಸಿದ್ದಾಂತಗಳು ಹಿಂದೂ ಸಮಾಜಕ್ಕೆ ಮಾದರಿಯಾಗಿದೆ ಎಂದರು.

ಧಾರ್ಮಿಕ, ಆಧ್ಯಾತ್ಮಿಕವಲ್ಲದೇ ಸಾಂಸ್ಕೃತಿಕ ಹಾಗೂ ವೈಜ್ಞಾನಿಕವಾಗಿಯೂ ಹಲವಾರು ಕೊಡುಗೆಗಳನ್ನ ನೀಡಿದ್ದಾರೆ. ಈ ಎಲ್ಲಾ ಹನ್ನಲೆಯಿಂದಲೇ  ಪ್ರಧಾನಿ ನರೇಂದ್ರ ಮೋದಿರವರು ಶಂಕರ ಜಯಂತಿಯನ್ನ ವಿಶ್ವ ತತ್ವಜ್ಞಾನಿ ದಿನಾಚರಣೆ ಎಂದು ಘೋಷಿಸಿದರು.

ಬಿಜೆಪಿ ನಗರಾಧ್ಯಕ್ಷರಾದ ಎಲ್. ನಾಗೇಂದ್ರ ಮಾತನಾಡಿ, ಶಂಕರಾಚಾರ್ಯರು ಕೇವಲ 32ವರ್ಷಗಳಿದ್ದರೂ ಸಹ ಅವರು ಹಿಂದೂ ಧರ್ಮವನ್ನು ದೇಶದೆಲ್ಲಡೆ ಪ್ರಜ್ವಲಿಸಿದರು. ಇಂದಿಗೂ‌ ಸಹ ಶಂಕರ ತತ್ವಗಳು‌ ಯುವ ಮನಸ್ಸುಗಳನ್ನ ಸನ್ಮಾರ್ಗದತ್ತ ಕೊಂಡೊಯ್ಯುತ್ತದೆ ಎಂದರು.

ಮಾಜಿ.ಮೈಲಾಕ್ ಅಧ್ಯಕ್ಷ ಎನ್ ವಿ ಪನೀಶ್, ಮಾಜಿ ಮಹಾಪೌರರಾದ ಶಿವಕುಮಾರ್, ಮೈಸೂರು ನಗರ ಪ್ರಧಾನ ಕಾರ್ಯದರ್ಶಿ ಎಚ್‌ ಜಿ ಗಿರಿಧರ್, ಕೇಬಲ್ ಮಹೇಶ್, ಗೋಪಾಲ್ ರಾವ್, ನಗರ ಉಪಾಧ್ಯಕ್ಷ ಜೋಗಿ ಮಂಜು, ಮಾಜಿನಗರ ಪಾಲಿಕಾ ಸದಸ್ಯರಾದ ಪ್ರಮೀಳಾ ಭರತ್,ಬಿ.ವಿ.ಮಂಜುನಾಥ ಚಾಮುಂಡೇಶ್ವರಿ ಕ್ಷೇತ್ರದ ನಗರ ಅಧ್ಯಕ್ಷರಾದ ರಾಕೇಶ್ ಭಟ್, ಚಾಮುಂಡೇಶ್ವರಿ ಕ್ಷೇತ್ರದ ಮಂಡಲ ಅಧ್ಯಕ್ಷ ಪೈ. ಟಿ. ರವಿ,ಯುವಮೊರ್ಚಾ ಅಧ್ಯಕ್ಷ ರಾಕೇಶ್ ಗೌಡ,ಎಸ್ಸಿ ಮೊರ್ಚಾ ಅಧ್ಯಕ್ಷ ಶೈಲೇಂದ್ರ, ಅಜಯ್ ಶಾಸ್ತ್ರಿ, ಕೆ ಎಂ ನಿಶಾಂತ್, ಮೂಡ ಮಾಜಿ ಸದಸ್ಯ ನವೀನ್ ಕುಮಾರ್, ಜಗದೀಶ್, ಎಂ ಆರ್ ಬಾಲಕೃಷ್ಣ, ಹಾಗೂ ಇನ್ನಿತರ ಬಿಜೆಪಿ ಕಾರ್ಯಕರ್ತರು ಹಾಜರಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ನಾಳೆಯಿಂದ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ : ಈ ಬಾರಿ ಏನೆಲ್ಲಾ ವಿಶೇಷ

ಬೆಂಗಳೂರು : ಬೆಂಗಳೂರಿನ ಸಿನಿಮಾ ಪ್ರೇಮಿಗಳು ಕುತೂಹಲ ಮತ್ತು ನಿರೀಕ್ಷೆಯಿಂದ ಕಾಯುತ್ತಿರುವ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 17ನೇ ಅವತರಣಿಕೆಗೆ ವೇದಿಕೆ…

2 mins ago

ರಾಜ್ಯಪಾಲರಿಗೆ ದಿಲ್ಲಿಯಿಂದ ಫೋನ್‌? : ಫೋನ್‌ ಟ್ಯಾಪಿಂಗ್‌ ಬಗ್ಗೆ ವಿಧಾನಸಭೆಯಲ್ಲಿ ಗದ್ದಲ

ಬೆಂಗಳೂರು : ದೆಹಲಿಯಿಂದ ರಾಜಭವನಕ್ಕೆ ಫೋನ್ ಮಾಡಲಾಗಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಾಡಿದ ಆರೋಪವು ವಿಧಾನಸಭೆಯಲ್ಲಿ ಆಡಳಿತ ಮತ್ತು…

37 mins ago

ನಾಳೆ ಸಾರಿಗೆ ನೌಕರರಿಂದ ಬೆಂಗಳೂರು ಚಲೋ: ಬೇಡಿಕೆ ಈಡೇರದಿದ್ದರೆ ಸಾಮೂಹಿಕ ರಾಜೀನಾಮೆ ಎಚ್ಚರಿಕೆ

ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ…

2 hours ago

ಐಎಎಸ್‌ ಅಧಿಕಾರಿ ದಿ.ಮಹಾಂತೇಶ್‌ ಬೀಳಗಿ ಪುತ್ರಿಗೆ ಸರ್ಕಾರಿ ಉದ್ಯೋಗ: ನೇಮಕಾತಿ ಪತ್ರ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇತ್ತೀಚೆಗೆ ಕಾರು ಅಪಘಾತದಲ್ಲಿ ಮೃತಪಟ್ಟ ಐಎಎಸ್‌ ಅಧಿಕಾರಿ ದಿ.ಮಹಾಂತೇಶ್‌ ಬೀಳಗಿ ಅವರ ಪುತ್ರಿಗೆ ಸರ್ಕಾರಿ ಉದ್ಯೋಗ ಲಭಿಸಿದೆ. ಸಿಎಂ…

2 hours ago

ಪದ್ಮಶ್ರೀ ಪುರಸ್ಕೃತ ಅಂಕೇಗೌಡರಿಗೆ ಮಂಡ್ಯ ಜಿಲ್ಲಾಡಳಿತದಿಂದ ಸನ್ಮಾನ

ಮಂಡ್ಯ: 2026ನೇ ಸಾಲಿನ ಪದ್ಮಶ್ರೀ ಪುರಸ್ಕೃತ ಅಂಕೇಗೌಡರಿಗೆ ಮಂಡ್ಯ ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಅಂಕೇಗೌಡ ಅವರನ್ನು ಸನ್ಮಾನಿಸಿ…

2 hours ago

ಅಜಿತ್‌ ಪವಾರ್‌ ಸಾವು: ತನಿಖೆಗೆ ಆಗ್ರಹಿಸಿದ ಮಮತಾ ಬ್ಯಾನರ್ಜಿ

ನವದೆಹಲಿ: ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಅವರ ಸಾವಿಗೆ ಕಾರಣವಾದ ಬಾರಾಮತಿಯ ಭೀಕರ ವಿಮಾನ ಅಪಘಾತದ ಕುರಿತು ಸುಪ್ರೀಂಕೋರ್ಟ್‌ ಮೇಲ್ವಿಚಾರಣೆಯಲ್ಲಿ…

3 hours ago