ಮೈಸೂರು : ನಗರದ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ
ಆದಿ ಜಗದ್ಗುರು ಶ್ರೀ ಶಂಕರಾಚಾರ್ಯರ ಜಯಂತಿ ಅಂಗವಾಗಿ ತತ್ವಜ್ಞಾನಿ ದಿನಾಚರಣೆ ಆಚರಿಸಲಾಯಿತು.
ಆದಿ ಜಗದ್ಗುರು ಶ್ರೀ ಶಂಕರಾಚಾರ್ಯರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಶಾಸಕರಾದ ಟಿಎಸ್. ಶ್ರೀವತ್ಸ ರವರು , ಶಂಕರಾಚಾರ್ಯರು 1236 ವರ್ಷಗಳ ಹಿಂದೆಯೇ ಜನಿಸಿ ಹಿಂದೂ ಧರ್ಮದ ಉಳಿವಿಗಾಗಿ ಭಾರತವನ್ನ ಕಾಲ್ನಡಿಗೆಯಲ್ಲಿ 3ಬಾರಿ ಪರ್ಯಟನೆ ಮಾಡಿ 4ಪೀಠಗಳನ್ನ ಸ್ಥಾಪಿಸಿದ್ದಾರೆ, ಹಿಂದೂ ಧರ್ಮವನ್ನ ಪುನರತ್ಥಾನಗೊಳಿಸಿದ ಶಂಕರರು ಸಹಸ್ರಾಮಾನದ ಹಿಂದೆಯೇ ಸಾಮಾಜಿಕ ಸಾಮರಸ್ಯ ಸಂದೇಶ ಸಾರಿದ ರಾಮಾನುಜರು ಇಬ್ಬರು ಮಹನೀಯರ ಧ್ಯೇಯ ಸಿದ್ದಾಂತಗಳು ಹಿಂದೂ ಸಮಾಜಕ್ಕೆ ಮಾದರಿಯಾಗಿದೆ ಎಂದರು.
ಧಾರ್ಮಿಕ, ಆಧ್ಯಾತ್ಮಿಕವಲ್ಲದೇ ಸಾಂಸ್ಕೃತಿಕ ಹಾಗೂ ವೈಜ್ಞಾನಿಕವಾಗಿಯೂ ಹಲವಾರು ಕೊಡುಗೆಗಳನ್ನ ನೀಡಿದ್ದಾರೆ. ಈ ಎಲ್ಲಾ ಹನ್ನಲೆಯಿಂದಲೇ ಪ್ರಧಾನಿ ನರೇಂದ್ರ ಮೋದಿರವರು ಶಂಕರ ಜಯಂತಿಯನ್ನ ವಿಶ್ವ ತತ್ವಜ್ಞಾನಿ ದಿನಾಚರಣೆ ಎಂದು ಘೋಷಿಸಿದರು.
ಬಿಜೆಪಿ ನಗರಾಧ್ಯಕ್ಷರಾದ ಎಲ್. ನಾಗೇಂದ್ರ ಮಾತನಾಡಿ, ಶಂಕರಾಚಾರ್ಯರು ಕೇವಲ 32ವರ್ಷಗಳಿದ್ದರೂ ಸಹ ಅವರು ಹಿಂದೂ ಧರ್ಮವನ್ನು ದೇಶದೆಲ್ಲಡೆ ಪ್ರಜ್ವಲಿಸಿದರು. ಇಂದಿಗೂ ಸಹ ಶಂಕರ ತತ್ವಗಳು ಯುವ ಮನಸ್ಸುಗಳನ್ನ ಸನ್ಮಾರ್ಗದತ್ತ ಕೊಂಡೊಯ್ಯುತ್ತದೆ ಎಂದರು.
ಮಾಜಿ.ಮೈಲಾಕ್ ಅಧ್ಯಕ್ಷ ಎನ್ ವಿ ಪನೀಶ್, ಮಾಜಿ ಮಹಾಪೌರರಾದ ಶಿವಕುಮಾರ್, ಮೈಸೂರು ನಗರ ಪ್ರಧಾನ ಕಾರ್ಯದರ್ಶಿ ಎಚ್ ಜಿ ಗಿರಿಧರ್, ಕೇಬಲ್ ಮಹೇಶ್, ಗೋಪಾಲ್ ರಾವ್, ನಗರ ಉಪಾಧ್ಯಕ್ಷ ಜೋಗಿ ಮಂಜು, ಮಾಜಿನಗರ ಪಾಲಿಕಾ ಸದಸ್ಯರಾದ ಪ್ರಮೀಳಾ ಭರತ್,ಬಿ.ವಿ.ಮಂಜುನಾಥ ಚಾಮುಂಡೇಶ್ವರಿ ಕ್ಷೇತ್ರದ ನಗರ ಅಧ್ಯಕ್ಷರಾದ ರಾಕೇಶ್ ಭಟ್, ಚಾಮುಂಡೇಶ್ವರಿ ಕ್ಷೇತ್ರದ ಮಂಡಲ ಅಧ್ಯಕ್ಷ ಪೈ. ಟಿ. ರವಿ,ಯುವಮೊರ್ಚಾ ಅಧ್ಯಕ್ಷ ರಾಕೇಶ್ ಗೌಡ,ಎಸ್ಸಿ ಮೊರ್ಚಾ ಅಧ್ಯಕ್ಷ ಶೈಲೇಂದ್ರ, ಅಜಯ್ ಶಾಸ್ತ್ರಿ, ಕೆ ಎಂ ನಿಶಾಂತ್, ಮೂಡ ಮಾಜಿ ಸದಸ್ಯ ನವೀನ್ ಕುಮಾರ್, ಜಗದೀಶ್, ಎಂ ಆರ್ ಬಾಲಕೃಷ್ಣ, ಹಾಗೂ ಇನ್ನಿತರ ಬಿಜೆಪಿ ಕಾರ್ಯಕರ್ತರು ಹಾಜರಿದ್ದರು.
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…