ಮೈಸೂರು

ಪಿರಿಯಾಪಟ್ಟಣ| 10 ಲಕ್ಷ ಮೌಲ್ಯದ ಅಡಿಕೆ ದೋಚಿದ ಖದೀಮರು

ಪಿರಿಯಾಪಟ್ಟಣ: ತಾಲ್ಲೂಕಿನ ಬೈಲುಕುಪ್ಪೆಯಲ್ಲಿ ಖದೀಮರು 10 ಲಕ್ಷ ಮೌಲ್ಯದ ಅಡಿಕೆಯನ್ನು ಕಳ್ಳತನ ಮಾಡಿದ್ದು, ಟಿಬೆಟಿಯನ್‌ ರೈತರೊಬ್ಬರು ಕಂಗಾಲಾಗಿದ್ದಾರೆ.

ಬೈಲಕುಪ್ಪೆಯ ತಿರುಮಲಾಪುರ ಗ್ರಾಮದ ಮುಖ್ಯರಸ್ತೆಯ ಅಂಚಿನಲ್ಲಿರುವ ಟಿಬೆಟಿಯನ್‌ ರೈತರೊಬ್ಬರಿಗೆ ಸೇರಿದ ಅಡಿಕೆ ತೋಟದಲ್ಲಿ ಈ ಘಟನೆ ನಡೆದಿದೆ.

ಸುಮಾರು 2 ಎಕರೆ ಪ್ರದೇಶದಲ್ಲಿ ಕಷ್ಟಪಟ್ಟು ಅಡಿಕೆ ಬೆಳೆಯಲಾಗಿತ್ತು. ಅಡಿಕೆ ಕೊಯ್ಲು ಮಾಡಿ ತೋಟದಲ್ಲೇ ಗುಡ್ಡೆ ಹಾಕಲಾಗಿತ್ತು.

ಎರಡು ಮೂರು ವಾರದಲ್ಲಿ ಹಸಿ ಅಡಿಕೆಯನ್ನು ಮಾರಾಟ ಮಾಡಲು ರೈತ ಸಿದ್ಧತೆ ನಡೆಸಿದ್ದರು. ಆದರೆ ಇದನ್ನು ಗಮನಿಸಿದ ಖದೀಮರು ಒಂದೇ ರಾತ್ರಿಯಲ್ಲಿ ಪ್ಲಾನ್‌ ಮಾಡಿ ಅಡಿಕೆಯನ್ನೆಲ್ಲಾ ಕದ್ದು ಪರಾರಿಯಾಗಿದ್ದಾರೆ.

ಕಷ್ಟಪಟ್ಟು ಬೆಳೆದ ಬೆಳೆ ಕೈತಪ್ಪಿದ್ದರಿಂದ ರೈತ ಈಗ ಕಂಗಾಲಾಗಿದ್ದು, ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಸಾರ್ವಜನಿಕ ಶೌಚಾಲಯಗಳ ಬೀಗ ತೆರವು

ಮೈಸೂರಿನ ಮೆಟ್ರೋಪೋಲ್ ವೃತ್ತದ ಸಮೀಪ ಹಾಗೂ ಕುವೆಂಪುನಗರದ ಉದಯರವಿ ರಸ್ತೆಯಲ್ಲಿರುವ ಸಾರ್ವಜನಿಕ ಶೌಚಾಲಯಗಳಿಗೆ ಬೀಗ ಹಾಕಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಬಗ್ಗೆ…

3 hours ago

ಓದುಗರ ಪತ್ರ: ಬಾಂಬ್ ಬೆದರಿಕೆ: ಕಠಿಣ ಶಿಕ್ಷೆ ನೀಡಿ

ಇತ್ತೀಚಿನ ದಿನಗಳಲ್ಲಿ ಶಾಲಾ ಕಾಲೇಜುಗಳು, ನ್ಯಾಯಾಲಯ ಮೊದಲಾದ ಕಡೆ ಬಾಂಬ್ ಇಡಲಾಗಿದೆ ಎಂದು ದುಷ್ಕರ್ಮಿಗಳು ಫೋನ್, ಇ-ಮೇಲ್ ಮೂಲಕ ಬೆದರಿಕೆ…

3 hours ago

ಓದುಗರ ಪತ್ರ: ದಾಖಲೆ ಸಿದ್ದರಾಮಯ್ಯನವರಿಗೆ ಅಭಿನಂದನೆಗಳು

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಅತಿಹೆಚ್ಚು ದೀರ್ಘಾವಧಿಯ ಮುಖ್ಯಮಂತ್ರಿ ಎಂಬ ದಾಖಲೆ ಬರೆದಿದ್ದಾರೆ. ಇದಕ್ಕೆ ಸಂಬಂಧಿಸಿದ ಹಾಗೆ ರಾಜ್ಯದ ಅನೇಕ…

3 hours ago

ಕಕ್ಕೆಹೊಳೆ, ಗಾಂಧಿ ವೃತ್ತದಲ್ಲಿ ಕ್ಯಾಮೆರಾ ಕಾರ್ಯಾರಂಭ

ಸಂಚಾರ ನಿಯಮ ಉಲ್ಲಂಸಿದವರ ವಿರುದ್ಧ ೮೧ ಪ್ರಕರಣ ದಾಖಲು! ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಹೊಸ ವರ್ಷಾಚರಣೆ ಹಾಗೂ ರಸ್ತೆ ಸುರಕ್ಷತಾ ಸಪ್ತಾಹದ…

3 hours ago

ರಸ್ತೆಗಳು ಗುಂಡಿಮಯ; ಸಂಚಾರ ಅಯೋಮಯ

ಪ್ರಶಾಂತ್ ಎಸ್. ಮೈಸೂರು: ನಗರದ ಸುಗಮ ಸಂಚಾರಕ್ಕಾಗಿ ನಿರ್ಮಿಸಿದ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ವಾಹನ ಸಂಚಾರಕ್ಕೆ ತುಂಬಾ ತೊಡಕಾಗಿದೆ. ಗಂಗೋತ್ರಿ…

3 hours ago

‘ಶಾಲೆಗೆ ಹೋಗಲು ವಾಹನ ವ್ಯವಸ್ಥೆ ಮಾಡಿಕೊಡಿ’

ಕುರುಬನದೊಡ್ಡಿ ಗ್ರಾಮದ ಶಾಲಾ ವಿದ್ಯಾರ್ಥಿಗಳಿಂದ ಸಿಎಂ, ಶಾಸಕರಿಗೆ ಪತ್ರ ಹನೂರು: ತಾಲ್ಲೂಕಿನ ಬೈಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಡೆ ಕುರುಬನದೊಡ್ಡಿ…

3 hours ago