Mysore
24
clear sky

Social Media

ಸೋಮವಾರ, 20 ಏಪ್ರಿಲ 2026
Light
Dark

ಪಿಎಂ-ಸಿಎಂ ಗುಟ್ಟು ರಟ್ಟು ; ಸಂಭಾಷಣೆ ರಹಸ್ಯ ಬಿಚ್ಚಿಟ್ಟ ಸಿಎಂ

ಮೈಸೂರು : ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಭೇಟಿ ನೀಡಿದ್ದ ವೇಳೆ ಸಿಎಂ ಸಿದ್ದರಾಮಯ್ಯ ಅವರ ಕಿವಿಯಲ್ಲಿ ಪಿಸುಗುಟ್ಟುತ್ತಿರುವ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗಿತ್ತು. ಜತೆಗೆ ಚರ್ಚೆಗೂ ಗ್ರಾಸವಾಗಿ, ಸಂಭಾಷಣೆ ನಡೆದದ್ದಾದರೂ ಏನು ಎಂಬ ಕುತುಹಲವೂ ಇತ್ತು. ಇದೀಗ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಸಂಭಾಷಣೆಯ ಗುಟ್ಟು ಬಿಚ್ಚಿಟ್ಟಿದ್ದಾರೆ.

ಈ ಮೂಲಕ ಎಲ್ಲಾ ಕೂತುಹಲಕ್ಕೆ ತೆರೆ ಎಳೆದಿದ್ದಾರೆ. ಮೈಸೂರು ಜಿಲ್ಲೆಯಲ್ಲಿ ಎರಡು ದಿನಗಳ ಪ್ರವಾಸ ಕೈಗೊಂಡಿರುವ ಸಿಎಂ ಸಿದ್ದರಾಮಯ್ಯ ಸೋಮವಾರ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸುತ್ತಾ, ʻಅವರು ನನಗೆ ಮಹಿಳಾ ಮೀಸಲಾತಿ ಬಗ್ಗೆ ನಿಮ್ಮ ಅಭಿಪ್ರಾಯ ಏನು ʼ ಎಂದು ಕೇಳಿದರು. ನಾನು ಮಹಿಳಾ ಮೀಸಲಾತಿ ಪರ ಇದ್ದೇವೆ ʼ ಎಂದು ಹೇಳಿದೆ ಎಂದಿದ್ದಾರೆ.

ಮಹಿಳಾ ಮೀಸಲಾತಿಯನ್ನು ಜಾರಿಗೆ ತರಲು ಬಿಜೆಪಿಗೆ ಇಚ್ಛಾಶಕ್ತಿ ಇಲ್ಲ. ಈ ವಿಷಯದಲ್ಲಿ ಪ್ರಧಾನಿ ಮೋದಿ ಡಬಲ್‌ ಸ್ಟ್ಯಾಂಡ್‌ ಹೊಂದಿದ್ದಾರೆ. ಅವರು ಅಧಿಕಾರಕ್ಕೆ ಬಂದು 12 ವರ್ಷವಾಯಿತು. ಅವರು ಮನಸ್ಸು ಮಾಡಿದ್ದರೆ 2023ರಲ್ಲಿಯೇ ಮಹಿಳಾ ಮೀಸಲಾತಿ ಜಾರಿಗೆ ತರಬಹುದಿತ್ತು. ಈಗ ಜಾರಿ ಮಾಡಲು ಅವಕಾಶವಿಲ್ಲ ಎಂದು ಮನಗಂಡೇ ರಾಜಕೀಯ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.

 

 

Tags:
error: Content is protected !!